ಜಂಬೂಸವಾರಿ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿ ಅರ್ಜುನ ಅಂಡ್ ಟೀಂ
ಮೈಸೂರು, ಅಕ್ಟೋಬರ್ 20 : ಒಂಬತ್ತು ದಿನಗಳ ವೈಭವದ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಯಶಸ್ವಿಯಾಗಿ ತೆರೆಬಿದ್ದಿದೆ. ಇನ್ನು ಜಂಬೂ ಸವಾರಿಯಲ್ಲಿ 750 ಕೆಜಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿ ಲಕ್ಷಾಂತರ ಮಂದಿ ಪ್ರವಾಸಿಗರ ಕೇಂದ್ರ ಬಿಂದುವಾಗಿದ್ದ ಕ್ಯಾಪ್ಟನ್ ಅರ್ಜುನ ಇದೀಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾನೆ.
ಕಳೆದ ಒಂದು ತಿಂಗಳಿಂದ ಮೈಸೂರಿನಲ್ಲಿ ಬೀಡುಬಿಟ್ಟು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆ ನಾಳೆ ಬೆಳಿಗ್ಗೆ 9:30ಕ್ಕೆ ಅರಮನೆಯಿಂದ ಕಾಡಿನೆಡೆಗೆ ಪ್ರಯಾಣ ಆರಂಭಿಸಲಿದೆ.
ಹೀಗಾಗಿ ಇಂದು ಎಲ್ಲಾ ಆನೆಗಳಿಗೂ ನೀರಿನ ಮಜ್ಜನ ಸ್ನಾನ ಮಾಡಿಸಲಾಯಿತು. ಸ್ವಚ್ಛಂದವಾಗಿ ನೀರಿನಲ್ಲಿ ಆಟವಾಡುವ ಮೂಲಕ ಕ್ಯಾಪ್ಟನ್ ಅರ್ಜುನ ಪುಲ್ ಕೂಲ್ ಕೂಲ್ ಆಗಿದ್ದಾನೆ.

ಗಜಪಡೆಗಳಿಗೆ ಅಲಂಕರಿಸಿದ್ದ ವಸ್ತುಗಳನ್ನು ತೆಗೆದು ಜೋಡಿಸಿ ಭದ್ರವಾಗಿ ಇಡಲಾಯಿತು. ಇನ್ನು ಕಾವಾಡಿ, ಮಾವುತರ ಕುಟುಂಬದವರು ತಮ್ಮ ಬಟ್ಟೆ ಬರೆಗಳನ್ನು ಒಗೆದು, ಸ್ವಚ್ಛಗೊಳಿಸಿದರು. ತಮ್ಮ ಸಾಮಾನು ಸರಂಜಾಮನ್ನು ಸಿದ್ಧಪಡಿಸಿಕೊಂಡು ಹೊರಡಲು ಅನುವಾದರು.

ಕೃತಜ್ಞತೆ ಸಲ್ಲಿಸಿದ ಮಾವುತ ವಿನು :
ಇತ್ತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿದ್ದಕ್ಕೆ ಅರ್ಜುನನ ಸಾರಥಿ ವಿನು ತಾಯಿ ಚಾಮುಂಡೇಶ್ವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಾನು ಅರ್ಜುನನಿಗೆ ಎರಡನೇ ಬಾರಿ ಸಾರಥಿಯಾಗಿ ಅಂಬಾರಿ ಮುನ್ನಡೆಸಿದ್ದು ಖುಷಿಯಾಗಿದೆ. ಇದಕ್ಕೆಲ್ಲಕ್ಕೂ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಕಾರಣ. ನಿಗದಿತ ಸಮಯಕ್ಕೆ ನಾವು ಗುರಿ ತಲುಪಿದ್ದೇವೆ. ಅಂಬಾರಿ ನಡೆಸುವ ವೇಳೆ ಯಾವುದೇ ತೊಂದರೆಯಾಗಿಲ್ಲ. ಅಂಬಾರಿ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು ಎಂದು ಅರ್ಜುನನ ಸಾರಥಿ ವಿನು ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications