ಮೈಸೂರು: ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ನಂಜನಗೂಡಿನಲ್ಲಿ ರೈತರ ಪ್ರತಿಭಟನೆ
ಕೈಗಾರಿಕಾ ಏರಿಯಾ ಸ್ಥಾಪನೆಗೆ ರೈತರ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಅಧಿಕಾರಿಗಳ ಸಜ್ಜು, ರೈತ ಪ್ರತಿಭಟನೆ.
ಮೈಸೂರು, ಫೆಬ್ರವರಿ. 06: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಮೈಸೂರು ಸಮೀಪದ ನಂಜನಗೂಡಿನಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಕೆಐಎಡಿಬಿ ಅಧಿಕಾರಿಗಳು ಮುದ್ದನಹಳ್ಳಿಯಲ್ಲಿ 483 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕಾ ಏರಿಯಾ ಸ್ಥಾಪಿಸಲು ಯೋಜಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುವ ಕಾರಣದಿಂದ ಕೈಗಾರಿಕಾ ಏರಿಯಾ ಸ್ಥಾಪನೆಯನ್ನು ರೈತರು ವಿರೋಧಿಸುತ್ತಿದ್ದಾರೆ.
"ನಾವು ನೂರಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ. ಕಬಿನಿ ಬಲದಂಡೆ ಕಾಲುವೆಯಿಂದ ನೀರು ಸಿಗುತ್ತಿದ್ದು, ಇಲ್ಲಿನ ಭೂಮಿ ಫಲವತ್ತಾಗಿದೆ. ಇಲ್ಲಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ರೈತರು ಜಮೀನು ಬಿಟ್ಟುಕೊಡುವುದಿಲ್ಲ" ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

''ಈ ಯೋಜನೆಯಿಂದ 250ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲಿವೆ. ಈಗ ಈ ಜಮೀನಿನಲ್ಲಿ ಹೈನುಗಾರಿಕೆ ಮಾಡಿ, ಭತ್ತ, ಬಾಳೆ, ತೆಂಗು ಬೆಳೆದು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ಆದರೆ ನಾವು ಹುಟ್ಟಿ ಬೆಳೆದ ನಮ್ಮ ಪೂರ್ವಜರ ಭೂಮಿಯನ್ನು ಹಣಕ್ಕಾಗಿ ಕಳೆದುಕೊಳ್ಳುತ್ತಿರುವುದು ನೋವಿನ ಸಂಗತಿ. ಹೀಗಾಗಿ ಭೂಮಿ ನೀಡದಿರಲು ನಿರ್ಧರಿಸಿದ್ದೇವೆ. ಜಮೀನಿನಲ್ಲಿ 100 ಅಡಿ ಆಳ ಹೋದರೂ ಸಾಕು ಬೋರ್ವೆಲ್ ನೀರು ಲಭ್ಯವಿದ್ದು, ರೈತರು ಹೆಚ್ಚು ಹಣ ಕೊಟ್ಟರೂ ಇಂತಹ ಭೂಮಿ ಸಿಗುವುದಿಲ್ಲ" ಎಂದು ಪ್ರತಿಭಟನಾನಿರತ ರೈತರು ಹೇಳಿದ್ದಾರೆ.
ಕಳೆದ ತಿಂಗಳು ಕೆಐಎಡಿಬಿ ಅಧಿಕಾರಿಗಳು ಹಾಗೂ ಮಸಗೆ, ಏಸು ಗುಂಡ್ಲ, ಮುದ್ದಳ್ಳಿ ಮತ್ತು ನವಿಲೂರು ರೈತರ ಸಭೆ ಕರೆದಿದ್ದೆ. ಆದರೆ ಬಹುತೇಕ ರೈತರು ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ಜಮೀನು ನೀಡಲು ಸಿದ್ಧರಿಲ್ಲ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ತಿಳಿಸಿದ್ದಾರೆ.

ಪರಿಹಾರವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಮತ್ತು ಎಲ್ಲಾ ರೈತರಿಗೆ ಏಕರೂಪದ ಪರಿಹಾರವನ್ನು ನೀಡುವಂತೆ ಸೂಚನೆ ನೀಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೆಚ್ಚಿನ ಪರಿಹಾರ ಹಾಗೂ ಇತರೆ ಜಮೀನುಗಳಿಗೆ ಕಡಿಮೆ ಪರಿಹಾರ ನೀಡಲು ಅಧಿಕಾರಿಗಳು ಈ ಹಿಂದೆ ನಿರ್ಧರಿಸಿದ್ದರು. ಆದರೆ ಈಗ ಎಲ್ಲ ಜಮೀನುಗಳಿಗೆ ಏಕರೂಪದ ಪರಿಹಾರ ನೀಡಲು ಕೆಐಎಡಿಬಿ ಒಪ್ಪಿಗೆ ಸೂಚಿಸಿದೆ. ಎಕರೆಗೆ 40 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದರೂ ಮೈಸೂರು ಸಮೀಪದ ರೈತರು ಹೆಚ್ಚಿನ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರೈತರ ಅಸಮಾಧಾನವನ್ನು ತಿಳಿಸುತ್ತೇನೆ. ಇನ್ನೊಮ್ಮೆ ಸಭೆ ಕರೆದು ರೈತರ ಬೇಡಿಕೆಗಳನ್ನು ಕೇಳುತ್ತೇನೆ. ನಾವು ಯಾವುದೇ ಕಾರಣಕ್ಕೂ ರೈತರಿಂದ ಬಲವಂತವಾಗಿ ಯಾವುದೇ ಭೂಮಿಯನ್ನು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications