ಆಸ್ಪತ್ರೆಯಲ್ಲಿ 64ನೇ ಹುಟ್ಟು ಹಬ್ಬ ಆಚರಿಸಿಕೊಂಡ ಸಚಿವ ಮಹದೇವಪ್ಪ
ಮೈಸೂರು, ಏಪ್ರಿಲ್ 20 : ಮೈಸೂರು ಜಿಲ್ಲಾ ಹಾಗೂ ಲೋಕೋಪಯೋಗಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ತಮ್ಮ 64ನೇ ಹುಟ್ಟು ಹಬ್ಬವನ್ನು ಗುರುವಾರ ಆಚರಿಸಿಕೊಂಡರು.
ಕಾಲು ನೋವಿನ ಸಮಸ್ಯೆಯಿಂದಾಗಿ ಮೈಸೂರಿನ ಕುವೆಂಪುನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಡಾ ಎಚ್ ಸಿ.ಮಹದೇವಪ್ಪ ಅವರ ಅಭಿಮಾನಿಗಳು ಆಸ್ಪತ್ರೆಯಲ್ಲಿಯೇ ಕೇಕ್ ಕತ್ತರಿಸಿ ಅವರಿಗೆ ತಿನ್ನಿಸುವ ಮೂಲಕ ಜನ್ಮದಿನವನ್ನು ಆಚರಿಸಿ ಶುಭ ಕೋರಿದರು.

ಪ್ರೊ.ರಾಜಣ್ಣರನ್ನು ವಜಾಗೊಳಿಸುವಂತೆ ಪ್ರತಿಭಟನೆ:
ಹಾಸ್ಟೆಲ್ ವಿದ್ಯಾರ್ಥಿನಿಯರ ಕುರಿತಾಗಿ ಅಪಪ್ರಚಾರ ಮಾಡಿ ಮೈಸೂರು ವಿವಿಯ ಘನತೆಗೆ ಧಕ್ಕೆ ತರುತ್ತಿರುವ ಕುಲಸಚಿವ ಪ್ರೊ.ಆರ್.ರಾಜಣ್ಣನವರನ್ನು ತಕ್ಷಣ ವಜಾಗೊಳಿಸುವಂತೆ ಒತ್ತಾಯಿಸಿ ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇದೇ ವೇಳೆ ಮಾತಾನಾಡಿದ ಪ್ರತಿಭಟನಾಕಾರರು, ಏಪ್ರಿಲ್ 1 ರಂದು ವಿದ್ಯಾರ್ಥಿನಿಯರು ಕುಲಪತಿಗಳನ್ನು ಭೇಟಿ ಮಾಡಿ ಹಾಸ್ಟೆಲ್ ನಲ್ಲಿರುವ ತಮ್ಮ ಮೂಲಭೂತ ಸಮಸ್ಯೆಗಳನ್ನು ತಿಳಿಸಿ ಮನವಿ ಸಲ್ಲಿಸಿದ್ದೆವು.

ಏ.12 ರಂದು ಪ್ರಭಾರ ಕುಲಪತಿ ದಯಾನಂದ ಮಾನೆ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್ ಗಳಿಗೆ ಪರಿಶೀಲನೆಗಾಗಿ ಇತರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದರು.
ಇದನ್ನೇ ತಮ್ಮ ಅನುಕೂಲಕ್ಕಾಗಿ ಬಳಸಿಕೊಂಡಿರುವ ಹಾಸ್ಟೆಲ್ ವಾರ್ಡನ್ ಪ್ರೊ.ರೇಖಾ ಜಾಧವ್ ಮತ್ತು ಕುಲಸಚಿವ ಪ್ರೊ.ರಾಜಣ್ಣ ಅವರು ಸಿಸಿ ಟಿವಿಯ ಎಲ್ಲಾ ದೃಶ್ಯಗಳನ್ನು ಮಾಧ್ಯಮಗಳಿಗೆ ನೀಡದೆ ಪ್ರೊ.ಮಾನೆ ಅವರ ಬಗ್ಗೆ ಅಪಪ್ರಚಾರ ಮಾಡಬೇಕೆಂಬ ದುರುದ್ದೇಶದಿಂದ ವಿವಾದ ಸೃಷ್ಟಿಸಬೇಕಾದಷ್ಟು ದೃಶ್ಯಾವಳಿಯನ್ನು ಮಾತ್ರ ನೀಡಿದ್ದಾರೆ ಎಂದು ದೂರಿದರು.
ಕುಲಸಚಿವರು ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರಿಕಿರಿ ಉಂಟಾಗುವಂತೆ ಮಾಡಿದ್ದಾರೆ. ಹೀಗಾಗಿ ಮೈಸೂರು ವಿವಿ ಮತ್ತು ವಿದ್ಯಾರ್ಥಿನಿಯರ ಘನತೆಗೆ ಧಕ್ಕೆ ತಂದು ಅಪಪ್ರಚಾರ ಮಾಡುತ್ತಿರುವ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರನ್ನು ಈ ಕೂಡಲೇ ಆ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications