ಸಫಾರಿ ವಾಹನದ ಮೇಲೆ ದಾಳಿ ನಡೆಸಲು ಓಡಿ ಬಂದ ಆನೆ

ಚಾಮರಾಜನಗರ, ಸೆಪ್ಟೆಂಬರ್ 11: ಬಂಡೀಪುರದಲ್ಲಿ ಮತ್ತೆ ವಾಹನವೊಂದರ ಮೇಲೆ ಒಂಟಿ ಸಲಗ ದಾಳಿ ನಡೆಸಲು ಮುಂದಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ ಪ್ರವಾಸಿಗರಿದ್ದ ವಾಹನದ ಮೇಲೆ ಸಲಗವೊಂದು ದಾಳಿ ನಡೆಸಿದೆ. ಪ್ರಯಾಣಿಕರು ಸಫಾರಿ ವಾಹನದಲ್ಲಿ ಕುಳಿತು ಆನೆಯನ್ನು ನೋಡುತ್ತಿದ್ದಾಗ ಏಕಾಏಕಿ ಆನೆ ಓಡಿ ಬಂದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

Elephant attack on Bandipura Safari Van

ಆನೆ ಓಡಿಬರುತ್ತಿದ್ದುದನ್ನು ಕಂಡು ವಾಹನದೊಳಗಿದ್ದವರು ಬೆಚ್ಚಿಬಿದ್ದಿದ್ದಾರೆ. ಚಾಲಕ ತಕ್ಷಣ ವಾಹನವನ್ನು ವೇಗವಾಗಿ ಮುಂದಕ್ಕೆ ಓಡಿಸಿಕೊಂಡು ಹೋಗಿದ್ದಾನೆ. ಆನೆ ದಾಳಿಯ ಘಟನೆಗಳು ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗುತ್ತಿದ್ದು, ಇನ್ನಾದರೂ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+