ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತ! ವರುಣಾದಿಂದ ಕಣಕ್ಕಿಳಿಯುವುದಾಗಿ ಹೇಳಿದ ಯತೀಂದ್ರ ಸಿದ್ದರಾಮಯ್ಯ
ಭಾರಿ ಕುತೂಹಲಕ್ಕೆ ಕಾರಣವಾಗಿರುವ ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯುವುದು ಖಚಿತವಾಗಿದೆ. ಹೇಗೆಂದರೆ ಮುಂದೆ ಓದಿ.
ಮೈಸೂರು, ಫೆಬ್ರವರಿ. 09: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಭಾರಿ ಕುತೂಹಲಕ್ಕೆ ಕಾರಣವಾಗಿರುವುದು ಕೋಲಾರ ವಿಧಾನಸಭಾ ಕ್ಷೇತ್ರ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಲ್ಲಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾಗಿನಿಂದ ಈ ಕ್ಷೇತ್ರದ ಬಗ್ಗೆ ಹಲವು ವದಂತಿಗಳು ಹರಡುತ್ತಿವೆ. ಇದಕ್ಕೆಲ್ಲಾ ಇತ್ಯರ್ಥ ಹಾಡುವಂತೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ತಾವೇ ಕಣಕ್ಕೆ ಇಳಿಯುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ, "ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ. ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ" ಎಂದು ಹೇಳಿದ್ದಾರೆ.

ನಮ್ಮ ತಂದೆಯವರು ಈಗಾಗಲೇ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ಅವರು ಅಲ್ಲಿಂದ ಸ್ಪರ್ಧೆ ಮಾಡುವುದು ಖಚಿತ. ಹೀಗಾಗಿ ವರುಣಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಒಪ್ಪಿಗೆ ನೀಡಿದರೇ ಕೋಲಾರದಿಂದ ಕಣಕ್ಕೆ ಇಳಿಯುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇದೆಲ್ಲಾ ನಾಟಕ, ಸಿದ್ದರಾಮಯ್ಯ ಹಳೇ ಮೈಸೂರು ಭಾಗದಿಂದ ಸ್ಪರ್ಧೆ ಮಾಡುತ್ತಾರೆ. ಕೋಲಾರ ಅಂತ ಸುಮ್ಮನೆ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಆದರೂ, ಜೆಡಿಎಸ್, ಬಿಜೆಪಿ ಸಿದ್ದರಾಮಯ್ಯ ಅವರ ಕೋಲಾರ ಸ್ಪರ್ಧೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪದೇ ಪದೇ ಕೋಲಾರಕ್ಕೆ ಭೇಟಿ ನೀಡಿ ಹಲವು ತಂತ್ರಗಳನ್ನು ಹೆಣೆಯುತ್ತಿವೆ. ಅಲ್ಲಿನ ನಾಯಕರನ್ನು ತಮ್ಮ ಕಡೆಗೆ ಸೆಲೆಯುವ ಪ್ರಯತ್ನ ಮಾಡುತ್ತಿವೆ. ಕುರುಬ ಸಂಘದಲ್ಲಿರುವ ಭಿನ್ನಾಭಿಪ್ರಾಯವನ್ನು ತಮಗೆ ಲಾಭವಾಗುವಂತೆ ಬಳಸಿಕೊಳ್ಳಲು ಎರಡು ಪಕ್ಷಗಳು ತಯಾರಿ ನಡೆಸಿವೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications