Mysuru: ಅರಮನೆ ಆವರಣದಿಂದ ಹೊರ ಬಂದು ಆನೆಗಳ ಗುದ್ದಾಟ; ಆತಂಕ ಸೃಷ್ಟಿ
ಅದ್ದೂರಿ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಜಂಬೂ ಸವಾರಿಗಾಗಿ ಆನೆಗಳು ಕೂಡ ತಾಲೀಮು ನಡೆಸುತ್ತಿವೆ. ಆದರೆ ಶುಕ್ರವಾರ ರಾತ್ರಿ ಅರಮನೆ ಆವರಣದಲ್ಲಿ ಆನೆಗಳು ಗುದ್ದಾಡಿಕೊಂಡು ರಸ್ತೆಗೆ ಓಡಿಬಂದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಸರಾ ಹಬ್ಬಕ್ಕೆ ತಾಲೀಮು ನಡೆಸುವ ಆನೆಗಳೇ ಜಗಳ ಆಡಿಕೊಂಡಿರುವುದು ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿತ್ತು.
ಶುಕ್ರವಾರ ರಾತ್ರಿ 7:45ರ ಸಮಯದಲ್ಲಿ ಆಹಾರ ತಿನ್ನುವ ಸಂದರ್ಭದಲ್ಲಿ ಧನಂಜಯ ಹಾಗೂ ಕಂಜನ್ ಆನೆಗಳ ನಡುವೆ ಗುದ್ದಾಟ ಶುರುವಾಗಿದೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಏಕಾಏಕಿ ಕಂಜನ್ ಹಾಗೂ ಧನಂಜಯ ಆನೆಗಳು ಓಡುತ್ತಾ ಹೊರಬಂದವು. ಮಾವುತನಿಲ್ಲದ ಕಂಜನ್ ಆನೆಯನ್ನು ಧನಂಜಯ್ ಆನೆ ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ.

ಎರಡೂ ಆನೆಗಳು ದೊಡ್ಡಕೆರೆ ಮೈದಾನದ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ನುಗ್ಗುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿ ಹೋದರು. ತಕ್ಷಣ ಜಾಗೃತರಾದ ಮಾವುತರು ಹಾಗೂ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಮೂಲಕ ಭಾರಿ ಅನಾಹುತ ತಪ್ಪಿತು. ಸ್ಥಳದಲ್ಲಿ ನೆರೆದಿದ್ದ ನಾಗರಿಕರು ನೆಮ್ಮದಿಯ ನಿಟ್ಟುಸಿರುಬಿಟ್ಟರು.
ಕಂಜನ್ ಆನೆ ಕಾಲಿಗೆ ಗಾಯ
ದುಬಾರೆ ಆನೆ ಶಿಬಿರದ 25 ವರ್ಷದ ಕಂಜನ್ ಆನೆ ಎರಡನೇ ಬಾರಿ ದಸರಾದಲ್ಲಿ ಭಾಗವಹಿಸುತ್ತಿದೆ. ಆದರೆ ಈ ಬಾರಿ ಕಾಲಿಗೆ ಗಾಯವಾದ ಕಾರಣ ತಾಲೀಮಿನಿಂದ ವಿನಾಯಿತಿ ನೀಡಿ ವಿಶ್ರಾಂತಿ ನೀಡಲಾಗಿತ್ತು. ಅರಮನೆಯಿಂದ ಹೊರಗೆ ಓಡುವಾಗಲೂ ಅದು ಕುಂಟುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications