ಮೈಸೂರು ದಸರಾಕ್ಕೂ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ
Recommended Video

ಮೈಸೂರು, ಅಕ್ಟೋಬರ್. 8: ಚುನಾವಣಾ ಮಾದರಿ ನೀತಿ ಸಂಹಿತೆ ದಸರಾ ಮೇಲೂ ಪರಿಣಾಮ ಬೀರಿದ್ದು, ಜನಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳುವ ಬಗ್ಗೆ ಜಿಜ್ಞಾಸೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಮೂರು ಪ್ರಮುಖ ಕಾರ್ಯಕ್ರಮಗಳಿಂದ ಸಚಿವರು, ಶಾಸಕರು ದೂರ ಉಳಿದರು.
ಪ್ರವಾಸೋದ್ಯಮ ಇಲಾಖೆ ಸರಸ್ವತಿಪುರಂ ಈಜುಕೊಳದಲ್ಲಿ ಆಯೋಜಿಸಿದ್ದ ಟ್ರಯ್ಲಾಥಾನ್ , ಹಾಪ್ ಆನ್ ಹಾಪ್ ಆಫ್, ಲಲಿತಮಹಲ್ ಹೆಲಿಪ್ಯಾಡ್ ಮೈದಾನ ದಲ್ಲಿ ನಡೆದ ಗ್ರಾವೆಲ್ ಫೆಸ್ಟ್ ಗೆ ಚಾಲನೆ ಕೊಡಬೇಕಿತ್ತು.
ಆದರೆ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಪಾಲ್ಗೊಳ್ಳಲಿಲ್ಲ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಕೆ.ಆರ್. ನಗರ ವಿಧಾನಸಭಾಕ್ಷೇತ್ರ ಸೇರಿದ್ದರೂ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ.
ಹಾಗಾಗಿ ಮೈಸೂರು, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆದರೆ ಇಲ್ಲಿ ಪೂರ್ವ ನಿಗದಿಯಂತೆ ನಾಡಹಬ್ಬ ದಸರಾ ನಡೆಯುತ್ತಿರುವುದರಿಂದ ಹಾಗೂ ಇದು ಸಾಂಸ್ಕೃತಿಕ ಹಬ್ಬವಾಗಿರುವುದರಿಂದ ಕೆಲವು ಸ್ಪಷ್ಟನೆ ಕೋರಿ ಆಯೋಗಕ್ಕೆ ಪತ್ರ ಬರೆಯಲಾಗುತ್ತದೆ ಎಂದರು.
ಈಗ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಚಿವರು ದಸರಾ ಕಾರ್ಯಕ್ರಮಗಳಲ್ಲಿ ಸದ್ಯಕ್ಕೆ ಭಾಗಿಯಾಗಲು ಸಾಧ್ಯವಿಲ್ಲವೆಂದು ಮನವರಿಕೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ ಹೊತ್ತಿಗೆ ಆಯೋಗದಿಂದ ನಮಗೆ ಉತ್ತರ ಬಂದ ಬಳಿಕ ಮುಂದೇನು ಮಾಡಬಹುದು ಎಂಬುದು ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications