ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎಕ್ಸಾಮ್ ಟಿಪ್ಸ್ ಕೊಟ್ಟ ಶಿಕ್ಷಣ ಸಚಿವರು
ಮೈಸೂರು, ಫೆಬ್ರವರಿ 25: ಜಿಲ್ಲಾ ಪಂಚಾಯತ್ ಮೈಸೂರು ಜಿಲ್ಲೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನಂಜನಗೂಡು ತಾಲೂಕು ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ "ಪರೀಕ್ಷೆ ಭಯ ಬಿಡಿ- ಕಲಿಕೆ ಮೇಲೆ ಭರವಸೆ ಇಡಿ' ಕುರಿತು ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಾಲ್ಗೊಂಡು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ನಂಜನಗೂಡು ಕಾರ್ಮೆಲ್ ಕಾನ್ವೆಂಟ್ ನಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಉದ್ಘಾಟಿಸಿ ಮಾತನಾಡಿದ ಅವರು, ನಾನು ನೋಡ್ತಿದ್ದೀನಿ ಈ ಸಂವಾದದಲ್ಲಿ ಮಕ್ಕಳ ಮುಖದಲ್ಲಿ ಭಯ ಕಾಣುತ್ತಿಲ್ಲ. ಭಯ ಕಾಣುತ್ತಿರೋದು ದೊಡ್ಡವರ ಮುಖದಲ್ಲಿ, ಪರೀಕ್ಷೆ ಕುರಿತು ಅನೇಕರಲ್ಲಿ ಗೊಂದಲಗಳಿವೆ ಎಂದರು.
ನಿಮ್ಮ ಮನಸ್ಸಿನಲ್ಲಿರುವ ಪ್ರಶ್ನೆ, ಗೊಂದಲ ನಿವಾರಣೆಗೆ ಶಿಕ್ಷಣ ಇಲಾಖೆಯಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗಾಗಿ ಎಫ್ಎಕ್ಯೂ ಸಾಮಾನ್ಯವಾಗಿ ಬರುವ ಪ್ರಶ್ನೆ ಕುರಿತು 51 ನಿಮಿಷದ ವಿಡಿಯೋ ಮಾಡಿದ್ದೇವೆ. ಭಾರತದ ಮೊಟ್ಟ ಮೊದಲ ಪ್ರಯತ್ನ ಇದಾಗಿದೆ. ಎಸ್ಎಸ್ಎಲ್ಸಿ ಮಕ್ಕಳ ಜೊತೆ ಸಂವಾದ ಮಾಡಲು ಬಂದಿದ್ದೇನೆ ನಿಮ್ಮ ಪ್ರಶ್ನೆಗಳನ್ನು ಕೇಳಬಹುದು ಎಂದರು.

ಕಾರ್ಮೆಲ್ ಶಾಲೆಯ ವಿದ್ಯಾರ್ಥಿ ಗಗನ್, "ಪರೀಕ್ಷೆ ಪತ್ರಿಕೆ ಲೀಕ್ ಆಗಿದೆಯೇ ಎಂದು ಕೇಳಿದ್ದಕ್ಕೆ ಸಚಿವರು, ಪತ್ರಿಕೆ ಲೀಕ್ ಆಗಿಲ್ಲ ಪರೀಕ್ಷೆ ಮೂರು ದಿನ ಅಂತ ಮಕ್ಕಳಿಗೆ ಅಂತಿಮ ಪರೀಕ್ಷೆ ಹೇಗಿರುತ್ತದೆ ಎಂದು ತಿಳಿಸಲು ಪತ್ರಿಕೆ ರೆಡಿ ಮಾಡಲಾಗಿದೆ' ಎಂದರು.
ದೊಡ್ಡಕವಲಂದೆ ಶಾಲೆಯ ವಿದ್ಯಾರ್ಥಿನಿ ಮಹೇಶ್ವರಿ ಗಣಿತದಲ್ಲಿ 100 ಅಂಕಗಳಿಸೋದು ಹೇಗೆ? ಲೆಕ್ಕ ಮಾಡೋದಕ್ಕೆ ಸಮಯ ಜಾಸ್ತಿ ಬೇಕು ಎಂದಿದ್ದಕ್ಕೆ ಸಚಿವರು ಗಣಿತ ಪರೀಕ್ಷೆಗೆ ಸಮಯ ಜಾಸ್ತಿ ನೀಡಿದ್ದೇವೆ. ಅರ್ಧ ಗಂಟೆ ಹೆಚ್ಚಿನ ಸಮಯ ನೀಡಿದ್ದೇವೆ ಎಂದರು.
ವಿದ್ಯಾರ್ಥಿನಿ ಆಶಾ ಪಠ್ಯ ಪುಸ್ತಕದಿಂದ ಹೊರಗಿನ ಪ್ರಶ್ನೆ ಬರುತ್ತೆ ಎಂದಿದ್ದಕ್ಕೆ ಸಚಿವರು ಪಠ್ಯ ಪುಸ್ತಕದ ಒಳಗಿರುವುದನ್ನೇ ಕೊಡೋದು. ಅದನ್ನು ಬದಲಾಯಿಸಿ ಪ್ರಶ್ನೆ ಕೊಟ್ಟಿರುತ್ತಾರೆ ಅಷ್ಟೇ ಎಂದು ಆತಂಕ ದೂರ ಮಾಡಿದರು.
ಮಕ್ಕಳು ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಬೇಕು, ತಂದೆ-ತಾಯಿ ಮಕ್ಕಳಿಗೆ ಓದುವಂತೆ ಒತ್ತಡ ಹೇರಬೇಡಿ, ಮಕ್ಕಳು ಭಯ, ಆತಂಕಕ್ಕೆ ಗುಡ್ ಬೈ ಹೇಳಿ ಎಂದು ಎಸ್ಎಸ್ಎಲ್ಸಿ ಮಕ್ಕಳಿಗೆ ಸಲಹೆ ನೀಡಿದರು. ನಂಜನಗೂಡು ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ 65 ಶಾಲೆಯ 350 ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗಿಯಾಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications