ಕೆಎಸ್ ಓಯು ನಕಲಿ ಅಂಕಪಟ್ಟಿ ಹಗರಣ : 850 ವಿದ್ಯಾರ್ಥಿ ಸ್ಥಿತಿ ಅಧೋಗತಿ
ಮೈಸೂರು, ಆಗಸ್ಟ್ 23 : ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳ ಜೀವನ ಮೂರಾಬಟ್ಟೆಯಾದಂತಿದೆ. ಇತ್ತ ಮಾನ್ಯತೆಯೂ ಸಿಗದೇ ಅತ್ತ ನಕಲಿ ಅಂಕಪಟ್ಟಿ ಹಗರಣದಲ್ಲಿಯೂ ಸಿಲುಕಿರುವ 850 ವಿದ್ಯಾರ್ಥಿಗಳ ಜೀವನ ಅತಂತ್ರವಾಗಿದೆ.
ಬ್ರಿಡ್ಜ್ ಕೋರ್ಸ್ ಪಡೆದ ವಿದ್ಯಾರ್ಥಿಗಳು ಹಾಗೂ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. ಜಿಸಿಎಂಸಿ ಕಾಲೇಜು, ಶ್ರೀಮೇಧಾ ಕಾಲೇಜು, ಇಂಡೋ ಅಮೇರಿಕನ್ ಕಾಲೇಜು ಸೇರಿದಂತೆ ಧಾರವಾಡದ ನೂರಾರು ವಿದ್ಯಾರ್ಥಿಗಳು ಸದ್ಯ ದಿನನಿತ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಅಲೆದಾಡುತ್ತಿದ್ದಾರೆ. ಸದ್ಯ ಅಂಕಪಟ್ಟಿಗಳ ನೈಜತೆ ಕುರಿತು ಪರಿಶೀಲನೆಗೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಇವರೆಲ್ಲರಿಗೂ ನಾಲ್ಕು ಸೆಮ್ ಓದಿದ ವಿದ್ಯಾರ್ಥಿಗಳಿಗೆ 5 ನೇ ಸೆಮ್ ಗೆ ಪ್ರವೇಶಾತಿಗೆ ನಿರಾಕರಿಸಲಾಗಿದೆ.

ಇದೇ ಬೆನ್ನಲ್ಲೇ ಕೆಎಸ್ ಓಯು ಅಂಕಪಟ್ಟಿಗೆ ಮಾನ್ಯತೆ ಇಲ್ಲದ ಕಾರಣ ಪ್ರವೇಶಾತಿ ಸಾಧ್ಯವಿಲ್ಲ ಎಂದು ಕಾಲೇಜುಗಳು ತಿಳಿಸಿವೆ. ಅಂತಿಮ ಬಿಕಾಂ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಎರಡು ವರ್ಷ ಇಲ್ಲದ ಸಮಸ್ಯೆ ಮೂರನೇ ವರ್ಷ ಉದ್ಭವವಾಗಿದೆ. ಮಾನ್ಯತೆ ಕಳೆದುಕೊಂಡಿರುವ ಕಾರಣ ಪ್ರವೇಶಾತಿ ಇಲ್ಲವಾಗಿದೆ. ಪ್ರವೇಶಾತಿ ನೀಡುವಂತೆ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದಾರೆ. ಅಂಕಪಟ್ಟಿಯ ನೈಜತೆ, ಸತ್ಯಾಸತ್ಯತೆಗೆ ಕೋರ್ಟ್ ಆದೇಶಿಸಿದೆ. ಬ್ರಿಡ್ಜ್ ಕೋರ್ಸ್ ಆಧಾರದ ಮೇಲೆ ಪ್ರವೇಶಾತಿ ಸಾಧ್ಯವಿಲ್ಲ ಎಂದು ಸಂಸ್ಥೆಗಳು ತಿಳಿಸಿವೆ.
ಹಿಂದಿನ ಕುಲಪತಿಗಳ ನಡೆಗೆ ನೂರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ವಾಗಿದೆ. ನ್ಯಾಯಾಲಯ ಆದೇಶಿಸಿದರೂ ನ್ಯಾಯ ಸಿಗುತ್ತಿಲ್ಲ. ಬ್ರಿಡ್ಜ್ ಕೋರ್ಸ್ ಮಾನ್ಯತೆ ಇಲ್ಲದಿರುವುದು ಒಂದೆಡೆಯಾದರೆ, ಕೆ ಎಸ್ ಓಯುಗೆ ಮಾನ್ಯತೆ ಇಲ್ಲದಿರುವುದು ಮತ್ತೊಂದು ಸಮಸ್ಯೆಯಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ನಕಲಿ ಅಂಕಪಟ್ಟಿ ಹಗರಣ : ಸಿಸಿಬಿಯಿಂದ ತನಿಖೆ ಚುರುಕು
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಅಂಕಪಟ್ಟಿ ಹಗರಣ ಬಗೆದಷ್ಟು ಆಳಕ್ಕೆ ಹೋಗುತ್ತಿದೆ. ಮೈಸೂರಿನ ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಮುಂದಾಗಿದ್ದಾರೆ. ಹರ್ಷಾ, ಪ್ರಶಾಂತ್, ಲೋಕೇಶ್ ಹಾಗೂ ಚಂದ್ರಶೇಖರ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಚಂದ್ರಶೇಖರ್, ಕೆಎಸ್ಓಯು ನಿವೃತ್ತ ನೌಕರನಾಗಿದ್ದು, ಮುಕ್ತ ವಿವಿಯ ಪರೀಕ್ಷಾಂಗ ವಿಭಾಗದಲ್ಲಿ ಕೋ ಆರ್ಡಿನೇಟರ್ ಆಗಿದ್ದರು. ಉಳಿದ ಮೂವರು ಕೂಡ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನೌಕರರು ಎಂದು ತಿಳಿದು ಬಂದಿದೆ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications