ಸಿರಿಧಾನ್ಯ ಮೂಲಕ ಕ್ಯಾನ್ಸರ್ಗೆ ಔಷಧಿಕೊಡುವ ಮೈಸೂರಿನ ಡಾ.ಖಾದರ್
ಆರೋಗ್ಯಯುತ ಸಮಾಜ ನಿರ್ಮಾಣವಾಗಬೇಕೆಂಬು ಆಶಯ ಹೊಂದಿರುವ ಮೈಸೂರು ಭಾಗದ ವೈದ್ಯ ಖಾದರ್ ವಿಜ್ಞಾನ ಸಂತರಾಗಿದ್ದಾರೆ. ತಮ್ಮಲ್ಲಿರುವ ಜ್ಞಾನವನ್ನು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸಂವಹನ ಮಾಡುವ ಚತುರತೆಯನ್ನು ಕರಗತ ಮಾಡಿಕೊಂಡಿರುವ ಅವರು ದೇಶಿ ಆಹಾರವಾದ ಸಿರಿಧಾನ್ಯದಿಂದ ಹಲವು ರೋಗಗಳಿಗೆ ರಾಮಬಾಣ ಎಂಬುದನ್ನು ತಿಳಿದು, ಅದರಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿದ್ದಾರೆ. ನಾರಿನಾಂಶ ಇರುವ ನವಣೆ, ಸಾಮೆ, ಅರ್ಕ, ಕೊರಲು, ಬರಗು, ಊದಲು, ರಾಗಿ.. ಮುಂತಾದ ಸಿರಿಧಾನ್ಯಗಳಿಂದ ಹಲವು ವ್ಯಾಧಿಗಳಿಂದ ಸುಧಾರಿಸಿಕೊಳ್ಳಬಹುದು ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ.
ಮೂಲತಃ ಆಂಧ್ರಪ್ರದೇಶದವರಾದ ಖಾದರ್ , ಕಡಪ ಜಿಲ್ಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ ಅವರು, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪದವಿಯನ್ನು ಕರ್ನಾಟಕದಲ್ಲಿ ಮುಗಿಸಿದರು. ಜೀವ ರಾಸಾಯನಿಕ ವಿಜ್ಞಾನದಲ್ಲಿ ಖಾದರ್ ಡಾಕ್ಟರೇಟ್ ಪಡೆದರು. ನಂತರ ಅಮೆರಿಕದ ಡುಪಾಂಟ್ ಎನ್ನುವ ಕಂಪನಿಯಲ್ಲಿ ವಿಜ್ಞಾನಿಯಾಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ.
ಐದು ವರ್ಷ ಪೋರ್ಟ್ ಲ್ಯಾಂಡ್ನಲ್ಲೂ ಸಂಶೋಧನೆ ನಡೆಸಿದ ಅವರು ಅಮೆರಿಕದಲ್ಲಿ ದೊಡ್ಡ ಹುದ್ದೆ, ಕೈತುಂಬಾ ಸಂಬಳ ಇದ್ದರೂ ಖಾದರ್ ಮನಸ್ಸು ಚಡಪಡಿಸಿದ್ದು ಮಾತ್ರ ಜನರ ಸಾಮಾನ್ಯರ ಸೇವೆ ಮಾಡುವುದರ ಕಡೆಗೆ. ಅಲ್ಲಿಂದ ತಮ್ಮ ಶ್ರೀಮಂತ ಜೀವನಕ್ಕೆ ತಿಲಾಂಜಲಿ ಹಾಡಿ ಮೈಸೂರಿನ ತೊಣಚಿಕೊಪ್ಪಲಿನಲ್ಲಿ ಬಂದು ನೆಲೆಸಿದರು. ಕಾಡುಕೃಷಿ ವಿಧಾನದ ಮೂಲಕ ಅಧ್ಯಯನ ನಡೆಸಿದರು. ಸಾವಿರಾರು ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಕ್ಯಾನ್ಸರ್ಗೆ ಸಿರಿಧಾನ್ಯದಿಂದ ಮದ್ದು
ಹೋಮಿಯೋಪಥಿಯ ಬಗ್ಗೆ ಸಾಕಷ್ಟು ವಿಚಾರ ತಿಳಿದುಕೊಂಡಿರುವ ಖಾದರ್ ಸಿರಿಧಾನ್ಯದಲ್ಲಿ ಕ್ಯಾನ್ಸರ್ಗೆ ಮದ್ದಿದೆ ಎಂದು ಪ್ರತಿಪಾದಿಸಿದ್ದಾರೆ. ಕಡಿಮೆ ವೆಚ್ಚದಲ್ಲಿ ಬಹುತೇಕ ಕಾಯಿಲೆಗಳನ್ನು ಗುಣಪಡಿಸುವ ವೈದ್ಯರಾಗಿ ಜನಪ್ರಿಯರಾಗಿದ್ದಾರೆ. ಬಿಳಿ ಅನ್ನ, ಬಿಳಿ ಸಕ್ಕರೆ, ಬಿಳಿ ಮೈದಾ, ಬಿಳಿ ಗೋಧಿ ಹಿಟ್ಟನ್ನು ಸಂಪೂರ್ಣ ತ್ಯಜಿಸಿ ಎನ್ನುವ ಅವರು ಅದರಿಂದಾಗುವ ಪರಿಣಾಮಗಳ ಬಗ್ಗೆಯೂ ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿದಿನ ಕನಿಷ್ಠ 10 ಕ್ಯಾನ್ಸರ್ ಸಿಬ್ಬಂದಿ
ಇತ್ತೀಚಿನ ದಿನಗಳಲ್ಲಿ ನನ್ನ ಬಳಿ ಬರುವವರ ಪಟ್ಟಿಯಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ದಿನಕ್ಕೆ ಕನಿಷ್ಠ 10 ಕ್ಯಾನ್ಸರ್ ಸಂಬಂಧಿ ಪ್ರಕರಣಗಳಿಗೆ ನಾನು ಕಿವಿಯಾಗುವೆ. ಒಂದಿಷ್ಟು ಅನುಮಾನ ಹಾಗೂ ಆತಂಕವನ್ನು ಹೊತ್ತುಕೊಂಡೇ, ಈ ಎಲ್ಲರೂ ನನ್ನೊಂದಿಗೆ ಮಾತಿಗಿಳಿಯುತ್ತಾರೆ. ನಾನು ಸೂಚಿಸುವ ಸಿರಿಧಾನ್ಯ ಹಾಗೂ ಕಷಾಯ ಸೇವನೆಯಿಂದ ಕ್ಯಾನ್ಸರ್ ವಾಸಿಯಾಗುತ್ತೆ ಎಂದು ಯಾರಿಗೂ ನಾನು ಹೇಳಿಲ್ಲ. ಆದರೆ, ಇದನ್ನು ಸೇವಿಸಿದವರ ಅನುಭವ ಕಥನಗಳನ್ನು ವಿವರಿಸಿ, ಬಂದವರಿಗೆ ಬೇಕಾಗುವ ಸಿರಿಧಾನ್ಯ-ಕಷಾಯವನ್ನು ಸೂಚಿಸಿ ಕಳುಹಿಸುವೆ ಎನ್ನುತ್ತಾರೆ ಖಾದರ್.

ವಿಭಿನ್ನ ಕ್ಯಾನ್ಸರ್ಗೆ ಸಿರಿಧಾನ್ಯ ಕಷಾಯ ಪಟ್ಟಿ
ಕ್ಯಾನ್ಸರ್ ಜತೆ ಬದುಕುತ್ತಿರುವವರ ಆರೋಗ್ಯ ಸುಧಾರಿಸಲಿ ಎಂಬುದಷ್ಟೆ ನನ್ನ ಆಶಯ. ಹಾಗೆ ನೋಡಿದರೆ ನಾನು ಸೂಚಿಸುವ ಸಿರಿಧಾನ್ಯ, ಕಷಾಯಗಳ ಬಳಕೆ ಹೊಸದೇನಲ್ಲ. ಮೊದಲೆಲ್ಲಾ, ದೇಹವನ್ನು ಬಾಧಿಸುವ ಅನೇಕ ರೋಗ- ರುಜಿನಗಳಿಗೆ, ದೈಹಿಕ ತೊಂದರೆಗಳಿಗೆ ಮನೆಯಲ್ಲೆ ದೊರೆಯುವ ಮದ್ದಿಗೆ ನಮ್ಮ ಜನ ಮೊರೆ ಹೋಗುತ್ತಿದ್ದರು. ತಿನ್ನುವ ಆಹಾರ, ಕುಡಿಯುವ ನೀರು, ಅಡುಗೆಗೆ ಬಳಸುವ ಸೊಪ್ಪು, ವಿವಿಧ ರೀತಿಯ ಕಷಾಯಗಳಿಂದಲೇ ತಮ್ಮ ಸಣ್ಣ ಪುಟ್ಟ ಕಾಯಿಲೆಗಳನ್ನು ವಾಸಿ ಮಾಡಿಕೊಳ್ಳುತ್ತಿದ್ದರು. ಹಾಗಾಗಿ, ಈ ಪದ್ಧತಿಗೆ ಅಜ್ಜಿ ಮದ್ದು ಎಂಬ ಹೆಸರೂ ಇದೆ. ಇದನ್ನೆ ನಾನು ವೈಜ್ಞಾನಿಕವಾಗಿ ಮತ್ತಷ್ಟು ಅಧ್ಯಯನ ನಡೆಸಿ, ಯಾವ್ಯಾವ ಕ್ಯಾನ್ಸರ್ ಯಾವ್ಯಾವ ಸಿರಿಧಾನ್ಯ-ಕಷಾಯ ಸೂಕ್ತ ಎಂಬುದನ್ನು ಪಟ್ಟಿ ಮಾಡಿರುವೆ ಎಂದು ಖಾದರ್ ಮಾಹಿತಿ ನೀಡುತ್ತಾರೆ.

ಐದು ದಿನ ಮನೆಯಲ್ಲಿ, 2 ದಿನ ಬುಡುಕಟ್ಟು ಜನರಿಗೆ ಚಿಕಿತ್ಸೆ
ವಾರದಲ್ಲಿ ಐದು ದಿನಗಳ ಕಾಲ ಹೋಮಿಯೋಪತಿ ವೈದ್ಯರಾಗಿ ಮೈಸೂರಿನ ತಮ್ಮ ಸುಖಸದನ ಎಂಬ ಹೆಸರಿನ ಮನೆಯಲ್ಲಿ ಮೊದಲೇ ಅಪಾಯಿಂಟ್ಮೆಂಟ್ ಪಡೆದು ಬಂದವರಿಗೆ ಚಿಕಿತ್ಸೆ ನೀಡುವ ಇವರು ಉಳಿದ ಎರಡು ದಿನಗಳ ಕಾಲ ಹೆಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಬಳಿಯ ತಮ್ಮ ಜಮೀನಿನ ಪುಟ್ಟ ಮನೆಯಲ್ಲಿ ಅಲ್ಲಿನ ನೂರಾರು ಬುಡಕಟ್ಟು ಮತ್ತು ಕುಗ್ರಾಮಗಳ ಜನರ ಕಾಯಿಲೆಗೆ ಉಚಿತ ಪರೀಕ್ಷೆ ಮಾಡಿ ಔಷಧಿಗಳನ್ನು ಉಚಿತವಾಗಿ ನೀಡುವ ಮಹಾನ್ ಕಾರ್ಯ ಮಾಡುತ್ತಿದ್ದಾರೆ.
ಅಪಾಯಿಂಟ್ ಪಡೆಯುವುದಕ್ಕೆ ಕನಿಷ್ಠ ಎರಡು ಮೂರು ತಿಂಗಳಾದರೂ ಕಾಯಬೇಕು. ಇವರು ಮೈಸೂರಿನ ತೊಣಚಿಕೊಪ್ಪಲಿನಲ್ಲಿ ತಮ್ಮ ಮನೆಯಲ್ಲಿ ಚಿಕಿತ್ಸೆ ನೀಡುತ್ತಾರೆ. ಇವರನ್ನು ಸಂಪರ್ಕಿಸಲು ಈ ಮೊಬೈಲ್ ನಂಬರ್ಗೆ ಕರೆ ಮಾಡಬಹುದು: 9448561472
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications