ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಣದ ಮುಗ್ಗಟ್ಟು: ಆಸ್ಪತ್ರೆಯಲ್ಲೇ ಶವ ಬಿಟ್ಟು ಹೋಗಲು ಕುಟುಂಬ ನಿರ್ಧಾರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 14: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವ ಪಡೆಯಲು ಹಣಕಾಸು ಒದಗಿಸಲು ವಿಫಲವಾದ ಕುಟುಂಬವೊಂದು ಶವವನ್ನು ಆಸ್ಪತ್ರೆಯಿಂದ ಪಡೆಯುಲು ನಿರಾಕರಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಕಳ್ಳಿ ಕಾಲೋನಿಯ ಸೋಲಿಗ ಜನಾಂಗದ ಶಿವಯ್ಯ ಮೃತಪಟ್ಟ ವ್ಯಕ್ತಿಯಾಗಿದ್ದು, ಉಸಿರಾಟದ ಸಮಸ್ಯೆ ಹಿನ್ನೆಲೆ ಮೈಸೂರಿನ ಅರವಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿಗದೆ ಶಿವಯ್ಯ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶಿವಯ್ಯ ಅವರದ್ದು ಸೋಲಿಗ ಜನಾಂಗದ ಬಡ ಕುಟುಂಬವಾಗಿದ್ದು, ಮನೆಯಲ್ಲಿ ದನ, ಕುರಿ ಎಲ್ಲಾ ಮಾರಿ, ಈಗಾಗಲೇ 70 ಸಾವಿರ ರೂಪಾಯಿ ಹಣ ಪಾವತಿ ಮಾಡಿದ್ದರು.

Mysuru: Family Decided To Leave Corpse In The Hospital Due To Lack Of Money

ಆದರೆ, ಇನ್ನೂ ಒಂದು ಲಕ್ಷ ಹಣ ಕೊಡಿ ಅಂತಾ ಶವ ಕೊಡದೆ ಆಸ್ಪತ್ರೆಯ ಆಡಳಿತ ಮಂಡಳಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ, ಆಸ್ಪತ್ರೆಗೆ ಕಟ್ಟಲು ಹಣವಿಲ್ಲದೆ ಇರುವುದರಿಂದ ಮೃತದೇಹ ಬಿಟ್ಟು ಹೋಗಲು ಕುಟುಂಬಸ್ಥರು ಮುಂದಾಗಿದ್ದಾರೆ. ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಆಕ್ರಂದನ‌ ಮುಗಿಲು ಮುಟ್ಟಿತ್ತು.

English summary
Family refused to take the body of a person who had died to coronavirus in the hospital due To lack of money in Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X