ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ನವವಿವಾಹಿತೆ
ಮೈಸೂರು, ಜೂನ್ 2 : ವರದಕ್ಷಿಣೆ ಕಿರುಕುಳಕ್ಕೆ ನವ ವಿವಾಹಿತೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೆ.ಆರ್.ನಗರ ಗಂಧನಹಳ್ಳಿ ನಿವಾಸಿಯಾದ ಸುಮಿತ್ರಮ್ಮ ನಾಗರಾಜೇಗೌಡರ ಪುತ್ರಿ ಹರ್ಷಿತಾ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ನವ ವಿವಾಹಿತೆ. ಹರ್ಷಿತಾ ಎಂ.ಎ. ಬಿಇಡಿ ಪಧವಿದರೆಯಾಗಿದ್ದು ಕಳೆದ 6 ತಿಂಗಳ ಹಿಂದಷ್ಟೆ ರಾಮನಗರ ದೇವರಹಳ್ಳಿ ನಿವಾಸಿ ಬಿ.ಇ. ಪಧವಿದರ ಹರ್ಷಿತ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ವರದಕ್ಷಿಣೆ ಜೊತೆ ಕೆ.ಆರ್.ನಗರದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.
ಈ ಮಧ್ಯೆ ಮದುವೆಯಾದ ಮೂರು ತಿಂಗಳಿಗೆ ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ತಡರಾತ್ರಿ ಪತಿ ಹರ್ಷಿತ್ ನಿವಾಸ ದೇವರಹಳ್ಳಿಯಲ್ಲಿ ಯುವತಿ ಮೃತದೇಹ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಪತಿ ಹರ್ಷಿತ್, ಮಾವ ರಾಮಕೃಷ್ಣಯ್ಯ, ಅತ್ತೆ ಸರೋಜಮ್ಮ ಮೇಲೆ ಕೊಲೆ ಆರೋಪ ಕೇಳಿ ಬಂದಿದ್ದು ಬಲವಂತವಾಗಿ ವಿಷದ ಮಾತ್ರೆ ಕುಡಿಸಿ ಹರ್ಷಿತಾಳನ್ನ ಕೊಲೆ ಮಾಡಿದ್ದಾರೆ ಎಂದು ಮೃತ ಹರ್ಷಿತಾ ಪೋಷಕರು ಕಿಡಿಕಾರಿದ್ದಾರೆ.
ಹರ್ಷಿತ ಸಾವನ್ನಪ್ಪಿದ ಬಳಿಕ ಪತಿ, ಮಾವ ಅತ್ತೆ ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿ ಹರ್ಷಿತ್ ಕುಟುಂಬಸ್ಥರನ್ನ ಬಂಧಿಸುವಂತೆ ಯುವತಿ ಪೋಷಕರು ಆಗ್ರಹಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications