Mysuru Dasara: ರಿಲ್ಯಾಕ್ಸ್ ಮೂಡಿಗೆ ಜಾರಿದ ಜಂಬೂ ಸವಾರಿ ಗಜಪಡೆ
ಅದ್ದೂರಿಯಾಗಿ ಮೈಸೂರು ದಸರಾ ಜಂಬೂಸವಾರಿ ಸಂಪನ್ನವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ನಾನಾ ತಾಲೀಮಿನಲ್ಲಿ ನಿರತವಾಗಿ ಜಂಬೂಸವಾರಿ ಯಶಸ್ವಿಗೊಳಿಸಿದ ಗಜಪಡೆ ಭಾನುವಾರ ರಿಲ್ಯಾಕ್ಸ್ ಮೂಡಿಗೆ ಜಾರಿವೆ. ಅಭಿಮನ್ಯು ಐದನೆ ಬಾರಿ ಅಂಬಾರಿ ಹೊತ್ತು ಯಶಸ್ವಿಯಾಗಿ ಬನ್ನಿಮಂಟಪ ತಲುಪಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಹಿಡಿದು ಮಾವುತರು ಹಾಗೂ ಕಾವಾಡಿಗರು ಸಂಭ್ರಮದಲ್ಲಿದ್ದಾರೆ.
ಅಭಿಮನ್ಯು ಮಾವುತ ವಸಂತ ಯುದ್ಧ ಗೆದ್ದ ಸಂಭ್ರಮದಲ್ಲಿದ್ದಾರೆ. ಅಲ್ಲದೆ, ಇತರೆ ಆನೆಗಳು ಯಾವುದೇ ಸಮಸ್ಯೆ ಇಲ್ಲದೆ ಮೆರವಣಿಯಲ್ಲಿ ಸಾಗಿಬಂದವು. ಈ ಹಿನ್ನೆಲೆಯಲ್ಲಿ ಆನೆಗಳಿಗೆ ಮೀಸಲಾದ ಅರಮನೆ ಆವರಣದಲ್ಲಿ ನಿರ್ಮಿಸಿರುವ ತೊಟ್ಟಿಯಲ್ಲಿ ಸ್ನಾನ ಮಾಡಿಸಲಾಯಿತು.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಆನೆಗಳಾದ ಅಭಿಮನ್ಯು, ಭೀಮ, ಧನಂಜಯ, ಗೋಪಿ, ಪ್ರಶಾಂತ, ಹಿರಣ್ಯ, ಕಂಜನ್, ಸುಗ್ರೀವ, ಲಕ್ಷ್ನಿ ಇದೀಗ ರಿಲ್ಯಾಕ್ಸ್ ಮೂಡಿನಲ್ಲಿವೆ. ಶನಿವಾರ ದಸರಾ ಜಂಬೂ ಸವಾರಿ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಇದೀಗ ಅರಮನೆ ಆವರಣದಲ್ಲಿ ದಣಿವಾರಿಸಿಕೊಳ್ಳುತ್ತಿವೆ.
ಭಾನುವಾರ ಆನೆಗಳಿಗೆ ಯಾವುದೇ ತಾಲೀಮು, ಕಸರತ್ತು ಇರಲಿಲ್ಲ. ಹಾಗಾಗಿ ಆನೆಗಳು ರಿಲ್ಯಾಕ್ಸ್ ಮೂಡ್ಗೆ ಜಾರಿದ್ದವು. ಮಾವುತರು ಆನೆಗಳನ್ನು ತೊಳೆಯುತ್ತಿದ್ದರೆ, ನೀರಿನಲ್ಲಿ ಆಟವಾಡುತ್ತಾ ಆನೆಗಳು ನಿರಾಳವಾಗಿದ್ದು ಕಂಡುಬಂದಿತು. ಇದೆ ಮೊದಲ ಬಾರಿಗೆ ಆಗಮಿಸಿದ್ದ ಏಕಲವ್ಯ ದಸರಾದಲ್ಲಿ ಭಾಗವಹಿಸಿ ಸಂಭ್ರಮಿಸಿದ. ಆದರೆ, ರೋಹಿತ, ದೊಡ್ಡಹರವೆ ಲಕ್ಷ್ಮಿಗೆ ಜಂಬೂಸವಾರಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿಲ್ಲ.
ಜಂಬೂಸವಾರಿ ಮುಗಿದ ಹಿನ್ನೆಲೆಯಲ್ಲಿ ದಸರಾ ಆನೆಗಳು ಅರಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರೆ ಜನರು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಜಂಬೂಸವಾರಿ ಮುಗಿದ ಕಾರಣ ಮಾವುತರು ಹಾಗೂ ಕಾವಾಡಿಗರು ಯಾವುದೇ ಪ್ರತಿರೋಧ ತೋರಿಸದೆ ಫೋಟೋ ತೆಗೆಸಿಕೊಳ್ಳಲು ಸಹಕರಿಸಿದವು.
50 ದಿನ ಆನೆಗಳಿಗೆ ಉತ್ತಮ ತರಬೇತಿ, ತಾಲೀಮು ಕೊಟ್ಟು ಮಾವುತರು ಹಾಗೂ ಕಾವಾಡಿಗರು ಈ ಬಾರಿಯ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ್ದಾರೆ. ಹಾಗಾಗಿ ಅಕ್ಟೋಬರ್ 14ರಂದು ಗಜಪಡೆಗೆ ಬೀಳ್ಕೊಡುಗೆ ನೀಡಲಾಗುತ್ತದೆ. ಇಷ್ಟು ದಿನ ಅರಮನೆಯಲ್ಲಿದ್ದ ಆನೆಗಳಿಗೆ ಸಂಪ್ರದಾಯದಂತೆ ಪೂಜೆ ನೆರವೇರಿಸಿ ಸ್ವ-ಸ್ಥಳಕ್ಕೆ ಕಳಿಸಿಕೊಡಲಾಗುತ್ತದೆ ಎಂದು ಡಿಸಿಎಫ್ ಪ್ರಭುಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆದ ಕಾರಣ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ. ಶನಿವಾರ ನಡೆದ ಜಂಬೂ ಸವಾರಿ ವೀಕ್ಷಿಸಲು ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದ್ದರು. ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಕಂಡು ಜನ ಸಂಭ್ರಮಿಸಿದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications