ಇನ್ನೂ ನಿಂತಿಲ್ಲ ವರದಕ್ಷಿಣೆ ಕಿರುಕುಳವೆಂಬ ಪೆಡಂಭೂತ
ಮೈಸೂರು, ಜುಲೈ 10: ಇಡೀ ಮಹಿಳಾ ಸಮಾಜಕ್ಕೆ ಶಾಪವಾಗಿದ್ದ ವರದಕ್ಷಿಣೆ ಕಿರುಕುಳ ದಿನೇ ದಿನೇ ವಿದ್ಯಾವಂತ ಜಿಲ್ಲೆಗಳಲ್ಲೇ ಹೆಚ್ಚುತ್ತಿದೆ. ಇದುವರೆಗೂ ಕಳೆದ ನಾಲ್ಕು ವರ್ಷದಿಂದೀಚೆಗೆ 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂಬುದು ಬೇಸರದ ಸಂಗತಿ.
1961ರಲ್ಲಿಯೇ ವರದಕ್ಷಿಣೆ ನಿಯಂತ್ರಣಕ್ಕೆ ವರದಕ್ಷಿಣೆ ನಿಷೇಧ ಅಧಿನಿಯಮ ಜಾರಿಗೆ ಬಂದರೂ ಈ ಪಿಡುಗನ್ನು ನಿಯಂತ್ರಿಸಲು ಈವರೆಗೂ ಸಾಧ್ಯವಾಗಿಲ್ಲ. ವರನ ಕುಟುಂಬದ ಹಣದ ವ್ಯಾಮೋಹಕ್ಕೆ ವಧುವಿನ ಬಾಳು ನರಕದ ಕೂಪವಾಗಬಾರದೆಂಬ ಉದ್ದೇಶದಿಂದ ಕಾನೂನು ಜಾರಿ ಮಾಡಲಾಗಿದ್ದು, ಆರೋಪಿಗಳಿಗೆ ಜಾಮೀನು ರಹಿತ ಶಿಕ್ಷೆ ನೀಡಲಾಗುತ್ತದೆ. ಇಷ್ಟಾಗಿಯೂ ವರದಕ್ಷಿಣೆ ಕಿರುಕುಳ ಮುಂದುವರಿದಿದೆ.
ವರದಕ್ಷಿಣೆ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ 2016ರಲ್ಲಿ ಒಟ್ಟು 2 ಸಾವಿರಕ್ಕೂ ಹೆಚ್ಚು ವರದಕ್ಷಿಣೆ ಕಿರುಕುಳ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಇದರಲ್ಲಿ 60ಕ್ಕೂ ಹೆಚ್ಚು ಪ್ರಕರಣ ಜಿಲ್ಲೆಯದ್ದಾಗಿದೆ. ಅದೇ ರೀತಿ, 2017ರಲ್ಲಿ ರಾಜ್ಯದಲ್ಲಿ ಬೆಳಕಿಗೆ ಬಂದ 2,111 ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜಿಲ್ಲೆಯಲ್ಲಿ 50 ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 2,095 ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿನ 50ಕ್ಕೂ ಹೆಚ್ಚು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ. ಈ ವರ್ಷ ಕೂಡ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮುಂದುವರೆದಿದ್ದು, ಈವರೆಗೆ 10ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಅಲ್ಲದೇ ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ ಪ್ರಕರಣವೂ ಹೆಚ್ಚಾಗುತ್ತಲೇ ಇದೆ.

ವರದಕ್ಷಿಣೆ ಪಡೆದು ಹಾಗೂ ನೀಡಿ ವಿವಾಹವಾಗುವುದು ಅಪರಾಧ ಎಂಬ ಅರಿವು ಯುವಜನತೆಯಲ್ಲಿ ಮೂಡಬೇಕು. ಮಕ್ಕಳ ಹಿತದೃಷ್ಟಿಯಿಂದ ಕುಟುಂಬದ ಸದಸ್ಯರು ಕೂಡ ವರದಕ್ಷಿಣೆ ವಿರುದ್ಧ ಸಮರ ಸಾರಬೇಕು. ವರದಕ್ಷಿಣೆ ಬೇಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಬೇಕು. ನೀಡುವವರಿಲ್ಲದಿದ್ದರೆ ತೆಗೆದುಕೊಳ್ಳುವವರು ಕೂಡ ಇರುವುದಿಲ್ಲ' ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವರದಕ್ಷಿಣೆ ಇನ್ನೂ ಜೀವಂತವಾಗಿದೆ. ಹೇಗಾದರೂ ಮಾಡಿ ಆದಷ್ಟು ಬೇಗ ಮಗಳ ವಿವಾಹ ಮಾಡಬೇಕೆಂಬ ಮನೋಭಾವ ಹೆತ್ತವರಲ್ಲಿದೆ. ಇದು ವರದಕ್ಷಿಣೆ ಜೀವಂತವಾಗಿರಲು ಕಾರಣವಾಗಿದೆ. ಈ ಪಿಡುಗು ತೊಲಗಬೇಕಾದರೆ ಜನಜಾಗೃತಿ ಅತ್ಯಗತ್ಯ. ವರದಕ್ಷಿಣೆ ನೀಡುವ ಮತ್ತು ತೆಗೆದುಕೊಳ್ಳುವ ಅಪರಾಧಕ್ಕೆ ಕನಿಷ್ಠ ಐದು ವರ್ಷ ಕಾರಾಗೃಹವಾಸ ಹಾಗೂ 15 ಸಾವಿರದವರೆಗೆ ಜುಲ್ಮಾನೆ ಹಾಕಲಾಗುತ್ತದಾದರೂ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ವರದಕ್ಷಿಣೆ ಕಿರುಕುಳ ನಡೆಯುತ್ತಿದೆ.
ಅನೈತಿಕ ಸಂಬಂಧ, ಅತ್ತೆ-ಮಾವನೊಂದಿಗೆ ಹೊಂದಾಣಿಕೆ ಕೊರತೆ, ಕುಟುಂಬ ಕಲಹವನ್ನು ವರದಕ್ಷಿಣೆ ಪ್ರಕರಣ ಎಂದು ಉಲ್ಲೇಖಿಸಲಾಗುತ್ತಿದೆ. ಇದರೊಟ್ಟಿಗೆ ಪ್ರೇಮ ವಿವಾಹ, ಅಂತರ್ಜಾತಿ ವಿವಾಹದಲ್ಲಿ ಕೂಡ ಸಂಬಂಧ ಹಳಸಿ, ದೂರು ದಾಖಲಿಸುವ ಸಾಧ್ಯತೆ ಇದೆ. ಆದರೆ ಇದ್ಯಾವುದೂ ವರದಕ್ಷಿಣೆ ಕಿರುಕುಳವಲ್ಲ. ಈ ಕುರಿತಾಗಿ ಕಾನೂನನ್ನು ಅಧಿಕಾರಿಗಳು ಮತ್ತಷ್ಟು ಬಿಗಿಗೊಳಿಸುವುದರಿಂದ ಈ ಪಿಡುಗನ್ನು ಇಳಿಮುಖಗೊಳಿಸಬಹುದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications