ಮೈಸೂರಿನ ನಕಲಿ ಅಂಕಪಟ್ಟಿ ಜಾಲಕ್ಕೆ ಮಹಿಳೆಯೇ ಕಿಂಗ್ ಪಿನ್!
ಮೈಸೂರು, ಜುಲೈ 22 : ನಿರುದ್ಯೋಗಿಗಳನ್ನೇ ಗುರಿಯಾಗಿಟ್ಟುಕೊಂಡು ದೇಶದ ವಿವಿಧ ಮುಕ್ತ ವಿವಿಗಳ ಪದವಿಯ ನಕಲಿ ಅಂಕಪಟ್ಟಿ ನಮೂದಿಸಿಕೊಡುವ ಮೂಲಕ ಹಣಗಳಿಸುತ್ತಿದ್ದ ಜಾಲವೊಂದನ್ನು ನಗರ ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ನಕಲಿ ಅಂಕಪಟ್ಟಿ ಜಾಲ ಈ ಹಿಂದೆ ಕೂಡ ಬೆಳಕಿಗೆ ಬಂದಿದೆ. ನಂತರದ ದಿನಗಳಲ್ಲಿ ವಂಚಕರಿಂದ ಅಂಕಪಟ್ಟಿ ಪಡೆದುಕೊಂಡಿದ್ದ ಫಲಾನುಭವಿಗಳು ಹಣ ಕಳೆದುಕೊಂಡಿದ್ದಲ್ಲದೆ, ನ್ಯಾಯಾಲಯಕ್ಕೆ ಅಲೆದಾಡುತ್ತಿರುವುದೂ ಕೂಡ ಕಣ್ಣಮುಂದಿದೆ.
ಈ ಬಾರಿ ನಕಲಿ ಅಂಕಪಟ್ಟಿಯ ಸೂತ್ರಧಾರ ವ್ಯಕ್ತಿ ಮಹಿಳೆ ಆಗಿರುವುದೇ ಕುತೂಹಲ ಹೆಚ್ಚಿಸಿದೆ! ನಗರದ ವಿವಿ ಮೊಹಲ್ಲಾ ನಿವಾಸಿ ಬಿ.ಯಶಸ್ವಿನಿ ಎಂಬಾಕೆಯೇ ನಕಲಿ ಅಂಕಪಟ್ಟಿ ಜಾಲದ ಪ್ರಮುಖ ಆರೋಪಿ ಉಳಿದಂತೆ ಬೆಳಗಾವಿ ಮೂಲದ ಬಸವರಾಜು, ಅರಸೀಕೆರೆ ಮೂಲದ ಕಿಶನ್ ಸೇರಿ ಐದಕ್ಕೂ ಹೆಚ್ಚು ಮಂದಿ ಈ ಜಾಲದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

ಮಂಡ್ಯ ಜಿಲ್ಲೆ ಕೃ.ರಾ.ಪೇಟೆಯಲ್ಲಿ ಬಿಬಿಎಂ ವ್ಯಾಸಂಗ ಪೂರ್ಣಗೊಳಿಸಿದ್ದ ಯಶಸ್ವಿನಿ, ನಂತರ ಅಲ್ಲಿಯೇ ಟ್ಯುಟೋರಿಯಲ್ ಆರಂಭಿಸಿದ್ದಳು. ಪತಿಯಿಂದ ವಿಚ್ಛೇದನವನ್ನೂ ಪಡೆದುಕೊಂಡಿದ್ದಳು. ಆನಂತರದಲ್ಲಿ 2 ವರ್ಷಗಳ ಹಿಂದೆ ನಗರದ ಸರಸ್ವತಿಪುರಂನಲ್ಲಿ ಆಕೆ ಯಶು ಎಜುಕೇಷನ್ ಇನ್ಸ್ ಟಿಟ್ಯೂಟ್ ಎಂಬ ಸಂಸ್ಥೆ ಆರಂಭಿಸಿ ಎಸ್ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಹೇಳಿಕೊಡಲಾರಂಭಿಸಿದಳು. ಈ ನಡುವೆ ಬೆಳಗಾವಿ ಹಾಗೂ ತುಮಕೂರಿನ ಬಸವರಾಜು ಹಾಗೂ ಕಿಷನ್ ಪರಿಚಯವಾದ ನಂತರ ನಕಲಿ ಅಂಕಪಟ್ಟಿ ಜಾಲಕ್ಕೆ ಚಾಲನೆ ದೊರಕಿತು.
ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಯುವಕರನ್ನು ಹಾಗೂ ನಿರುದ್ಯೋಗಿ ಯುವಕರನ್ನು ಹುಡುಕುತ್ತಿದ್ದ ಈ ತಂಡ ಮೊದಲಿಗೆ ಕರ್ನಾಟಕ ಮುಕ್ತ ವಿವಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಮುಕ್ತ ವಿವಿಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸುಳ್ಳು ಹೇಳುತ್ತಾ ಯುವಕರಿಂದ ಪರೀಕ್ಷೆ ಶುಲ್ಕವಾಗಿ ಹಣ ವಸೂಲು ಮಾಡುತ್ತಿತ್ತು.
ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಮಾತೇ ಇಲ್ಲ ಎಂದು ಆಸೆ ಹುಟ್ಟಿಸಿ ಅಂಕಪಟ್ಟಿಗೆಂದು ವಿದ್ಯಾರ್ಥಿಗಳಿಂದ ತಲಾ 25 ಸಾವಿರದಿಂದ 30 ಸಾವಿರ ರೂ. ಹಣ ಪಡೆದು ಅಂಕಪಟ್ಟಿಗಳನ್ನು 50 ಮಂದಿಗೆ ವಿತರಿಸಿದೆ ಈ ತಂಡ!
ಈ ಜಾಲದ ಸುಳಿವು ಪಡೆದ ಸಿಸಿಬಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಗುರುವಾರ ನಜರಬಾದ್ ನಲ್ಲಿರುವ ತಾಲ್ಲೂಕು ಕಚೇರಿಯ ಗೇಟ್ ಹತ್ತಿರ ಆರೋಪಿ ಮಹಿಳೆ ಕುಳಿತಿದ್ದ ವೇಳೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ಹಿಡಿದಿದ್ದ ಬ್ಯಾಗ್ ಪರಿಶೀಲಿಸಿದಾಗ ವಿವಿಧ ವಿವಿಗಳ ಹೆಸರಿನ ನಕಲಿ ಅಂಕಪಟ್ಟಿಗಳು ಕಂಡು ಬಂದಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಾಲದಲ್ಲಿ ಇರುವ ಇನ್ನಿತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications