ವಿಷಪ್ರಸಾದ ಸೇವನೆ : ದಾರಿತಪ್ಪಿದ ಚಾಲಕನಿಂದ 35 ಜೀವ ಉಳಿಯಿತು
ಮೈಸೂರು, ಡಿಸೆಂಬರ್ 17 : ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷ ಬೆರೆಸಸಿ 14 ಜನರು ಸಾವಿಗೀಡಾಗಿದ್ದಾರೆ. ದುರಂತದಲ್ಲಿ ಇನ್ನಷ್ಟು ಜನರು ಬಲಿಯಾಗುವದನ್ನು ಬಸ್ ಚಾಲಕನೊಬ್ಬ ತಪ್ಪಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವಿಶೇಷ ಪೂಜೆಗೆಂದು ಸುಳವಾಡಿ ಮಾರಮ್ಮ ದೇವಸ್ಥಾನಕ್ಕೆ ಬಸ್ ನಲ್ಲಿ ಹೊರಟಿದ್ದ 35 ಜನರು, ಬಸ್ ಚಾಲಕನಿಗೆ ಮಾರ್ಗ ತಪ್ಪಿದ ಪರಿಣಾಮ ಬೇರೊಂದು ಮಾರಮ್ಮ ದೇವಸ್ಥಾನಕ್ಕೆ ತಲುಪಿದ್ದಾರೆ. ಬಸ್ ಚಾಲಕನ ಗೊಂದಲದ ತಪ್ಪಿನಿಂದಾಗಿ ದೇವಸ್ಥಾನಕ್ಕೆ ಬರಬೇಕಿದ್ದ 35 ಮಹಿಳೆಯರು ಬೇರೊಂದು ಸ್ಥಳಕ್ಕೆ ಹೋಗಿದ್ದಾರೆ. ಪರಿಣಾಮ ಈ 35 ಮಹಿಳೆಯ ಜೀವ ಉಳಿದಿದೆ ಎನ್ನಬಹುದು.
ಸುಳ್ವಾಡಿಯ ಪಕ್ಕದಲ್ಲೇ ಇರುವ ಮಠಹಳ್ಳಿಯಿಂದ ಬೆಳಿಗ್ಗೆಯೇ 35 ಮಹಿಳೆಯರು ಪೂಜೆಗೆಂದು ಬಸ್ಸಿನಲ್ಲಿ ಹೊರಟಿದ್ದರು. ಆದರೆ ಬಸ್ ಚಾಲಕ ಸೇತು ರಸ್ತೆ ಮಾರ್ಗ ಗೊಂದಲದಿಂದಾಗಿ ಸುಳವಾಡಿಗಿಂತ 15 ಕಿ.ಮೀ ಹಿಂದೆ ಇರುವ ರಾಂಪುರ ಮಾರಮ್ಮ ದೇವಸ್ಥಾನಕ್ಕೆ ಬಸ್ ತಂದು ನಿಲ್ಲಿಸಿದ್ದರು.

ಆರಂಭದಲ್ಲಿ ಸುಳವಾಡಿ ದೇವಸ್ಥಾನದಲ್ಲಾದ ದುರಂತ ಅರಿಯದ ಬಸ್ ಪ್ರಯಾಣಿಕರು ಬಸ್ ಚಾಲಕನ ಬೇಜವಾಬ್ದಾರಿಗೆ ಬೈದಿದ್ದರು. ಆದರೆ ಸುಳವಾಡಿ ದೇವಸ್ಥಾನದ ಪ್ರಸಾದದಲ್ಲಿ ವಿಷವಿದ್ದ ಪರಿಣಾಮ ಅದನ್ನು ತಿಂದು ಭಕ್ತರು ಸಾವನ್ನಪ್ಪುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ 35 ಮಹಿಳಾ ಪ್ರಯಾಣಿಕರು ಸಾವಿನಂಚಿನಿಂದ ತಾವು ಬಚಾವ್ ಆಗಿದ್ದಕ್ಕೆ ನಿಟ್ಟುಸಿರುಬಿಟ್ಟಿದ್ದಾರೆ. ಅಲ್ಲದೇ ಚಾಲಕ ಸೇತುರವರ ಕಾಯಕಕ್ಕೆ ಭೇಷ್ ಎಂದಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications