ಮೈಸೂರಲ್ಲಿ ವನಸಿರಿ ಕಾರ್ಯಕ್ರಮ; 25 ಸಾವಿರ ಗಿಡ ನೆಡುವ ಗುರಿ
ಮೈಸೂರು, ಜು,13: "ಸ್ವಂತ ಜಮೀನಿನಲ್ಲಿ ಪ್ರತಿ ವರ್ಷ ಸಸಿಗಳನ್ನು ಬೆಳೆಸಿ ಅವುಗಳನ್ನು ಮೈಸೂರಿನ ಜನತೆಗೆ ನೀಡುವ ಕಾರ್ಯವನ್ನು ರಾಜೀವ್ ಮಾಡುತ್ತಿದ್ದಾರೆ. ಇದೊಂದು ಅತ್ಯುತ್ತಮ ಕಾರ್ಯ" ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಶ್ಲಾಘಿಸಿದರು.
ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 25 ಸಾವಿರ ಸಸಿ ನೆಡುವ 'ವನಸಿರಿ' ಎಂಬ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
"ಅರಣ್ಯ ಇಲಾಖೆ ವತಿಯಿಂದಲೂ ಸಸಿಗಳ ವಿತರಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗುತ್ತಿದೆ. ಎರಡು ವರ್ಷದ ಹಿಂದೆ ಚಾಮುಂಡಿಬೆಟ್ಟದ ಸುತ್ತ 2 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅರಣ್ಯ ಇಲಾಖೆಯವರು 40 ಸಾವಿರ ಸಸಿಗಳನ್ನು ನೆಟ್ಟಿದ್ದಾರೆ" ಎಂದು ಹೇಳಿದರು.

"ರಾಜೀವ್ ಸಹಕಾರ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡುವುದರ ಜೊತೆಗೆ ಪರಿಸರ, ಸ್ವಚ್ಛತೆ ಬಗ್ಗೆ ವಿಶೇಷ ಗಮನ ನೀಡಿದ್ದಾರೆ. ಮೈಸೂರಿನ ಸುತ್ತಮುತ್ತ ಗಿಡ ನೆಡುವುದರ ಜೊತೆಗೆ ಪೋಷಣೆ ಕೂಡ ಮಾಡುತ್ತಿದ್ದಾರೆ. ಜಿಲ್ಲಾಡಳಿತ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೂಡ ರಾಜೀವ್ ಕಾರ್ಯಕ್ಕೆ ಕೈ ಜೋಡಿಸಿ ಮೈಸೂರಿನ ಪರಿಸರ, ಸ್ವಚ್ಛತೆ ಬಗ್ಗೆ ಕಾಳಜಿ ವಹಿಸುತ್ತಿದೆ" ಎಂದರು.
ಪರಿಸರ ಕಾಳಜಿ ಕಾರ್ಯ ಯಶಸ್ವಿಯಾಗಲಿ; "ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಿರುವುದನ್ನು ಇಡೀ ದೇಶವೇ ಸ್ವಾಗತಿಸಿದೆ. ಎಷ್ಟರ ಮಟ್ಟಿಗೆ ಎಂದರೆ ನಾವೇ ರಾಜ್ಯಸಭೆಗೆ ಆಯ್ಕೆಯಾದ ಭಾವನೆ ಪ್ರತಿಯೊಬ್ಬರಲ್ಲಿ ಮೂಡಿದೆ" ಎಂದು ಎಸ್. ಟಿ. ಸೋಮಶೇಖರ್ ಹೇಳಿದರು.
"ಸುತ್ತೂರು ಶ್ರೀಗಳು ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ್ದರು. ಮಠದ ಕಾರ್ಯಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಕೂಡ ಶ್ಲಾಘಿಸಿದರು. ರಾಜೀವ್ ಕಾರ್ಯ ಇತರರಿಗೂ ಮಾದರಿಯಾಗಲಿ. ಅವರ ಪರಿಸರ ಕಾಳಜಿ ಕಾರ್ಯ ಯಶಸ್ವಿಯಾಗಲಿ" ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ನಾಗೇಂದ್ರ, ಜಿ. ಟಿ. ದೇವೇಗೌಡ, ಮೂಡಾ ಅಧ್ಯಕ್ಷರಾದ ರಾಜೀವ್ ಮುಂತಾದವರಿದ್ದರು.
-
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications