ಅಣ್ಣನ ವಿರುದ್ಧ ವರದಕ್ಷಿಣೆ ಕೇಸ್ : ಅತ್ತಿಗೆಗೆ ಮಟನ್ ಮಚ್ಚಿನೇಟು
ಮೈಸೂರು, ಜುಲೈ 21 : ಅಣ್ಣನ ವಿರುದ್ಧ ಅತ್ತಿಗೆ ವರದಕ್ಷಿಣೆ ದೂರು ನೀಡಿ ಜೈಲು ಪಾಲಾಗುವಂತೆ ಮಾಡಿದ್ದರಿಂದ ಆಕ್ರೋಶಗೊಂಡ ಸಹೋದರ, ಅತ್ತಿಗೆ ಹಾಗೂ ಆಕೆಯ ಕುಟುಂಬ ಸದಸ್ಯರ ಮೇಲೆ ಮಟನ್ ಕತ್ತರಿಸುವ ಮಚ್ಚಿನಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಓರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೈಸೂರಿನ ಶಾಂತಿನಗರದಲ್ಲಿ ಘಟನೆ ನಡೆದಿದ್ದು, ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಘಟನೆ ವಿವರ : ಅಣ್ಣನ ಮೇಲೆ ಅತ್ತಿಗೆ ವರದಕ್ಷಿಣೆ ಕೇಸ್ ದಾಖಲಿಸಿದ್ದರು. ಅಣ್ಣ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ. ಇದರಿಂದ ಕೆಂಡಾಮಂಡಲವಾದ ಸಹೋದರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆ ಮತ್ತು ಅವರ ತಾಯಿ, ತಂದೆ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆಯಿಂದ ತೀವ್ರ ಅಸ್ವಸ್ಥರಾದ ಅತ್ತಿಗೆಯ ತಂದೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಾವಿಗೀಡಾಗಿದರು. ಗಂಭೀರವಾಗಿ ಗಾಯಗೊಂಡಿರುವ ಅತ್ತಿಗೆ ಹಾಗೂ ಅವರ ತಾಯಿಯ ಸ್ಥಿತಿ ಕೂಡ ಚಿಂತಾಜನಕವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಕ್ಷಿಣೆ ಕಿರುಕುಳದ ಆರೋಪ ಹೊತ್ತಿರುವ ಸೈಯದ್ ಸುಹೇಲ್ ಹಾಗೂ ನಫೀಜಾ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಸಂಸಾರದಲ್ಲಿ ವೈಮನಸ್ಯ ಮೂಡಿದ್ದರಿಂದ 3 ವರ್ಷಗಳ ಹಿಂದೆ ಈ ದಂಪತಿ ಬೇರ್ಪಟ್ಟಿದ್ದರು. ಪರಿಹಾರಕ್ಕಾಗಿ ಪತ್ನಿ ನಫೀಜಾ ನ್ಯಾಯಾಲಯದ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡಿಸಿದ ನ್ಯಾಯಾಲಯ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ, ಆರೋಪಿ ಸೈಯದ್ ಸುಹೇಲ್ ಪರಿಹಾರ ನೀಡದೆ 80 ಸಾವಿರ ರೂ. ಬಾಕಿ ಉಳಿಸಿಕೊಂಡಿದ್ದ. ಇದನ್ನು ಪ್ರಶ್ನಿಸಿ ಮತ್ತೆ ನಫೀಜಾ ನ್ಯಾಯಾಲಯದ ಮೊರೆ ಹೋಗಿದ್ದರು. ಶುಕ್ರವಾರ ನ್ಯಾಯಾಲಯದಲ್ಲಿ ಸೈಯದ್ ಸುಹೇಲ್ ಗೆ ನ್ಯಾಯಾಂಗ ಬಂಧನ ಶಿಕ್ಷೆ ನೀಡಲಾಗಿತ್ತು.
ಇದರಿಂದ ಬೇಸತ್ತ ಸೈಯದ್ ಸುಹೇಲ್ ಸಹೋದರ ಸೈಯದ್ ಇರ್ಫಾನ್, ಅತ್ತಿಗೆ ಮನೆಗೆ ಬಂದು ಮಚ್ಚಿನಲ್ಲಿ ಹಲ್ಲೆ ನಡೆಸಿದ್ದಾನೆ. ಮಾವ ಅಸ್ಲಂ ಪಾಷಾ ಸಾವನ್ನಪ್ಪಿದರೆ, ಅತ್ತೆ ದಿಲ್ಶಾನ್ ಬಾನು, ಅತ್ತಿಗೆ ನಫೀಜಾ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲ್ಲೆ ನಡೆಸಿದ ಸೈಯದ್ ಸುಹೇಲ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮಟನ್ ಅಂಗಡಿಯಲ್ಲಿ ಕೆಲಸ ಮಾಡುವ ಸೈಯದ್ ಸುಹೇಲ್ ಮಾಂಸ ಕತ್ತರಿಸುವ ಮಚ್ಚಿನಲ್ಲಿ ಹಲ್ಲೆ ಮಾಡಿದ್ದಾನೆ. ಸದ್ಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications