ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಮುಲ್ ಚುನಾವಣೆ ಸೋಲು: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಸಿ ಬಲರಾಂ ಆತ್ಮಹತ್ಯೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 20: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಸಿ ಬಲರಾಂ ಅವರು ಮೈಮುಲ್ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೇ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಕೆ.ಸಿ ಬಲರಾಂ ಅವರು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಮೈಮುಲ್ ಮಾಜಿ ನಿರ್ದೇಶಕರಾದ್ದರು.

 ಮೈಸೂರು, ಮೈಮುಲ್ ಚುನಾವಣೆ: ಜಿ.ಟಿ.ದೇವೇಗೌಡರ ಮುಂದೆ ಹೀನಾಯವಾಗಿ ಮುಗ್ಗರಿಸಿದ ಕುಮಾರಣ್ಣ ಪಡೆ ಮೈಸೂರು, ಮೈಮುಲ್ ಚುನಾವಣೆ: ಜಿ.ಟಿ.ದೇವೇಗೌಡರ ಮುಂದೆ ಹೀನಾಯವಾಗಿ ಮುಗ್ಗರಿಸಿದ ಕುಮಾರಣ್ಣ ಪಡೆ

ವಿಷ ಸೇವಿಸಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಬೇಸರಗೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ.

Election Defeat: Mymul Former Director KC Balaram Committs Suicide

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ಅವರ ಬೆಂಬಲಿಗ ಅಭ್ಯರ್ಥಿಗಳು ಹಾಗೂ ಇವರ ಪುತ್ರ ಕೂಡ ಪರಾಭವಗೊಂಡಿದ್ದರು. ಜೊತೆಗೆ ಮೈಮುಲ್ ಚುನಾವಣೆಯಲ್ಲೂ ಸೋಲನ್ನು ಕಂಡ ಇವರು ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
KC Balaram, who was identified as a close friend of former chief minister Siddaramaiah, had attempted suicide in the wake of losing Mymul election, died in Bengaluru Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X