5 ಲಕ್ಷ ರುಪಾಯಿ ಪರಿಹಾರ ನೀಡಿ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ
Recommended Video
ಮೈಸೂರು, ಮಾರ್ಚ್ 30 : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತ ಮೈಸೂರಿನ ಕ್ಯಾತಮಾರನಹಳ್ಳಿ ರಾಜು ನಿವಾಸಕ್ಕೆ ಭೇಟಿ ನೀಡಿದ ವೇಳೆ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿ, ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜು ಕುಟುಂಬಕ್ಕೆ 5 ಲಕ್ಷ ರುಪಾಯಿ ಪರಿಹಾರ ನೀಡಿ, ಸದ್ಯ ಪೇಚಿಗೆ ಸಿಲುಕಿದ್ದಾರೆ. 5 ಲಕ್ಷ ರುಪಾಯಿ ಪರಿಹಾರ ಕೊಟ್ಟಿದ್ದಾಗಿ ರಾಜು ಅವರ ಅತ್ತಿಗೆ ಕುಮಾರಿ ಒಪ್ಪಿಕೊಂಡಿದ್ದಾರೆ. ಈ ಮೂಲಕ ಅಮಿತ್ ಶಾ ನೇರವಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಬಿಜೆಪಿ ದಲಿತ ಸಂವಾದದಲ್ಲಿ ಪ್ರತಿಭಟನೆ, ಅಮಿತ್ ಶಾಗೆ ಧಿಕ್ಕಾರ
ರಾಜು ಅವರ ಅತ್ತಿಗೆಗೆ ಮಾದ್ಯಮಗಳ ಮುಂದೆ ಬಿಜೆಪಿ ಕಾರ್ಯಕರ್ತರು ಹೇಳಿ ಕೊಟ್ಟ ಹಾಗೆ ಹೇಳಿಕೆ ನೀಡುವಂತೆ ಸ್ಥಳೀಯ ಬಿಜೆಪಿ ನಾಯಕರ ತಾಕೀತು ಮಾಡಿದ್ದಾರೆ. ಮಾದ್ಯಮಗಳು ಪ್ರಶ್ನೆ ಮಾಡುವಾಗ ಬಿಜೆಪಿ ಸ್ಥಳೀಯ ಮುಖಂಡರು ಮಧ್ಯಪ್ರವೇಶ ಮಾಡುತ್ತಿದ್ದರು. ಆದರೂ ಅವರ ಎದುರೇ 5 ಲಕ್ಷ ಹಣ ಕೊಟ್ಟಿರುವುದಾಗಿ ರಾಜು ಅತ್ತಿಗೆ ಕುಮಾರಿ ಒಪ್ಪಿಕೊಂಡರು. ಸದ್ಯ ಹಣ ಕೊಟ್ಟು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪೇಚಿಗೆ ಸಿಲುಕಿರುವುದಂತೂ ಸತ್ಯ.