ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲುವೆಗೆ ಹಾರಿ ಕೆ. ಆರ್ ಪೇಟೆ ರೈತ ಆತ್ಮಹತ್ಯೆ

By Vanitha
|
Google Oneindia Kannada News

ಮೈಸೂರು, ಅಕ್ಟೋಬರ್, 26 : ಸಾಲ ಬಾಧೆ ತಾಳಲಾರದೆ ರೈತನೊಬ್ಬ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಸಿಂಗನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ 26ರ ಸೋಮವಾರದಂದು ನಡೆದಿದೆ.

ಸಿಂಗನಹಳ್ಳಿ ಗ್ರಾಮದ ನಿವಾಸಿ ಸಣ್ಣಯ್ಯ(58) ಮೃತ ಪಟ್ಟ ರೈತ. ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡ ಸಣ್ಣಯ್ಯನ ಶವಕ್ಕಾಗಿ ಹುಡುಕಾಟ ಮುಂದುವರೆದಿದ್ದು, ಮೃತ ರೈತನ ಪತ್ನಿ ಜಯಮ್ಮ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.[ಕೊಡಗಿನ ಕಿತ್ತಳೆ ಬೆಳೆದ ಸುರೇಶ್ ಸುಬ್ಬಯ್ಯ ಸಾಧನೆ ಕಥೆ]

Farmer committe suicide at K.R Pet, Mysuru

ಸಣ್ಣಯ್ಯ ಅವರು ಅಕ್ಕಿಹೆಬ್ಬಾಳು ವಿಜಯಾ ಬ್ಯಾಂಕಿನಲ್ಲಿ 1ಲಕ್ಷ ಹಾಗೂ ಕೃಷಿ ಪತ್ತಿನ ಸಹಕಾರ ಬ್ಯಾಂಕಿನಿಂದ 50ಸಾವಿರ ರೂ ಸಾಲ ಪಡೆದುಕೊಂಡಿದ್ದರು. ಇದಲ್ಲದೆ 2ಲಕ್ಷ ರೂ ಕೈಸಾಲ ಪಡೆದಿದ್ದರು. ಸಾಲ ಪಡೆದ ಹಣದಿಂದ ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಒಂದು ಕೊಳವೆ ಬಾವಿ ಕೊರೆಯಿಸಿದ್ದರು.

ಕೊಳವೆ ಬಾವಿಯಲ್ಲಿನ ನೀರು ಕೃಷಿ ಚಟುವಟಿಕೆಗೆ ಸಾಕಾಗುತ್ತಿರಲಿಲ್ಲ. ಇದರ ಹಿನ್ನೆಲೆಯಲ್ಲಿ ತೆಂಗು, ಬಾಳೆ, ರಾಗಿ ಬೆಳೆಗಳು ಸಮರ್ಪಕವಾಗಿ ಬೆಳೆದಿರಲಿಲ್ಲ. ಈ ನಡುವೆ ಕೈಸಾಲಗಾರರ ಕಾಟ ಜಾಸ್ತಿಯಾದ ಕಾರಣ ತಮ್ಮ ಜಮೀನಿನ ಬಳಿ ಹರಿಯುವ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ಸಾಲಕ್ಕೆ ಸಾವು ಪರಿಹಾರವಲ್ಲ, ಯಾದಗಿರಿಯಲ್ಲೊಂದು ಅಭಿಯಾನ]

ಕಾಲುವೆ ಬಳಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ಸಣ್ಣಯ್ಯ ಅವರು ಕಾಲುವೆಗೆ ಹಾರಿದ್ದನ್ನು ಕಂಡು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಮತ್ತು ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮೃತ ರೈತನ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ.

English summary
Farmer committe suicide and death at Singanahalli village, K.R Pete, Mysuru on Monday, October 26th
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X