ಅಣ್ಣನ ವಿರುದ್ಧ ವರದಕ್ಷಿಣೆ ಕೇಸ್ : ಅತ್ತಿಗೆಗೆ ಮಟನ್ ಮಚ್ಚಿನೇಟು
ಮೈಸೂರು, ಜುಲೈ 21 : ಅಣ್ಣನ ವಿರುದ್ಧ ಅತ್ತಿಗೆ ವರದಕ್ಷಿಣೆ ದೂರು ನೀಡಿ ಜೈಲು ಪಾಲಾಗುವಂತೆ ಮಾಡಿದ್ದರಿಂದ ಆಕ್ರೋಶಗೊಂಡ ಸಹೋದರ, ಅತ್ತಿಗೆ ಹಾಗೂ ಆಕೆಯ ಕುಟುಂಬ ಸದಸ್ಯರ ಮೇಲೆ ಮಟನ್ ಕತ್ತರಿಸುವ ಮಚ್ಚಿನಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಓರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರಿನ ಶಾಂತಿನಗರದಲ್ಲಿ ಘಟನೆ ನಡೆದಿದ್ದು, ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಘಟನೆ ವಿವರ : ಅಣ್ಣನ ಮೇಲೆ ಅತ್ತಿಗೆ ವರದಕ್ಷಿಣೆ ಕೇಸ್ ದಾಖಲಿಸಿದ್ದರು. ಅಣ್ಣ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ. ಇದರಿಂದ ಕೆಂಡಾಮಂಡಲವಾದ ಸಹೋದರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆ ಮತ್ತು ಅವರ ತಾಯಿ, ತಂದೆ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆಯಿಂದ ತೀವ್ರ ಅಸ್ವಸ್ಥರಾದ ಅತ್ತಿಗೆಯ ತಂದೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವಿಗೀಡಾಗಿದರು. ಗಂಭೀರವಾಗಿ ಗಾಯಗೊಂಡಿರುವ ಅತ್ತಿಗೆ ಹಾಗೂ ಅವರ ತಾಯಿಯ ಸ್ಥಿತಿ ಕೂಡ ಚಿಂತಾಜನಕವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಕ್ಷಿಣೆ ಕಿರುಕುಳದ ಆರೋಪ ಹೊತ್ತಿರುವ ಸೈಯದ್ ಸುಹೇಲ್ ಹಾಗೂ ನಫೀಜಾ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಸಂಸಾರದಲ್ಲಿ ವೈಮನಸ್ಯ ಮೂಡಿದ್ದರಿಂದ 3 ವರ್ಷಗಳ ಹಿಂದೆ ಈ ದಂಪತಿ ಬೇರ್ಪಟ್ಟಿದ್ದರು. ಪರಿಹಾರಕ್ಕಾಗಿ ಪತ್ನಿ ನಫೀಜಾ ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡಿಸಿದ ನ್ಯಾಯಾಲಯ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ, ಆರೋಪಿ ಸೈಯದ್ ಸುಹೇಲ್ ಪರಿಹಾರ ನೀಡದೆ 80 ಸಾವಿರ ರೂ. ಬಾಕಿ ಉಳಿಸಿಕೊಂಡಿದ್ದ. ಇದನ್ನು ಪ್ರಶ್ನಿಸಿ ಮತ್ತೆ ನಫೀಜಾ ನ್ಯಾಯಾಲಯದ ಮೊರೆ ಹೋಗಿದ್ದರು. ಶುಕ್ರವಾರ ನ್ಯಾಯಾಲಯದಲ್ಲಿ ಸೈಯದ್ ಸುಹೇಲ್ ಗೆ ನ್ಯಾಯಾಂಗ ಬಂಧನ ಶಿಕ್ಷೆ ನೀಡಲಾಗಿತ್ತು.
ಇದರಿಂದ ಬೇಸತ್ತ ಸೈಯದ್ ಸುಹೇಲ್ ಸಹೋದರ ಸೈಯದ್ ಇರ್ಫಾನ್, ಅತ್ತಿಗೆ ಮನೆಗೆ ಬಂದು ಮಚ್ಚಿನಲ್ಲಿ ಹಲ್ಲೆ ನಡೆಸಿದ್ದಾನೆ. ಮಾವ ಅಸ್ಲಂ ಪಾಷಾ ಸಾವನ್ನಪ್ಪಿದರೆ, ಅತ್ತೆ ದಿಲ್ಶಾನ್ ಬಾನು, ಅತ್ತಿಗೆ ನಫೀಜಾ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲ್ಲೆ ನಡೆಸಿದ ಸೈಯದ್ ಸುಹೇಲ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮಟನ್ ಅಂಗಡಿಯಲ್ಲಿ ಕೆಲಸ ಮಾಡುವ ಸೈಯದ್ ಸುಹೇಲ್ ಮಾಂಸ ಕತ್ತರಿಸುವ ಮಚ್ಚಿನಲ್ಲಿ ಹಲ್ಲೆ ಮಾಡಿದ್ದಾನೆ. ಸದ್ಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications