ದೇಶದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಣೆ
ಮೈಸೂರು, ಡಿಸೆಂಬರ್ 24: ಹಲವು ಮೊದಲುಗಳಿಗೆ ಹೆಸರಾಗಿರುವ ಸಾಂಸ್ಕೃತಿಕ ನಗರಿ ಮೈಸೂರು ಇದೀಗ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ಮಾಡಿ ಕೊಡುವ ಮೂಲಕ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ.
ಮೈಸೂರು ನಗರದ ಸರಸ್ವತಿಪುರಂನಲ್ಲಿರುವ ತೃತೀಯ ಲಿಂಗಿಗಳ ಕಚೇರಿ ಆವರಣದಲ್ಲಿ ಕೇಂದ್ರ ಕಾರ್ಮಿಕ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಟ್ವಿನ್ಸ್ ಸಿ.ಎಸ್.ಸಿ ಡಿಜಿಟಲ್ ಸೇವಾ ಕೇಂದ್ರದ ವತಿಯಿಂದ ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಣಿ ಕಾರ್ಯ ನಡೆಸಿತು.
ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಇಂತಹದೊಂದು ಇ-ಶರ್ಮ್ ಕಾರ್ಡ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ತೃತೀಯ ಲಿಂಗಿಗಳ ಸಂಘದ ಮುಖ್ಯಸ್ಥರಾದ ಪ್ರಣತಿ ಪ್ರಕಾಶ್ ಅವರ ನೇತೃತ್ವದಲ್ಲಿ ನಡೆದ ನೋಂದಣಿ ಅಭಿಯಾನದಲ್ಲಿ 50ಕ್ಕೂ ಹೆಚ್ಚು ಮಂದಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ನೋಂದಣಿ ಮಾಡಿಕೊಂಡರು.

ಏನಿದು ಇ-ಶ್ರಮ್ ಕಾರ್ಡ್?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಇ- ಶ್ರಮಿಕ ಕಾರ್ಡ್ ಅನ್ನು ಅಸಂಘಟಿತ ಕಾರ್ಮಿಕ ಅಭಿವೃದ್ಧಿ ಕಲ್ಯಾಣ ಯೋಜನೆಯಡಿ ಜಾರಿಗೊಳಿಸಲಾಗುತ್ತಿದೆ. ಯಾರೊಬ್ಬರ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕೆಂಬ ಮೋದಿ ಅವರ ಧ್ಯೇಯಕ್ಕೆ ಪೂರಕವಾಗಿ ದೇಶಾದ್ಯಂತ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ವ್ಯಾಪ್ತಿಯಲ್ಲಿ ಒಗ್ಗೂಡಿಸುವ ಕೆಲಸ ನಡೆಯುತ್ತಿದೆ. ಇದರ ಅಂಗವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ತೃತೀಯ ಲಿಂಗಿಗಳಿಗೆ ಇ-ಶ್ರಮ್ ಕಾರ್ಡ್ ವಿತರಿಸಲಾಗಿದೆ.
ಯಾರೆಲ್ಲಾ ನೋಂದಣಿ ಆಗಬಹುದು?
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಇ-ಶ್ರಮ್ ಕಾರ್ಡ್ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ, ಕೃಷಿ ಮೀನುಗಾರರು, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಖಾಸಗಿ ವಾಹನ ಚಾಲಕರು, ಟೈಲರ್ಗಳು, ವ್ಯಾಪಾರಿಗಳು ಇ-ಶ್ರಮ್ ಕಾರ್ಡ್ ಯೋಜನೆಯಡಿ ನೋಂದಣಿ ಮಾಡಿಕೊಳ್ಳಬಹುದು.

ಅಲ್ಲದೆ ಕೇಂದ್ರ ಸರ್ಕಾರ ಗುರುತಿಸಿರುವ ಬೀದಿ ಬದಿಯ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಇತರೆ ಕಾರ್ಮಿಕರು ವರ್ಗಗಳಡಿ ನೋಂದಣಿಯಾಗಬಹುದಾಗಿದೆ. ಈ ಶ್ರಮ ಕಾರ್ಡ್ ಮಾಡಿಸಲು ಫೋನ್ ನಂಬರ್, ಆಧಾರ್ ನಂಬರ್, ಬ್ಯಾಂಕ್ ಅಕೌಂಟ್ ನಂಬರ್ ಇದ್ದರೆ, ಸ್ಥಳದಲ್ಲೇ ಇ-ಶ್ರಮ್ ಕಾರ್ಡ್ ನಿಮ್ಮ ಕೈ ಸೇರಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications