Mysuru: ಅರಮನೆ ಆವರಣದಿಂದ ಹೊರ ಬಂದು ಆನೆಗಳ ಗುದ್ದಾಟ; ಆತಂಕ ಸೃಷ್ಟಿ
ಅದ್ದೂರಿ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಜಂಬೂ ಸವಾರಿಗಾಗಿ ಆನೆಗಳು ಕೂಡ ತಾಲೀಮು ನಡೆಸುತ್ತಿವೆ. ಆದರೆ ಶುಕ್ರವಾರ ರಾತ್ರಿ ಅರಮನೆ ಆವರಣದಲ್ಲಿ ಆನೆಗಳು ಗುದ್ದಾಡಿಕೊಂಡು ರಸ್ತೆಗೆ ಓಡಿಬಂದ ಪರಿಣಾಮ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಸರಾ ಹಬ್ಬಕ್ಕೆ ತಾಲೀಮು ನಡೆಸುವ ಆನೆಗಳೇ ಜಗಳ ಆಡಿಕೊಂಡಿರುವುದು ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿತ್ತು.
ಶುಕ್ರವಾರ ರಾತ್ರಿ 7:45ರ ಸಮಯದಲ್ಲಿ ಆಹಾರ ತಿನ್ನುವ ಸಂದರ್ಭದಲ್ಲಿ ಧನಂಜಯ ಹಾಗೂ ಕಂಜನ್ ಆನೆಗಳ ನಡುವೆ ಗುದ್ದಾಟ ಶುರುವಾಗಿದೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಏಕಾಏಕಿ ಕಂಜನ್ ಹಾಗೂ ಧನಂಜಯ ಆನೆಗಳು ಓಡುತ್ತಾ ಹೊರಬಂದವು. ಮಾವುತನಿಲ್ಲದ ಕಂಜನ್ ಆನೆಯನ್ನು ಧನಂಜಯ್ ಆನೆ ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ.

ಎರಡೂ ಆನೆಗಳು ದೊಡ್ಡಕೆರೆ ಮೈದಾನದ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ನುಗ್ಗುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿ ಹೋದರು. ತಕ್ಷಣ ಜಾಗೃತರಾದ ಮಾವುತರು ಹಾಗೂ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಮೂಲಕ ಭಾರಿ ಅನಾಹುತ ತಪ್ಪಿತು. ಸ್ಥಳದಲ್ಲಿ ನೆರೆದಿದ್ದ ನಾಗರಿಕರು ನೆಮ್ಮದಿಯ ನಿಟ್ಟುಸಿರುಬಿಟ್ಟರು.
ಕಂಜನ್ ಆನೆ ಕಾಲಿಗೆ ಗಾಯ
ದುಬಾರೆ ಆನೆ ಶಿಬಿರದ 25 ವರ್ಷದ ಕಂಜನ್ ಆನೆ ಎರಡನೇ ಬಾರಿ ದಸರಾದಲ್ಲಿ ಭಾಗವಹಿಸುತ್ತಿದೆ. ಆದರೆ ಈ ಬಾರಿ ಕಾಲಿಗೆ ಗಾಯವಾದ ಕಾರಣ ತಾಲೀಮಿನಿಂದ ವಿನಾಯಿತಿ ನೀಡಿ ವಿಶ್ರಾಂತಿ ನೀಡಲಾಗಿತ್ತು. ಅರಮನೆಯಿಂದ ಹೊರಗೆ ಓಡುವಾಗಲೂ ಅದು ಕುಂಟುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications