ತಿ.ನರಸಿಪುರದಲ್ಲಿ ಮಹದೇವಪ್ಪ ಪುತ್ರ ಸ್ಪರ್ಧಿಸುವುದು ನಿಜವೇ..?
ಮೈಸೂರು, ಏಪ್ರಿಲ್ 14: "ನಾನು ಕಾಂಗ್ರೆಸ್ ಟಿಕೇಟ್ ವಿಚಾರವಾಗಿ ಹೈಕಮಾಂಡ್ ಆದೇಶಕ್ಕೆ ಬದ್ಧನಾಗಿರುತ್ತೇನೆ. ಪಕ್ಷ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸೂಚನೇ ನೀಡುತ್ತೋ ಅಲ್ಲಿ ನಿಲ್ಲುತ್ತೇನೆ. ಒಂದು ವೇಳೆ ಟಿಕೇಟ್ ಕೊಡದಿದ್ದರೆ ಪಕ್ಷಕ್ಕಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ಶಾಸಕ ಮತ್ತು ಲೋಕೋಪಯೋಗಿ ಸಚಿವ ಡಾ.ಹೆಚ್ .ಸಿ ಮಹದೇಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು(ಏ.14) ಪತ್ರಕರ್ತರೊಂದಿಗೆ ಮಾತನಾಡಿದ ಅವರು, "ನಾನು ಇಂತಹದ್ದೇ ಕ್ಷೇತ್ರಕ್ಕೆ ಟಿಕೇಟ್ ಕೊಡಿ ಅಂತ ಯಾವುದೇ ಅರ್ಜಿ ಹಾಕಿಲ್ಲ. ತಮ್ಮ ಮಗ ಸುನೀಲ್ ಬೋಸ್ ಜೆಡಿಎಸ್ ಸೇರುವ ಬಗ್ಗೆ ಚರ್ಚೆ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಆತ ಎಂದಿಗೂ ಆ ರೀತಿ ನಿರ್ಧಾರ ಮಾಡಿಲ್ಲ" ಎಂದು ತಮ್ಮ ಹಾಗೂ ಮಗನ ಸ್ಪರ್ಧೆ ವಿಚಾರದ ಗುಟ್ಟನ್ನು ಬಿಟ್ಟುಕೊಡದೆ ಜಾಣ ಪ್ರತಿಕ್ರಿಯೆ ನೀಡಿದರು ಮಹದೇವಪ್ಪ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
"ದೇಶದಲ್ಲಿ ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಣೆ ಮಾಡಬೇಕು. ಪ್ರಜಾಪ್ರಭುತ್ವವನ್ನು ಉಳಿಸಿ ಕೋಮು ಶಕ್ತಿಯನ್ನು ಮಟ್ಟಹಾಕಬೇಕಿದೆ. ಹಾಗಾಗಿ ಜಾತ್ಯತೀತ ಶಕ್ತಿಗಳು ಸಂಘಟನಾತ್ಮಕ ಹೋರಾಟಗಳ ಮೂಲಕ ಹೋರಾಡಬೇಕೆಂಬ ಸಿದ್ಧಾಂತವೇ ಅಂಬೇಡ್ಕರ್ ಸಿದ್ಧಾಂತ" ಎಂದು ಅಂಬೇಡ್ಕರ್ ಜಯಂತಿಯನ್ನು ನೆನಪಿಸಿಕೊಂಡರು.

ಮಹದೇವಪ್ಪ ಅವರು ತಮ್ಮ ಮಗ ಸುನಿಲ್ ಬೋಸ್ ಅವರಿಗೆ ತಮ್ಮ ಟಿ ನರಸಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟು, ತಾವು ಬೆಂಗಳೂರಿನ ಸಿವಿ ರಾಮನ್ ನಗರದಿಂದ ಸ್ಪರ್ಧಿಸುತ್ತಾರೆ, ಈ ಸಂಬಂಧ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಹೈಕಮಾಂಡ್ ಶಾಸಕರ ಮಕ್ಕಳಿಗೆ ಟಿಕೇಟ್ ನೀಡಲು ಮನಸ್ಸು ಮಾಡದಿರುವುದರಿಂದ ಅವರ ನಡೆ ಬದಲಾಗಿದೆ ಎನ್ನಲಾಗಿದೆ. ಏ.14 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳಿರುವುದರಿಂದ ಯಾರ್ಯಾರಿಗೆ ಯಾವ್ಯಾವ ಕ್ಷೇತ್ರ ಎಂಬ ಕುರಿತು ಸ್ಪಷ್ಟ ಚಿತ್ರಣ ದೊರಕಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications