ಸಚಿವ ಮಹದೇವಪ್ಪ ಮನೆಗೆ ಭೇಟಿ ನೀಡಿದ್ದ ಬಗ್ಗೆ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರ ಮನೆಯಲ್ಲಿ ಭೋಜನಕ್ಕೆ ಆಹ್ವಾನಿಸಿದ್ದರು. ಅದಕ್ಕೆ ಬೆಲೆ ಕೊಟ್ಟು ನಾವು ಊಟಕ್ಕೆ ಹೋಗಿದ್ದೆವೆ, ಇದಕ್ಕೆ ಯಾವುದೇ ರಾಜಕೀಯದ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಅವರು, ಭೋಜನ ಕೂಟದಲ್ಲಿ ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್.ಕೃಷ್ಣ ಮೂರ್ತಿ ಇದ್ದೆವು. ಈ ವೇಳೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

ನಿಮಗೆ ಸಿಎಂ ಆಗುವ ಆಸೆ ಇಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದರ ಪ್ರಶ್ನೆಯೇ ಇಲ್ಲ. ದಲಿತ ಸಿಎಂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದರು. ಹರಿಯಾಣ ಸೋಲು ಸಂಬಂಧ ಕಾಂಗ್ರೆಸ್ ನಾಯಕ ಕೋಳಿವಾಡ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಕೋಳಿವಾಡ ಹೇಳಿಕೆ ವೈಯಕ್ತಿಕವಾದುದು. ಹರಿಯಾಣ ಸೋಲಿಗೆ ಬೇರೆ ಕಾರಣಗಳಿವೆ. ಅದನ್ನು ಹೈಕಮಾಂಡ್ ವಿಶ್ಲೇಷಣೆ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ನನ್ನ ಪುತ್ರ ಸುನೀಲ್ ಬೋಸ್ ಮೊದಲ ಬಾರಿಗೆ ಸಂಸದರಾಗಿರುವ ಹಿನ್ನೆಲೆ ಪಕ್ಷದ ಹಿರಿಯರಿಗೆ ಭೋಜನ ಕೂಟ ಏರ್ಪಡಿಸಿದ್ದರು. ಹಾಗಾಗಿ ಭೋಜನ ಕೂಟದಲ್ಲಿ ನಾನು, ನನ್ನ ಸಹೋದ್ಯೋಗಿ ಮಿತ್ರರಾದ ಡಾ.ಕೆ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಒಟ್ಟಿಗೆ ಊಟ ಮಾಡಿದೆವು ಎಂದರು.
ಪರಮೇಶ್ವರ್ ಅವರು ಅರಮನೆ ಆವರಣದಲ್ಲಿ ಏರ್ಪಡಿಸಿದ್ದ ಪೊಲೀಸ್ ಬ್ಯಾಂಡ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಗೆಯೇ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮೈಸೂರಿಗೆ ಆಗಮಿಸಿದ್ದರು. ಇದೇ ಸಂದರ್ಭ ರಸ್ತೆ, ಕುಡಿಯುವ ನೀರು ಅಂತ ಬೇರೆ ಬೇರೆ ಕೆಲಸಕ್ಕೆ ಶಾಸಕರನ್ನು ಭೇಟಿಯಾಗಿದ್ದಾರೆ ಅಷ್ಟೇ ಎಂದು ಹೇಳಿದರು.
ಸಿಎಂ ಬದಲಾವಣೆ ಚರ್ಚೆ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿರುವ ಹಿನ್ನಲೆಯಲ್ಲಿಯಲ್ಲಿ ಈ ಮೂವರು ಸಚಿವರ ಭೇಟಿ ಮಹತ್ವ ಪಡೆದುಕೊಂಡಿದೆ. ಸತೀಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬೇಟಿ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು, ಅದಕ್ಕೂ ಹಿಂದಿನ ದಿನ ತುಮಕೂರಿನಲ್ಲಿ ಡಾ. ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಬಳಿಕ ಮೈಸೂರಿನಲ್ಲಿ ಹಿರಿಯ ನಾಯಕ, ಸಚಿವ ಡಾ. ಮಹದೇವಪ್ಪ ಅವರ ಮನೆಯಲ್ಲಿ ಸತೀಶ್ ಜಾರಕಿಹೊಳಿ ಮತ್ತು ಡಾ. ಜಿ ಪರಮೇಶ್ವರ್ ಭೇಟಿಯಾಗಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿತ್ತು. ಸತೀಶ್ ಜಾರಕಿಹೊಳಿ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಎಂ ಬದಲಾವಣೆ ಬಗ್ಗೆ ನಮಗೆ ಗೊತ್ತಿಲ್ಲ, ಹೈಕಮಾಂಡ್ಗೆ ಕೇಳಬೇಕು. ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎಂದು ಹೇಳಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications