ಮೈಸೂರು: ನಾನಾ ಸಿಹಿ ತಿನಿಸುಗಳನ್ನು ಹಂಚಿ ರಾಜಣ್ಣನ ಹುಟ್ಟುಹಬ್ಬ ಆಚರಣೆ
ಮೈಸೂರು, ಏಪ್ರಿಲ್ 24 : ನಟಸಾರ್ವಭೌಮ, ರಸಿಕರ ರಾಜ ಡಾ.ರಾಜ್ ಕುಮಾರ್ ಅವರ 89ನೇ ಹುಟ್ಟುಹಬ್ಬವನ್ನು ಸೋಮವಾರ ಮೈಸೂರಿನ ಹೋಟೆಲ್ ಮಾಲೀಕರ ಸಂಘ ಹಾಗೂ ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಶಿವಸೈನ್ಯ ಸಂಘದ ವತಿಯಿಂದ ಅರಮನೆ ಎದುರಿನ ಡಾ.ರಾಜ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.
ಡಾ.ರಾಜ್ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಮೈಸೂರುಪಾಕು, ಲಾಡು, ಸೋನ್ಪಾಪಡಿ, ಜಿಲೇಬಿ,ಜಾಂಗೀರ್, ಬಾದುಷ, ಬಾದಾಮ್ ಪುರಿ ಸೇರಿದಂತೆ ಸುಮಾರು ಹತ್ತುಸಾವಿರ ಸಿಹಿಯನ್ನು ಹಂಚಿ ಡಾ. ರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಿದರು.[ಚಿತ್ರ ಸಂಪುಟ: ರವೀಂದ್ರ ಕಲಾಕ್ಷೇತ್ರದಲ್ಲಿ ಡಾ. ರಾಜ್ ಜನ್ಮ ದಿನಾಚರಣೆ]

ಇನ್ನೂ ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಶಿವಸೈನ್ಯ ಸಂಘದ ವತಿಯಿಂದ ಅಭಿಮಾನಿಗಳಿಗೆ 5೦೦ ಏಳನೀರು, ಟಮೋಟ ಬಾತ್ ಹಾಗೂ ಕೇಸರಿ ಬಾತ್ ನ್ನು ಸುಮಾರು ಒಂದು ಸಾವಿರ ಮಂದಿಗೆ ಹಂಚಿರುವುದು ವಿಶೇಷವಾಗಿತ್ತು.

ಡಾ.ರಾಜ್ ಹುಟ್ಟುಹಬ್ಬದ ಪ್ರಯುಕ್ತ ಡೋಲುಕುಣಿತ, ನಾದಸ್ವರ ಮತ್ತು ವೀರಗಾಸೆ ನೃತ್ಯಗಳನ್ನು ಏರ್ಪಡಿಸಲಾಗಿತ್ತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications