Mysuru: ದಸರಾ ಹಬ್ಬ ತಯಾರಿಯಲ್ಲಿ ಮೈಸೂರು: ಭಾರಿ ಸ್ಫೋಟಕಗಳನ್ನ ಪತ್ತೆ ಮಾಡಿದ ಪೊಲೀಸರು
ಮೈಸೂರು ಆಗಸ್ಟ್ 23: ಮೈಸೂರಿನಲ್ಲಿ ದಸರಾ ತಯಾರಿ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೆಯಾದ ಆನೆಗಳು ಅರಣ್ಯ ಪ್ರದೇಶದಿಂದ ಅರಮನೆ ನಗರಿಯತ್ತ ಹೆಜ್ಜೆ ಹಾಕಿವೆ. ಈ ನಡುವೆ ಹೋಟೆಲ್ವೊಂದರಲ್ಲಿ ಸ್ಪೋಟಕಗಳು ಪತ್ತೆಯಾಗಿವೆ. ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಭಾರಿ ಸ್ಫೋಟಕಗಳು ಪತ್ತೆಯಾಗಿವೆ.
ಮೈಸೂರಿನಲ್ಲಿ ದಸರಾ ತಯಾರಿ ನಡೆಯುತ್ತಿರುವಾಗ ಟಿ ನರಸೀಪರ ತಾಲೂಕಿನಲ್ಲಿ ಬಾಂಬ್ ಪತ್ತೆ ಆಗಿದ್ದು ಆತಂಕವನ್ನು ಹೆಚ್ಚಿಸಿದೆ. ನೀಲಿ ಬಣ್ಣದ ಬ್ಯಾಗ್ನಲ್ಲಿ ಅಪರಿಚಿತ ವ್ಯಕ್ತಿಗಳು ಬಾಂಬ್ಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಅವು ನಾಡ ಬಾಂಬ್ ಎನ್ನುವುದು ಖಚಿತವಾಗಿದೆ. ಸದ್ಯ ಅವುಗಳನ್ನು ವಶಕ್ಕೆ ಪಡೆದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

ಇವುಗಳನ್ನು ಗಣಿಗಾರಿಕೆ ಹಾಗೂ ಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಬಳಸುತ್ತಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕಗಳನ್ನು ವಶಕ್ಕೆ ಪಡೆದು ಹೋಟೆಲ್ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ಅಪರಿಚಿತರು ಪ್ಲಾಸ್ಟಿಕ್ ಕವರ್fನಲ್ಲಿ ಒಂಬತ್ತು ಸ್ಪೋಟಕಗಳನ್ನು ಇಟ್ಟು ಹೋಗಿದ್ದಾರೆ. ಅನುಮಾನ ಬಂದು ಹೋಟೆಲ್ ಸಿಬ್ಬಂದಿ ಆ ಕವರ್ ಅನ್ನು ಹೊರಗಡೆ ತಂದು ಮರಕ್ಕೆ ನೃತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ದಸರಾ ತಯಾರಿ..
ಮೈಸೂರು ದಸರಾಕ್ಕೆ ಆಗಮಿಸುವ ಅಭಿಮನ್ಯು ನೇತೃತ್ವದ ಗಜ ಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತವನ್ನು ನೀಡಲಾಗಿದೆ. ಪ್ರತಿ ವರ್ಷ ಗಜಪಯಣದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕುಮ್ಕಿ ಆನೆಗಳು ದಸರಾ ಉತ್ಸವದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ತರಬೇತಿಗಾಗಿ ಮೈಸೂರಿಗೆ ಹೋಗುತ್ತವೆ.
ಈ ವರ್ಷ ಮೊದಲ ಬ್ಯಾಚ್ನಲ್ಲಿ ಒಂಬತ್ತು ಆನೆಗಳು, ಅಭಿಮನ್ಯು, ಧನಂಜಯ, ಗೋಪಿ, ಭೀಮಾ, ರೋಹಿತ್, ಕಂಜನ್, ಹೊಸ ಆನೆ ಏಕಲವ್ಯ ಹಾಗೂ ಹೆಣ್ಣು ಆನೆಗಳಾದ ವರಲಕ್ಷ್ಮಿ ಮತ್ತು ಲಕ್ಷ್ಮಿಯನ್ನು ಇಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅರಣ್ಯ ಇಲಾಖೆ ಹಾಗೂ ದಸರಾ ಸಮಿತಿಯಿಂದ ಬರ ಮಾಡಿಕೊಳ್ಳಲಾಯಿತು.
ಗಜಪಯಣ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯಲಿದ್ದು, ಜನಸಾಮಾನ್ಯರ ದಸರಾ ಆಗಲಿದೆ. ಅಲ್ಲದೆ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಚೆನ್ನಾಗಿ ಮಾಡಲು ಪ್ರಾಯೋಜಕರು ಯೋಜನೆ ಮಾಡಿದ್ದಾರೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications