ಮೈಸೂರಿನ ನಕಲಿ ಅಂಕಪಟ್ಟಿ ಜಾಲಕ್ಕೆ ಮಹಿಳೆಯೇ ಕಿಂಗ್ ಪಿನ್!
ಮೈಸೂರು, ಜುಲೈ 22 : ನಿರುದ್ಯೋಗಿಗಳನ್ನೇ ಗುರಿಯಾಗಿಟ್ಟುಕೊಂಡು ದೇಶದ ವಿವಿಧ ಮುಕ್ತ ವಿವಿಗಳ ಪದವಿಯ ನಕಲಿ ಅಂಕಪಟ್ಟಿ ನಮೂದಿಸಿಕೊಡುವ ಮೂಲಕ ಹಣಗಳಿಸುತ್ತಿದ್ದ ಜಾಲವೊಂದನ್ನು ನಗರ ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ನಕಲಿ ಅಂಕಪಟ್ಟಿ ಜಾಲ ಈ ಹಿಂದೆ ಕೂಡ ಬೆಳಕಿಗೆ ಬಂದಿದೆ. ನಂತರದ ದಿನಗಳಲ್ಲಿ ವಂಚಕರಿಂದ ಅಂಕಪಟ್ಟಿ ಪಡೆದುಕೊಂಡಿದ್ದ ಫಲಾನುಭವಿಗಳು ಹಣ ಕಳೆದುಕೊಂಡಿದ್ದಲ್ಲದೆ, ನ್ಯಾಯಾಲಯಕ್ಕೆ ಅಲೆದಾಡುತ್ತಿರುವುದೂ ಕೂಡ ಕಣ್ಣಮುಂದಿದೆ.
ಈ ಬಾರಿ ನಕಲಿ ಅಂಕಪಟ್ಟಿಯ ಸೂತ್ರಧಾರ ವ್ಯಕ್ತಿ ಮಹಿಳೆ ಆಗಿರುವುದೇ ಕುತೂಹಲ ಹೆಚ್ಚಿಸಿದೆ! ನಗರದ ವಿವಿ ಮೊಹಲ್ಲಾ ನಿವಾಸಿ ಬಿ.ಯಶಸ್ವಿನಿ ಎಂಬಾಕೆಯೇ ನಕಲಿ ಅಂಕಪಟ್ಟಿ ಜಾಲದ ಪ್ರಮುಖ ಆರೋಪಿ ಉಳಿದಂತೆ ಬೆಳಗಾವಿ ಮೂಲದ ಬಸವರಾಜು, ಅರಸೀಕೆರೆ ಮೂಲದ ಕಿಶನ್ ಸೇರಿ ಐದಕ್ಕೂ ಹೆಚ್ಚು ಮಂದಿ ಈ ಜಾಲದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ.

ಮಂಡ್ಯ ಜಿಲ್ಲೆ ಕೃ.ರಾ.ಪೇಟೆಯಲ್ಲಿ ಬಿಬಿಎಂ ವ್ಯಾಸಂಗ ಪೂರ್ಣಗೊಳಿಸಿದ್ದ ಯಶಸ್ವಿನಿ, ನಂತರ ಅಲ್ಲಿಯೇ ಟ್ಯುಟೋರಿಯಲ್ ಆರಂಭಿಸಿದ್ದಳು. ಪತಿಯಿಂದ ವಿಚ್ಛೇದನವನ್ನೂ ಪಡೆದುಕೊಂಡಿದ್ದಳು. ಆನಂತರದಲ್ಲಿ 2 ವರ್ಷಗಳ ಹಿಂದೆ ನಗರದ ಸರಸ್ವತಿಪುರಂನಲ್ಲಿ ಆಕೆ ಯಶು ಎಜುಕೇಷನ್ ಇನ್ಸ್ ಟಿಟ್ಯೂಟ್ ಎಂಬ ಸಂಸ್ಥೆ ಆರಂಭಿಸಿ ಎಸ್ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಹೇಳಿಕೊಡಲಾರಂಭಿಸಿದಳು. ಈ ನಡುವೆ ಬೆಳಗಾವಿ ಹಾಗೂ ತುಮಕೂರಿನ ಬಸವರಾಜು ಹಾಗೂ ಕಿಷನ್ ಪರಿಚಯವಾದ ನಂತರ ನಕಲಿ ಅಂಕಪಟ್ಟಿ ಜಾಲಕ್ಕೆ ಚಾಲನೆ ದೊರಕಿತು.
ವಿದ್ಯಾಭ್ಯಾಸ ಮೊಟಕುಗೊಳಿಸಿದ್ದ ಯುವಕರನ್ನು ಹಾಗೂ ನಿರುದ್ಯೋಗಿ ಯುವಕರನ್ನು ಹುಡುಕುತ್ತಿದ್ದ ಈ ತಂಡ ಮೊದಲಿಗೆ ಕರ್ನಾಟಕ ಮುಕ್ತ ವಿವಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಮುಕ್ತ ವಿವಿಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸುಳ್ಳು ಹೇಳುತ್ತಾ ಯುವಕರಿಂದ ಪರೀಕ್ಷೆ ಶುಲ್ಕವಾಗಿ ಹಣ ವಸೂಲು ಮಾಡುತ್ತಿತ್ತು.
ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಮಾತೇ ಇಲ್ಲ ಎಂದು ಆಸೆ ಹುಟ್ಟಿಸಿ ಅಂಕಪಟ್ಟಿಗೆಂದು ವಿದ್ಯಾರ್ಥಿಗಳಿಂದ ತಲಾ 25 ಸಾವಿರದಿಂದ 30 ಸಾವಿರ ರೂ. ಹಣ ಪಡೆದು ಅಂಕಪಟ್ಟಿಗಳನ್ನು 50 ಮಂದಿಗೆ ವಿತರಿಸಿದೆ ಈ ತಂಡ!
ಈ ಜಾಲದ ಸುಳಿವು ಪಡೆದ ಸಿಸಿಬಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಗುರುವಾರ ನಜರಬಾದ್ ನಲ್ಲಿರುವ ತಾಲ್ಲೂಕು ಕಚೇರಿಯ ಗೇಟ್ ಹತ್ತಿರ ಆರೋಪಿ ಮಹಿಳೆ ಕುಳಿತಿದ್ದ ವೇಳೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ಹಿಡಿದಿದ್ದ ಬ್ಯಾಗ್ ಪರಿಶೀಲಿಸಿದಾಗ ವಿವಿಧ ವಿವಿಗಳ ಹೆಸರಿನ ನಕಲಿ ಅಂಕಪಟ್ಟಿಗಳು ಕಂಡು ಬಂದಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಾಲದಲ್ಲಿ ಇರುವ ಇನ್ನಿತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications