ಮೈಸೂರಿನ ಗಾಂಧಿ ಶಿಲ್ಪ ಬಜಾರ್ ಮೇಳದ ವಿಶೇಷತೆ ಗೊತ್ತಾ?
ಮೈಸೂರು, ಮಾರ್ಚ್ 14: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಎಲ್ಲ ತಿಂಗಳುಗಳಲ್ಲಿ ಯಾವುದಾದರೂ ಮೇಳ ನಡೆಯುತ್ತದೆ ಎನ್ನುವುದಾದರೆ ಅದು ಮೇಟಗಳ್ಳಿಯ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಮಾತ್ರ. ಇದೀಗ ಇಲ್ಲಿ ಮಾ.14ರಿಂದ 23ರವರಗೆ ಗಾಂಧಿ ಶಿಲ್ಪ ಬಜಾರ್ ಮೇಳ ನಡೆಯುತ್ತಿದ್ದು, ಇಲ್ಲಿ ಇದುವರೆಗೆ ಸುಮಾರು 145 ಮೇಳಗಳು ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೇಳದ ಇನ್ನೊಂದು ವಿಶೇಷ ಏನೆಂದರೆ ಇದು ಕರಕುಶಲ ಕರ್ಮಿಗಳು ಮತ್ತು ಗ್ರಾಹಕರ ನಡುವೆ ನೇರ ಸಂಬಂಧವನ್ನು ಏರ್ಪಡಿಸುತ್ತಿದೆ.
ಗಾಂಧಿ ಶಿಲ್ಪ ಬಜಾರ್ ಮೇಳದಲ್ಲಿ ಪ್ರಪ್ರಥಮ ಬಾರಿಗೆ ತ್ರಿಪುರಾ ರಾಜ್ಯದ ಕೈಮಗ್ಗ, ಕರಕುಶಲ ಮತ್ತು ಕೃಷಿ ನಿರ್ದೇಶನಾಲಯ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಬೆಳಗ್ಗಿನಿಂದ ರಾತ್ರಿವರೆಗೆ ಇಲ್ಲಿಗೆ ಜನರು ಬರಬಹುದಾಗಿದ್ದು, ಸುಮಾರು ಹತ್ತು ದಿನಗಳ ಕಾಲ ನಡೆಯುವ ಮೇಳದಲ್ಲಿ ಎಲ್ಲೆಂದರಲ್ಲಿ ಅಡ್ಡಾಡಿ, ಕರಕುಶಲ ಕರ್ಮಿಗಳ ಕಲಾನೈಪುಣ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಗಾಂಧಿ ಶಿಲ್ಪ ಬಜಾರ್ ಮೇಳವು ಭಾರತ ಸರ್ಕಾರದ ನವದೆಹಲಿಯಲ್ಲಿರುವ ಜವಳಿ ಸಚಿವಾಯದ ಅಭಿವೃದ್ಧಿ ಆಯುಕ್ತರು (ಕರಕುಶಲ) ಕಚೇರಿಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿದೆ.

ಇದಕ್ಕೆ ತ್ರಿಪುರಾ ಸರ್ಕಾರದ ಕೈಮಗ್ಗ ಕರಕುಶಲ ಮತ್ತು ರೇಷ್ಮೆ ನಿರ್ದೇಶನಾಲಯ ಕೈಜೋಡಿಸಿದ್ದು, ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಗಾಂಧಿ ಶಿಲ್ಪ ಬಜಾರ್ ಮೇಳವನ್ನು 120 ಮಳಿಗೆಗಳಲ್ಲಿ ಆಯೋಜನೆ ಮಾಡಿದ್ದಾರೆ. ಇಲ್ಲಿಗೆ ಆಗಮಿಸುವವರಿಗೆ ಹತ್ತಾರು ಅನುಕೂಲಗಳಿದ್ದು, ತಾವು ಇಷ್ಟಪಡುವ ಜವಳಿಯಿಂದ ಆರಂಭವಾಗಿ ಕರಕುಶಲ ವಸ್ತುಗಳವರೆಗೆ ಎಲ್ಲವೂ ದೊರೆಯಲಿದೆ. ಹೀಗಾಗಿ ನಗರಕ್ಕೆ ಭೇಟಿ ನೀಡುವ ಜನರು ಅರ್ಬನ್ ಹಾತ್ ಗೆ ತೆರಳಿ ಮೇಳದಲ್ಲಿ ಅಡ್ಡಾಡುತ್ತಾರೆ.
ಗಾಂಧಿ ಶಿಲ್ಪ ಬಜಾರ್ ಮೇಳದಲ್ಲಿ ಏನೇನಿದೆ?
ಗಾಂಧಿ ಶಿಲ್ಪ ಬಜಾರ್ ಮೇಳಕ್ಕೊಂದು ಸುತ್ತು ಹೊಡೆದರೆ ನಮ್ಮ ದೇಶದ 22 ಕ್ಕೂ ಹೆಚ್ಚು ರಾಜ್ಯಗಳ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಕರಕುಶಲಕರ್ಮಿಗಳು ಹಾಗೂ ಕೈಮಗ್ಗ ನೇಕಾರರು ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳು ಒಂದೇ ಸೂರಿ ನಡಿಯಲ್ಲಿ ಮೈಸೂರಿನ ಸಂಸ್ಕೃತಿ ಪ್ರಿಯರಿಗೆ ಲಭ್ಯವಾಗುವಂತೆ ಈ ಮೇಳದಲ್ಲಿ ವ್ಯವಸ್ಥೆ ಮಾಡಿರುವುದು ಕಂಡು ಬರುತ್ತದೆ. ಇಲ್ಲಿರುವ ನೂರಿಪ್ಪತ್ತಕ್ಕೂ ಹೆಚ್ಚು ಮಳಿಗೆಗಳು ವಿಶೇಷತೆಗಳಿಂದ ಕೂಡಿದ್ದು ಇಲ್ಲಿ ಆಕರ್ಷಣೀಯ ವಸ್ತುಗಳು ಗಮನಸೆಳೆಯುತ್ತವೆ.
ಈ ಮೇಳದ ವಿಶೇಷತೆ ಏನೆಂದರೆ ಕುಶಲಕರ್ಮಿಗಳು ತಮ್ಮ ಕಲಕುಶಲತೆಯನ್ನು ಗ್ರಾಹಕರ ಅಗತ್ಯ ಮತ್ತು ಅಭಿರುಚಿಗೆ ತಕ್ಕಂತೆ ತಯಾರು ಮಾಡಿದ್ದು ಮಾರುಕಟ್ಟೆಯಲ್ಲಿ ಜನ ಇಷ್ಟಪಡುವಂತಹ ನವೀನ ವಿನ್ಯಾಸದ ವಸ್ತುಗಳನ್ನು ತಯಾರಿಸಿಟ್ಟಿದ್ದಾರೆ. ಇಲ್ಲಿ ಏನೆಲ್ಲ ಇದೆ ಎಂಬುದನ್ನು ನೋಡಿದ್ದೇ ಆದರೆ, ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು, ಪೇಪರ್, ರತ್ನಗಂಬಳಿ, ಹತ್ತಿ ಜಮಕಾನ, ಇಮಿಟೇಶನ್ ಆಭರಣಗಳು, ಮರದ ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕಾರಿ ಚಿತ್ರಕಲೆ, ಚರ್ಮದ ಅಕರ್ಷಕ ವಸ್ತುಗಳು,ಕಲಾತ್ಮಕ ಚರ್ಮದ ಚಪ್ಪಲಿಗಳು ಆಕರ್ಷಿಸುತ್ತವೆ.

ಗ್ರಾಹಕ ಕುಶಲಕರ್ಮಿಗಳ ಬಾಂಧವ್ಯ ವೃದ್ಧಿಯ ಮೇಳ
ಇದಿಷ್ಟೇ ಅಲ್ಲದೆ, ಚನ್ನಪಟ್ಟಣದ ಗೊಂಬೆಗಳು, ಕಸೂತಿ ಕಲೆ, ಮಧ್ಯಪ್ರದೇಶ ರಾಜ್ಯದ ಮಹೇಶ್ವರಿ, ಚಂದೇರಿ ಸೀರೆಗಳು, ಒಡಿಶಾ ರಾಜ್ಯದ ಪಟ್ಟ ಚಿತ್ರ, ಬೆಳ್ಳಿಯ ಸೂಕ್ಷ್ಮ ವಿನ್ಯಾಸ ವಸ್ತುಗಳು, ಬಿದಿರು- ಬೆತ್ತದ ವಸ್ತುಗಳು, ಚಿಕನ್ ಎಂಬ್ರಾಯ್ಡರಿ, ಡ್ರೈ ಪ್ಲವರ್ಗಳು, ಕಲಾತ್ಮಕ ಕಲ್ಲಿನ ವಸ್ತುಗಳು, ಪಂಜಾಬ್ ರಾಜ್ಯದ ಫುಲ್ಕಾರಿ ಬಟ್ಟೆಗಳು ಈ ಮೇಳ ದಲ್ಲಿ ಕಾಣಸಿಗುತ್ತಿದ್ದು, ಎಲ್ಲವೂ ಒಂದೇ ಸೂರಿನಡಿ ಸಿಗುವುದರಿಂದ ಪ್ರತಿ ಸಲ ಮೇಳ ಆರಂಭವಾದಾಗ ಜನರು ಇತ್ತ ಬರುತ್ತಾರೆ. ಇನ್ನು ಇಲ್ಲಿ ಕಲಾ ಕುಶಲತೆಯ ವಸ್ತುಗಳನ್ನು ನೋಡಿ ಕಣ್ತುಂಬಿಸಿಕೊಳ್ಳುವುದು ಒಂಥರಾ ಮಜಾ.
ಪ್ರತಿ ತಿಂಗಳು ಒಂದಲ್ಲ ಒಂದು ಉದ್ದೇಶವನ್ನಿಟ್ಟುಕೊಂಡು ಇಲ್ಲಿ ಮೇಳವನ್ನು ಆಯೋಜನೆ ಮಾಡಲಾಗುತ್ತಿದ್ದು, ಏಕೆ ಈ ಮೇಳ ಯಶಸ್ಸು ಕಾಣುತ್ತಿದೆ ಎಂದರೆ, ಮಧ್ಯವರ್ತಿಗಳು ಇಲ್ಲದೆ ಗ್ರಾಹಕರು ಮತ್ತು ಉತ್ಪಾದಕರ ಮಧ್ಯೆ ನೇರ ಸಂಪರ್ಕ ಮತ್ತು ಸಂವಹನಕ್ಕೆ ಅವಕಾಶ ಕಲ್ಪಿಸುವುದರಿಂದ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಗ್ರಾಹಕ ಮತ್ತು ಕುಶಲಕರ್ಮಿಗಳ ಬಾಂಧವ್ಯ ವೃದ್ಧಿಯ ಮೇಳ ಎಂದರೂ ತಪ್ಪಾಗಲಾರದು. ಈ ಗಾಂಧಿ ಶಿಲ್ಪ ಬಜಾರ್ ಮೇಳದಲ್ಲಿ ಭಾಗವಹಿಸುತ್ತಿರುವ ಕುಶಲಕರ್ಮಿಗಳಿಗೆ ಉಚಿತವಾಗಿ ಮಳಿಗೆಗಳನ್ನು ನೀಡುತ್ತಿರುವುದು, ಜತೆಗೆ ಪ್ರಯಾಣ ಭತ್ಯೆ, ದಿನಭತ್ಯೆನ್ನೂ ಕರಕುಶಲ ಅಭಿವೃದ್ಧಿ ಅಯುಕ್ತರ ಕಚೇರಿಯಿಂದ ನೀಡುತ್ತಿರುವುದು ಕರಕುಶಲ ಕರ್ಮಿಗಳ ಅಭಿವೃದ್ಧಿಗೆ ಹಿಡಿದ ಕೈಕನ್ನಡಿಯಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications