ಜೀವಕ್ಕೇ ಕುತ್ತು ತರುತ್ತಿದ್ದ ರಸ್ತೆಗೆ ಬಿದ್ದ ವಿದ್ಯುತ್ ತಂತಿ
ಮೈಸೂರು, ಜನವರಿ 28: ರಸ್ತೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ ತುಂಡಾಗಿ ಬಿದ್ದ ಘಟನೆ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ತಿ.ನರಸೀಪುರ ಪಟ್ಟಣದ ಸೇಂಟ್ ಮೇರೀಸ್ ರಸ್ತೆ ಮಧ್ಯದಲ್ಲಿ ಈ ಘಟನೆ ನಡೆದಿದ್ದು, ಮಾಲೀಕರೊಬ್ಬರು ಮಣ್ಣನ್ನು ಟಿಪ್ಪರ್ ಮೂಲಕ ಸುರಿಯುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ವಾಹನ ತಾಗಿ ಈ ಘಟನೆ ಸಂಭವಿಸಿದೆ.
ಈಶ್ವರಿ ಕಾಂಪ್ಲೆಕ್ಸ್ ಮಾಲೀಕರು ಸಮುಚ್ಚಯದ ಮುಂಭಾಗ ಸಮತಟ್ಟು ಮಾಡಿಸುವ ಸಲುವಾಗಿ ಶನಿವಾರ ಬೆಳಗ್ಗೆ ಟಿಪ್ಪರ್ ನಲ್ಲಿ ಮಣ್ಣು ತಂದು ಸುರಿಯುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ಕಂಬದ ಮುಖ್ಯ ತಂತಿಗೆ ಟಿಪ್ಪರ್ ತಗುಲಿ, ಅದು ತುಂಡಾಗಿ ಬಿದ್ದಿದೆ. ಬೆಳಗ್ಗೆ 7.45ರ ವೇಳೆಯಲ್ಲಿ ಘಟನೆ ನಡೆದಿದ್ದರಿಂದ ರಸ್ತೆಯಲ್ಲಿ ಜನ, ವಾಹನ ಸಂಚಾರವಾಗಲೀ ವಿರಳವಾಗಿತ್ತು. ಹೀಗಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಕೂಡಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ತಂತಿ ತುಂಡಾಗಿ ಟಿಪ್ಪರ್ ಮೇಲೆ ಬಿದ್ದಿದ್ದರೂ ಅದು ಸುಟ್ಟು ಭಸ್ಮವಾಗುವ ಸಾಧ್ಯತೆ ಹೆಚ್ಚಿತ್ತು. ಕಾಂಪ್ಲೆಕ್ಸ್ ಮಾಲೀಕರ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.

ರಸ್ತೆ ಮಧ್ಯದಲ್ಲಿ ವಿದ್ಯುತ್ ತಂತಿ ಹಾದು ಹೋಗಿರುವುದು ಗೊತ್ತಿದ್ದರೂ ಕಾಂಪ್ಲೆಕ್ಸ್ ಮಾಲೀಕರು ಮುಂಜಾಗ್ರತೆ ವಹಿಸದೆ ಟಿಪ್ಪರ್ ಮೂಲಕ ಮಣ್ಣು ಸುರಿಯಲು ಮುಂದಾಗಿದ್ದಾರೆ ಎಂದು ತಾಲೂಕು ಪಂಚಾಯಿತಿ ಸದಸ್ಯ ರಮೇಶ್ ಆರೋಪಿಸಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications