ಪುಂಡಾನೆ, ಕೋಪಿಷ್ಟನಾಗಿದ್ದ ಅರ್ಜುನ ಬದಲಾಗಿದ್ದೇಗೆ..? ಇಲ್ಲಿದೆ ದಸರಾ ಕ್ಯಾಪ್ಟನ್ನ ಇಂಟ್ರಸ್ಟಿಂಗ್ ಸ್ಟೋರಿ
ಮೈಸೂರು, ಡಿಸೆಂಬರ್ 05: ಹೆಸರಿನಲ್ಲಿಯೇ ಗಾಂಭೀರ್ಯ ಹೊಂದಿದ್ದ ಸಾಕಾನೆ, ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆಯೊಂದಿಗೆ ಕಾದಾಡಿ ವೀರಮರಣವನ್ನಪ್ಪಿದೆ ಎನ್ನುವ ಸುದ್ದಿ ಎಲ್ಲರನ್ನು ನೋವಿನ ಕಂದಕಕ್ಕೆ ತಳ್ಳಿದೆ. ಅದರಲ್ಲೂ ಅದು ವಾಸ್ತವ್ಯ ಹೂಡಿದ್ದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರದಲ್ಲಂತೂ ನೀರವ ಮೌನ ಮನೆ ಮಾಡಿದೆ.
ಮೊದಲಿಗೆ ಪುಂಡನಾಗಿ ಕೇಡಿ, ರೌಡಿ, ಕೋಪಿಷ್ಟ ಎಂದೆಲ್ಲ ಕರೆಯಿಸಿಕೊಂಡಿದ್ದರೂ ಆ ನಂತರ ಅರ್ಜುನ ಎಲ್ಲರ ಪ್ರೀತಿಗೆ ಪಾತ್ರನಾಗುವುದರೊಂದಿಗೆ ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದನು. ಆದರೆ ವಯಸ್ಸಿನ ಕಾರಣದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುಗೆ ನೀಡಿ ತಾನು ನಿಶಾನೆ ಆನೆಯಾಗಿ ಜಂಬೂಸವಾರಿ ಮುನ್ನಡೆಸುವ ಕಾರ್ಯವನ್ನು ವಹಿಸಿಕೊಂಡಿದ್ದನು. ಆದರೆ ಈಗ ಕಾಡಾನೆಗಳಿಂದ ದಾಳಿಗೊಳಗಾಗಿ ಸಾವನ್ನಪ್ಪಿದ ಸಾಕಾನೆಗಳ ಸಾಲಿಗೆ ಅರ್ಜುನ ಸೇರ್ಪಡೆಯಾಗಿ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದೇ ಕಷ್ಟವಾಗುತ್ತಿದೆ.

ಕಾಡಾನೆಗಳೊಂದಿಗೆ ಕಾದಾಡಿ ಸತ್ತ ಸಾಕಾನೆಗಳ ದೊಡ್ಡ ಪಟ್ಟಿಯೇ ಇದೆ ಅದರಲ್ಲೀಗ ಅರ್ಜುನ ಸೇರಿದ್ದಾನೆ. ಇಲ್ಲಿವರೆಗೆ ಬಳ್ಳೆ ಶಿಬಿರ ರಾಜನಂತಿದ್ದ ಅರ್ಜುನ ಅಕಾಲಿಕ ಸಾವಿಗೆ ತುತ್ತಾಗಿರುವುದು ತಾಲೂಕಿನ ಜನರನ್ನು, ಪ್ರಾಣಿಪ್ರಿಯರನ್ನು ದುಃಖ ಆವರಿಸಿದೆ. ಅರ್ಜುನನಿಗೆ ವಯಸ್ಸಾದ ಕಾರಣ ಕಾಡು ಪ್ರಾಣಿಗಳ ಕಾರ್ಯಾಚರಣೆ ಹೊರತುಪಡಿಸಿ ಬಿಡುವಿನ ವೇಳೆಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾವನದ ಮಧ್ಯೆ ಇರುವ ಐತಿಹಾಸಿಕ ಬಳ್ಳೆ ಆನೆ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದನು.
ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ಪ್ರಾಣಿಪ್ರಿಯರು
ಈ ಹಿಂದೆ 2021ರಲ್ಲಿ ಇದೇ ಶಿಬಿರದಲ್ಲಿದ್ದ ದುರ್ಗಾಪರಮೇಶ್ವರಿ ಹೆಣ್ಣಾನೆಗೆ ಮರಿಜನಿಸಲು ಈತ ಕಾರಣನಾಗಿದ್ದನು. ಬಳ್ಳೆ ಶಿಬಿರಕ್ಕೆ ಆಗಮಿಸುತ್ತಿದ್ದವರು ಈತನೊಂದಿಗೆ ಸೇಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುತ್ತಿದ್ದರು. ಇದೀಗ ಅದೇ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಮತ್ತೆ ಹುಟ್ಟಿ ಬಾ ಅರ್ಜುನ, ಅರ್ಜುನ ಮಿಸ್ ಯು ಎಂದು ಸಂತಾಪ ಸೂಚಿಸುತ್ತಿರುವುದು ಅರ್ಜುನನ ಜನಪ್ರಿಯತೆಗೆ ಸಾಕ್ಷಿಯಾಗಿದೆ.
ಬಳ್ಳೆ ಶಿಬಿರದಲ್ಲಿದ್ದ ಅರ್ಜುನ, ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದಲ್ಲದೇ, ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಕ್ಯಾಪ್ಟನ್ ಅರ್ಜುನನಾಗಿ ಉಳಿದಿದ್ದ. 1968ರಲ್ಲಿ ಕೊಡಗು ಜಿಲ್ಲೆಯ ತಿತಿಮತಿ ಬಳಿಯ ಬೆಂಡೆಕಟ್ಟೆಯಲ್ಲಿ ಖೆಡ್ಡಾ ವಿಧಾನದಲ್ಲಿ 15 ವರ್ಷದ ಪುಂಡ ಅರ್ಜನನನ್ನು ಸೆರೆ ಹಿಡಿದು ಪಳಗಿಸಲಾಗಿತ್ತು. 2000ರ ಇಸವಿಯಿಂದ ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದ ಅರ್ಜುನ 3 ವರ್ಷ ವಿವಿಧ ಕಾರಣದಿಂದ ದಸರಾದಿಂದ ದೂರ ಉಳಿದಿದ್ದ. ಬಲರಾಮ ಆನೆ ಅಂಬಾರಿ ಹೊರುವ ಕಾರ್ಯದಿಂದ ನಿವೃತ್ತಿ ಹೊಂದಿದ ಮೇಲೆ 2012ರಿಂದ 2019 ರವರೆಗೆ ಯಶಸ್ವಿಯಾಗಿ ಅಂಬಾರಿ ಹೊರುವ ಕಾರ್ಯವನ್ನು ನಿರ್ವಹಿಸಿದ್ದನು.

ಇನ್ನು ಅರ್ಜುನ ನೆನಪು ಮಾತ್ರ
ಕಟ್ಟುಮಸ್ತಾದ ದೇಹ ಹೊಂದಿದ್ದ ಅರ್ಜುನ 3.75 ಮೀಟರ್ ಉದ್ದ 2.98 ಮೀಟರ್ ಎತ್ತರ 5800 ರಿಂದ 6000 ಕೆ.ಜಿ. ತೂಕವಿದ್ದನು, ಹುಲಿ ಸೆರೆ, ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲಿ ಪರಿಣತಿ ಹೊಂದಿದ್ದ ಈತ ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ಒರಿಸ್ಸಾಗಳಲ್ಲಿ ಕಾಡಾನೆಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿರುವುದು ಈತನ ಖ್ಯಾತಿಗೆ ಸಾಕ್ಷಿಯಾಗಿದೆ.
ಅರ್ಜುನ ಎಂತಹದ್ದೇ ಕಾಡುಪ್ರಾಣಿಯನ್ನಾದರೂ ಹುಡುಕಿ ಹಿಡಿಯುವುದರಲ್ಲಿ ನಿಸ್ಸೀಮನಾಗಿದ್ದನು. 2019ರಲ್ಲಿ ನಾಲ್ಕು ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಈತನನ್ನು ಬಳಸಿಕೊಳ್ಳಲಾಗಿತ್ತು. ಅದರಲ್ಲಿ ಯಶಸ್ಸು ಸಾಧಿಸಿದಕ್ಕಾಗಿ ಅರ್ಜುನ ಮತ್ತು ಮಾವುತ ವಿನುಗೆ ಸರ್ಕಾರ ಪ್ರಶಸ್ತಿ ನೀಡಿತ್ತು. ಆದರೆ ಇದೀಗ ಅದೆಲ್ಲವೂ ಬರೀ ನೆನಪು ಮಾತ್ರ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications