ಬಂಡೀಪುರದಲ್ಲಿ ಸೇವ್ ಜಟಾಯು ಸಮೀಕ್ಷೆ: ಈಜಿಪ್ಟಿಯನ್ ರಣಹದ್ದು ಪತ್ತೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ 2023ರ ರಣಹದ್ದಿನ ಸರ್ವೇಕ್ಷಣೆಯಲ್ಲಿ ಕೇವಲ ಒಂದು ಈಜಿಪ್ಟಿಯನ್ ರಣಹದ್ದು ಕಾಣಿಸಿಕೊಂಡಿದೆ.
ಮೈಸೂರು, ಫೆಬ್ರವರಿ 27: ಕರ್ನಾಟಕ ಅರಣ್ಯ ಇಲಾಖೆ ಹಾಗೂ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್(ಡಬ್ಲ್ಯೂಸಿಎಫ್) ಸಹಭಾಗಿತ್ವದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ 2023ರ ರಣಹದ್ದಿನ ಸರ್ವೇಕ್ಷಣೆಯಲ್ಲಿ ಕೇವಲ ಒಂದು ಈಜಿಪ್ಟಿಯನ್ ರಣಹದ್ದು ಕಾಣಿಸಿಕೊಂಡಿದೆ.
ದಕ್ಷಿಣ ಭಾರತದಲ್ಲಿ ಮುಖ್ಯವಾಗಿ ನಾಲ್ಕು ಬಗೆಯ ರಣ ಹದ್ದುಗಳಿವೆ. ಅವುಗಳ ಪೈಕಿ ಸಮೀಕ್ಷೆಯಲ್ಲಿ 61 ಬಿಳಿ ಬೆನ್ನಿನ ರಣಹದ್ದು, 13 ಭಾರತೀಯ ರಣಹದ್ದು, 30 ಕೆಂಪು ತಲೆಯ ರಣಹದ್ದು ಕಂಡುಬಂದಿವೆ. 1 ಈಜಿಪ್ಟಿಯನ್ ರಣಹದ್ದು ಕಂಡುಬಂದಿದೆ. ಇದು ನಗರವಾಸಿಯಾಗಿರುವ ಕಾರಣ ಅರಣ್ಯ ಪ್ರದೇಶದಲ್ಲಿ ವಿರಳ ಎಂದು ಬಂಡೀಪುರ ರಾಷ್ಟ್ರೀಯ ಉದ್ಯಾನದ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮಾಯಣದ ಜಟಾಯುವಿನ ಸಂತತಿಯ ಈ ರಣಹದ್ದುಗಳು ಪರಿಸರದಲ್ಲಿ ಸರ್ವೋಚ್ಚ ನೈಸರ್ಗಿಕ ಸ್ವಚ್ಛತಾ ಕರ್ಮಿಗಳು. ಇವುಗಳು ಸತ್ತ ಪ್ರಾಣಿಯ ಮಾಂಸವನ್ನು ತಿನ್ನುತ್ತವೆ. ಯಾವುದೇ ವಿಧವಾದ ವೈರಾಣು, ಬ್ಯಾಕ್ಟೀರಿಯಾ ಅಥವ ಸೂಕ್ಷ್ಮಾಣುಗಳನ್ನು ಜೀರ್ಣಿಸಿಕೊಳ್ಳಲು ಸಮರ್ಥವಾಗಿವೆ. ಹಾಗಾಗಿ ಸತ್ತ ಪ್ರಾಣಿಗಳ ಮೂಲಕ ಬದುಕಿರುವ ಇನ್ನಿತರ ಪ್ರಾಣಿಗಳಿಗೆ ಹರಡಬಹುದಾದ ಸೋಂಕುಗಳನ್ನು ನಿಗ್ರಹಿಸುವಲ್ಲಿ ಇವುಗಳ ಕೊಡುಗೆ ಅಪಾರ ಎಂದು ತಿಳಿಸಿದ್ದಾರೆ.
ಪರಿಸರ ಸಮತೋಲನ ಕಾಪಾಡುವಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುವ ರಣಹದ್ದುಗಳು ಈ ಹಿಂದೆ ಎಲ್ಲೆಡೆ ಹೇರಳವಾಗಿ ಕಂಡು ಬರುತ್ತಿದ್ದವು. ಆದರೆ ಈಗ ಇವುಗಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಶೇ. 99ರಷ್ಟು ನಶಿಸಿವೆ. ಸಂರಕ್ಷಿಸಲು ಪಕ್ಷಿತಜ್ಞರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಭಾರತದಲ್ಲಿ ಉಳಿದಿರುವ ರಣ ಹದ್ದುಗಳಿಗೆ ನೀಲಗಿರಿ ಬಯೋಸ್ಪಿಯರ್ ರಿಸರ್ವ್ ಸೂಕ್ತವಾದ ಆವಾಸಸ್ಥಾನ. ರಣಹದ್ದುಗಳಿಗೆ ಈ ಜಾಗವು ಸೂಕ್ತವಾದ ಸಂತಾನೋತ್ಪತ್ತಿ ಮಾಡುವ ಕಾಡುಗಳಲ್ಲಿ ಪ್ರಮುಖವಾಗಿದೆ ಎಂದು ಡಬ್ಲ್ಯೂಸಿಎಫ್ ಮುಖ್ಯಸ್ಥ ಡಾ.ರಾಜಕುಮಾರ್ ದೇವರಾಜ್ ಅರಸ್ ಹೇಳಿದ್ದಾರೆ.
ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ನಶಿಸುವ ಹಂತ ತಲುಪಿರುವುದರಿಂದ ಎಚ್ಚೆತ್ತ ಅರಣ್ಯ ಸಚಿವಾಲಯವು ರಣಹದ್ದುಗಳ ಸರ್ವೇಗೆ ಮುಂದಾಗಿದೆ. ಅಳಿವಿನಂಚಿನಲ್ಲಿರುವ ಜಟಾಯುಗಳನ್ನು ಉಳಿಸಿಕೊಳ್ಳಲೇ ಬೇಕಾದ ತುರ್ತು ಎದುರಿಗಿರುವ ಹಿನ್ನೆಲೆಯಲ್ಲಿ ನೀಲಗಿರಿ ಶ್ರೇಣಿಯಲ್ಲಿ ಫೆಬ್ರವರಿ 25 ಹಾಗೂ 26 ರಂದು ಸರ್ವೇ ನಡೆದಿದೆ. ಬಂಡೀಪುರದಲ್ಲಿ ರಣಹದ್ದು ಸರ್ವೇಕ್ಷಣೆ ಬಗ್ಗೆ ಸಿಬ್ಬಂದಿಗೆ ತರಬೇತಿ ಕೊಡಲಾಗಿದ್ದು, ಇದೀಗ ಸರ್ವೇ ಸಂಪೂರ್ಣಗೊಂಡಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications