ಸತ್ತಿಗೆಹುಂಡಿ ಸಮೀಪ ಮಾವುತರನ್ನೇ ಬೀಳಿಸಿ 15 ಕಿ.ಮೀ ಓಡಿದ ಸಾಕಾನೆಗಳು
ಮೈಸೂರು, ನವೆಂಬರ್. 23: ಹುಲಿ ಸೆರೆ ಕಾರ್ಯಾಚರಣೆಗೆ ಆಗಮಿಸಿದ 2 ಸಾಕಾನೆಗಳು ಮಾವುತರನ್ನು ಬೀಳಿಸಿ, ನಾಡಿನತ್ತ ಓಡಿದ ಘಟನೆ ಎಚ್.ಡಿ. ಕೋಟೆ ತಾಲ್ಲೂಕಿನ ಸತ್ತಿಗೆಹುಂಡಿ ಸಮೀಪ ನಡೆದಿದೆ.
ನಾಗರಹೊಳೆ ಅಭಯಾರಣ್ಯದ ತಾರಕ ಜಲಾಶಯ ಸಮೀಪದಲ್ಲಿರುವ ಪೆಂಜಳ್ಳಿಮತ್ತು ಸತ್ತಿಗೆಹುಂಡಿ ಗ್ರಾಮಗಳಲ್ಲಿ ಒಂದು ವಾರದಿಂದ ಹುಲಿಯೊಂದು ರೈತರ ಜಮೀನುಗಳಲ್ಲಿ ಪ್ರತ್ಯಕ್ಷವಾಗಿ ದನಕರುಗಳ ಮೇಲೆ ದಾಳಿ ನಡೆಸಿ ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.
ಹುಲಿಯನ್ನು ಸೆರೆಹಿಡಿಯಬೇಕೆಂದು ಮತ್ತಿಗೋಡು ಸಾಕಾನೆ ಶಿಬಿರದಿಂದ ಅರಣ್ಯ ಇಲಾಖೆ ಅಧಿಕಾರಿಗಳು ದ್ರೋಣ ಮತ್ತು ಅಶೋಕ ಎಂಬ ಸಾಕಾನೆಗಳನ್ನು ಕರೆತಂದು ಗುರುವಾರ ಬೆಳಗ್ಗೆ ರತ್ನಮ್ಮ ಅವರ ಜಮೀನಿನಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದ್ದರು.

ಮಧ್ಯಾಹ್ನದ ವೇಳೆಗೆ ಸಾರ್ವಜನಿಕರು ಹುಲಿಯನ್ನು ಓಡಿಸಲು ಪಟಾಕಿ ಸಿಡಿಸಲು ಮುಂದಾಗುತ್ತಿದ್ದಂತೆ ಗಾಬರಿಗೊಂಡ ಆನೆಗಳು ಮಾವುತರಾದ ನಂಜುಂಡ ಮತ್ತು ಗುಂಡ ಎಂಬುವವರನ್ನು ಕೆಳಗೆ ಬೀಳಿಸಿ ಕೊತ್ತನಹಳ್ಳಿ, ಹಿರೇಹಳ್ಳಿ, ಜೀಹಾರ, ನಾಗನಹಳ್ಳಿ ಗ್ರಾಮಗಳ ಜಮೀನುಗಳತ್ತ ತೆರಳಿದವು. ಜತೆಗೆ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡಿದವು.
ಇದರಿಂದ ರೈತರು, ಸಾರ್ವಜನಿಕರು ಗಾಬರಿಗೊಂಡರು. ಅಧಿಕಾರಿಗಳಾದ ಕೇಶವಗೌಡ, ವಿನಯ್ ಹಾಗೂ ಪೊಲೀಸರು ಹಿರೇಹಳ್ಳಿ ಸಮೀಪ ಸಂಜೆ 5 ಗಂಟೆ ವೇಳೆಗೆ ಹರಸಾಹಸ ಪಟ್ಟು ಆನೆಗಳನ್ನು ಹಿಡಿದು ಶಿಬಿರಕ್ಕೆ ಕರೆತಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications