ಕೋಮಾದಲ್ಲಿದ್ದ ಶಿಕ್ಷಕರ ಮನೆಗೆ ಭೇಟಿ ನೀಡಿ ನೈತಿಕ ಸ್ಥೈರ್ಯ ತುಂಬಿದ ಶಿಕ್ಷಣ ಸಚಿವ
ಮೈಸೂರು, ಡಿಸೆಂಬರ್ 16: ಕಳೆದ ವರ್ಷ ನವೆಂಬರ್ನಲ್ಲಿ ಅಪಘಾತಕ್ಕೀಡಾದ ನಂತರ ಒಂದು ವರ್ಷದಿಂದ ಕೋಮಾದಲ್ಲಿದ್ದ ಸರ್ಕಾರಿ ಶಾಲಾ ಶಿಕ್ಷಕರ ಮನೆಗೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ಕುಟುಂಬಕ್ಕೆ ನೈತಿಕ ಸ್ಥೈರ್ಯ ತುಂಬಿದ್ದಾರೆ.
52 ವರ್ಷದ ಶಿಕ್ಷಕ ಮಹಾದೇವಸ್ವಾಮಿ ಅವರ ಪತ್ನಿ ಮಂಜುಳಾ ಅವರ ಮನವಿಯ ಮೇರೆಗೆ ನಂಜನಗೂಡಿನ ಹಂದುವಿನಹಳ್ಳಿ ಲೇಔಟ್ನಲ್ಲಿರುವ ಶಿಕ್ಷಕರ ಮನೆಗೆ ಸೋಮವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಶಿಕ್ಷಕ ಮಹಾದೇವಸ್ವಾಮಿ ಅವರು ಭುಜಂಗಯ್ಯನಹುಂಡಿ ಗ್ರಾಮದ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದರು. ಒಂದು ವರ್ಷದ ಹಿಂದೆ ಕೆಲಸ ಮಗಿಸಿ ವಾಪಸ್ ಸಂಜೆ ನಂಜನಗೂಡಿಗೆ ಹಿಂತಿರುಗುತಿದ್ದಾಗ, ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಬೆನ್ನು ಮೂಳೆಗೆ ಬಿದ್ದ ಪೆಟ್ಟಿನಿಂದಾಗಿ ಅವರು ಈಗಲೂ ಹಾಸಿಗೆಯಲ್ಲೆ ಇರಬೇಕಾಗಿದೆ. ಇಲಾಖೆಯಿಂದ ನೈತಿಕ ಬೆಂಬಲವನ್ನು ನೀಡಲು ಕುಟುಂಬಕ್ಕೆ ಭೇಟಿ ನೀಡಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಮಹಾದೇವಸ್ವಾಮಿ ಅವರಿಗೆ 11 ವರ್ಷದ ಮಗನಿದ್ದಾನೆ.
ಮಹಾದೇವಸ್ವಾಮಿ ಅವರು ಸ್ವಯಂಪ್ರೇರಿತ ನಿವೃತ್ತಿಗೆ ಅರ್ಜಿ ಸಲ್ಲಿಸಬೇಕೆಂದು ಸುರೇಶ್ ಕುಮಾರ್ ಅವರು ಸೂಚಿಸಿದ್ದು, ಇಲಾಖೆಯಿಂದ ದೊರೆಯುವ ಎಲ್ಲ ಆರ್ಥಿಕ ಸವಲತ್ತುಗಳನ್ನೂ ಶೀಘ್ರವಾಗಿ ಕೊಡಿಸಿಕೊಡುವ ಭರವಸೆ ನೀಡಿದರು. ಇದಲ್ಲದೆ ಶಿಕ್ಷಕರ ಪತ್ನಿ ಮಂಜುಳಾ ಅವರಿಗೆ ಇಲಾಖೆಯಲ್ಲೆ ಕೆಲಸ ನೀಡುವುದಾಗಿ ಭರವಸೆ ನೀಡಿದರು.

ಇದಲ್ಲದೆ ಅಪಘಾತದಿಂದ ಪರಿಹಾರವನ್ನು ಪಡೆಯಲು ನ್ಯಾಯಾಲಯದಲ್ಲಿ ಹೋರಾಡಲು ವಕೀಲರನ್ನು ಕೂಡ ನಿಯೋಜಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪಾಂಡುರಂಗ, ಬ್ಲಾಕ್ ಶಿಕ್ಷಣ ಅಧಿಕಾರಿ ಸಿ.ಎನ್ ರಾಜು ಸಚಿವರ ಭೇಟಿ ಸಮಯದಲ್ಲಿ ಹಾಜರಿದ್ದರು. ಶಿಕ್ಷಕರ ಮನೆಗೆ ಸಚಿವರ ಭೇಟಿಯು ಕುಟುಂಬದವರಿಗೆ ನೆಮ್ಮದಿ ಜತೆಗೆ ಚೈತನ್ಯವನ್ನೂ ನೀಡಿದೆ ಎಂದು ಮಂಜುಳಾ ಹೇಳಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications