ಜೀವಕ್ಕೇ ಕುತ್ತು ತರುತ್ತಿದ್ದ ರಸ್ತೆಗೆ ಬಿದ್ದ ವಿದ್ಯುತ್ ತಂತಿ
ಮೈಸೂರು, ಜನವರಿ 28: ರಸ್ತೆಯಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ ತುಂಡಾಗಿ ಬಿದ್ದ ಘಟನೆ ತಿ.ನರಸೀಪುರ ಪಟ್ಟಣದಲ್ಲಿ ನಡೆದಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ತಿ.ನರಸೀಪುರ ಪಟ್ಟಣದ ಸೇಂಟ್ ಮೇರೀಸ್ ರಸ್ತೆ ಮಧ್ಯದಲ್ಲಿ ಈ ಘಟನೆ ನಡೆದಿದ್ದು, ಮಾಲೀಕರೊಬ್ಬರು ಮಣ್ಣನ್ನು ಟಿಪ್ಪರ್ ಮೂಲಕ ಸುರಿಯುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ವಾಹನ ತಾಗಿ ಈ ಘಟನೆ ಸಂಭವಿಸಿದೆ.
ಈಶ್ವರಿ ಕಾಂಪ್ಲೆಕ್ಸ್ ಮಾಲೀಕರು ಸಮುಚ್ಚಯದ ಮುಂಭಾಗ ಸಮತಟ್ಟು ಮಾಡಿಸುವ ಸಲುವಾಗಿ ಶನಿವಾರ ಬೆಳಗ್ಗೆ ಟಿಪ್ಪರ್ ನಲ್ಲಿ ಮಣ್ಣು ತಂದು ಸುರಿಯುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ಕಂಬದ ಮುಖ್ಯ ತಂತಿಗೆ ಟಿಪ್ಪರ್ ತಗುಲಿ, ಅದು ತುಂಡಾಗಿ ಬಿದ್ದಿದೆ. ಬೆಳಗ್ಗೆ 7.45ರ ವೇಳೆಯಲ್ಲಿ ಘಟನೆ ನಡೆದಿದ್ದರಿಂದ ರಸ್ತೆಯಲ್ಲಿ ಜನ, ವಾಹನ ಸಂಚಾರವಾಗಲೀ ವಿರಳವಾಗಿತ್ತು. ಹೀಗಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಕೂಡಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ತಂತಿ ತುಂಡಾಗಿ ಟಿಪ್ಪರ್ ಮೇಲೆ ಬಿದ್ದಿದ್ದರೂ ಅದು ಸುಟ್ಟು ಭಸ್ಮವಾಗುವ ಸಾಧ್ಯತೆ ಹೆಚ್ಚಿತ್ತು. ಕಾಂಪ್ಲೆಕ್ಸ್ ಮಾಲೀಕರ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.

ರಸ್ತೆ ಮಧ್ಯದಲ್ಲಿ ವಿದ್ಯುತ್ ತಂತಿ ಹಾದು ಹೋಗಿರುವುದು ಗೊತ್ತಿದ್ದರೂ ಕಾಂಪ್ಲೆಕ್ಸ್ ಮಾಲೀಕರು ಮುಂಜಾಗ್ರತೆ ವಹಿಸದೆ ಟಿಪ್ಪರ್ ಮೂಲಕ ಮಣ್ಣು ಸುರಿಯಲು ಮುಂದಾಗಿದ್ದಾರೆ ಎಂದು ತಾಲೂಕು ಪಂಚಾಯಿತಿ ಸದಸ್ಯ ರಮೇಶ್ ಆರೋಪಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications