ನಾನು ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ: ಡಾ. ಮಹದೇವಪ್ಪ ಸ್ಪಷ್ಟನೆ
ಮೈಸೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಸಿದ್ಧತೆ ನಡೆಯುತ್ತಿದೆ. ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಮಂತ್ರಿಗಳು ಸ್ಪರ್ಧಿಸಬೇಕೆಂದು ಎಲ್ಲೂ ಚರ್ಚೆಯಾಗಿಲ್ಲ. ಒತ್ತಾಯ ಕೂಡ ಇಲ್ಲ. ಗೆಲ್ಲುವ ಅವಕಾಶ ಆಧರಿಸಿ ಅಭ್ಯರ್ಥಿಗಳ ಆಯ್ಕೆಯಾಗಲಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಆದರೆ, ಇದುವರೆಗೂ ಸಿಇಸಿ ಸಭೆಯೇ ನಡೆದಿಲ್ಲ. ಹಾಗಾಗಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದೆ ಎಂಬ ವಿಚಾರ ಸತ್ಯಕ್ಕೆ ದೂರವಾದುದು ಎಂದರು.
"ನನ್ನ ಮಗ ಸುನಿಲ್ ಬೋಸ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ. ಸುನಿಲ್ ಬೋಸ್ಗೆ 3 ಬಾರಿ ವಿಧಾನಸಭೆ ಚುನಾವಣೆಯ ಟಿಕೆಟ್ ಕೊಟ್ಟಿಲ್ಲ. ಆದರೂ ಬೇಸರ ಮಾಡಿಕೊಳ್ಳದೆ ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾನೆ. ಅವನಿಗಿಂತ ಕಿರಿಯರು, ಪಕ್ಷದ ಸದಸ್ಯರಲ್ಲದವರೂ ಕಾಂಗ್ರೆಸ್ನಲ್ಲಿ ಶಾಸಕರಾಗಿದ್ದಾರೆ. ನನ್ನ ಮಗನಿಗೇ ಟಿಕೆಟ್ ಕೊಡಿ ಎಂದು ನಾನು ಎಂದೂ ಶಿಫಾರಸು ಮಾಡಿಲ್ಲ" ಎಂದರು.
ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಧ್ರುವ ನಾರಾಯಣ್ ಹಠಾತ್ ನಿಧನದ ನಂತರ ಅವರ ಮಗ ದರ್ಶನ್ಗೆ ಟಿಕೆಟ್ ನೀಡಲು ಶಿಫಾರಸು ಮಾಡಿದೆ. ಸ್ವತಃ ಸುನಿಲ್ ಬೋಸ್ ದರ್ಶನ್ಗೆ ಟಿಕೆಟ್ ಕೊಡುವಂತೆ ಹೇಳಿದ. ನಮ್ಮ ಪಕ್ಷದ ಸದಸ್ಯರಲ್ಲದ ಕಳಲೆ ಕೇಶವಮೂರ್ತಿಯನ್ನು ಕಾಂಗ್ರೆಸ್ಗೆ ಕರೆತಂದಾಗ, ನಂಜನಗೂಡು ಉಪಚುನಾವಣೆಯಲ್ಲಿ ಸುನಿಲ್ ಬೋಸ್ ಕೆಲಸ ಮಾಡಿ ಗೆಲ್ಲಿಸಿದ್ದಾನೆ ಎಂದರು.
ಕಾಂಗ್ರೆಸ್ ನಾಯಕರು ಮಾಂಸ ತಿಂದು ಸುತ್ತೂರಿಗೆ ಭೇಟಿ ನೀಡಿದ್ದಾರೆಂಬ ವಿಚಾರಕ್ಕೆ ಕುಪಿತರಾದ ಸಚಿವ ಮಹದೇವಪ್ಪ ಅವರು, "ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು" ಎಂದು ಹೇಳಿದರು.
ಕೆರೆಗೋಡು ಧ್ವಜ ವಿವಾದ: ಮಂಡ್ಯದ ಕೆರೆಗೋಡಿನಲ್ಲಿ ಧ್ವಜ ಸ್ತಂಭ ತೆರವು ವಿರೋಧಿಸಿ ಮಂಡ್ಯ ಬಂದ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ ಮಹದೇವಪ್ಪ, ಧಾರ್ಮಿಕ ಆಚಾರ, ವಿಚಾರಗಳನ್ನು ರಾಜಕೀಯಗೊಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನಕ್ಕೆ ಶೋಭೆ ತರುವುದಿಲ್ಲ. ಧರ್ಮ, ದೇವರ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಮಾಡಿಕೊಡಬಾರದು. ಮಂಡ್ಯ ಪ್ರಗತಿಪರ ಜಿಲ್ಲೆಯಾಗಿದೆ. ಅಲ್ಲಿನ ಜನರು ಸೌಹಾರ್ದತೆ, ಒಗ್ಗಟ್ಟು ಕಾಪಾಡಿಕೊಳ್ಳಬೇಕು, ಎಂದರು.
ಕಾಂಗ್ರೆಸ್ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳ ಪಕ್ಷ. ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ. ಬಿಜೆಪಿಯವರು ಜೆಡಿಎಸ್ ಜತೆ ಸೇರಿದ ಬಳಿಕ ಬಲ ಹೆಚ್ಚಿಸಿಕೊಳ್ಳಲು ಮುಗ್ಧ ಜನರನ್ನು ಬಲಿಪಶು ಮಾಡುವುದು ಸರಿಯಲ್ಲ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications