ಮೈಸೂರು: ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ನಂಜನಗೂಡಿನಲ್ಲಿ ರೈತರ ಪ್ರತಿಭಟನೆ
ಕೈಗಾರಿಕಾ ಏರಿಯಾ ಸ್ಥಾಪನೆಗೆ ರೈತರ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಅಧಿಕಾರಿಗಳ ಸಜ್ಜು, ರೈತ ಪ್ರತಿಭಟನೆ.
ಮೈಸೂರು, ಫೆಬ್ರವರಿ. 06: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಮೈಸೂರು ಸಮೀಪದ ನಂಜನಗೂಡಿನಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಕೆಐಎಡಿಬಿ ಅಧಿಕಾರಿಗಳು ಮುದ್ದನಹಳ್ಳಿಯಲ್ಲಿ 483 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕಾ ಏರಿಯಾ ಸ್ಥಾಪಿಸಲು ಯೋಜಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುವ ಕಾರಣದಿಂದ ಕೈಗಾರಿಕಾ ಏರಿಯಾ ಸ್ಥಾಪನೆಯನ್ನು ರೈತರು ವಿರೋಧಿಸುತ್ತಿದ್ದಾರೆ.
"ನಾವು ನೂರಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ. ಕಬಿನಿ ಬಲದಂಡೆ ಕಾಲುವೆಯಿಂದ ನೀರು ಸಿಗುತ್ತಿದ್ದು, ಇಲ್ಲಿನ ಭೂಮಿ ಫಲವತ್ತಾಗಿದೆ. ಇಲ್ಲಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ರೈತರು ಜಮೀನು ಬಿಟ್ಟುಕೊಡುವುದಿಲ್ಲ" ಎಂದು ರೈತರು ಸ್ಪಷ್ಟಪಡಿಸಿದ್ದಾರೆ.

''ಈ ಯೋಜನೆಯಿಂದ 250ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳಲಿವೆ. ಈಗ ಈ ಜಮೀನಿನಲ್ಲಿ ಹೈನುಗಾರಿಕೆ ಮಾಡಿ, ಭತ್ತ, ಬಾಳೆ, ತೆಂಗು ಬೆಳೆದು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ. ಆದರೆ ನಾವು ಹುಟ್ಟಿ ಬೆಳೆದ ನಮ್ಮ ಪೂರ್ವಜರ ಭೂಮಿಯನ್ನು ಹಣಕ್ಕಾಗಿ ಕಳೆದುಕೊಳ್ಳುತ್ತಿರುವುದು ನೋವಿನ ಸಂಗತಿ. ಹೀಗಾಗಿ ಭೂಮಿ ನೀಡದಿರಲು ನಿರ್ಧರಿಸಿದ್ದೇವೆ. ಜಮೀನಿನಲ್ಲಿ 100 ಅಡಿ ಆಳ ಹೋದರೂ ಸಾಕು ಬೋರ್ವೆಲ್ ನೀರು ಲಭ್ಯವಿದ್ದು, ರೈತರು ಹೆಚ್ಚು ಹಣ ಕೊಟ್ಟರೂ ಇಂತಹ ಭೂಮಿ ಸಿಗುವುದಿಲ್ಲ" ಎಂದು ಪ್ರತಿಭಟನಾನಿರತ ರೈತರು ಹೇಳಿದ್ದಾರೆ.
ಕಳೆದ ತಿಂಗಳು ಕೆಐಎಡಿಬಿ ಅಧಿಕಾರಿಗಳು ಹಾಗೂ ಮಸಗೆ, ಏಸು ಗುಂಡ್ಲ, ಮುದ್ದಳ್ಳಿ ಮತ್ತು ನವಿಲೂರು ರೈತರ ಸಭೆ ಕರೆದಿದ್ದೆ. ಆದರೆ ಬಹುತೇಕ ರೈತರು ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ಜಮೀನು ನೀಡಲು ಸಿದ್ಧರಿಲ್ಲ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ತಿಳಿಸಿದ್ದಾರೆ.

ಪರಿಹಾರವನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಮತ್ತು ಎಲ್ಲಾ ರೈತರಿಗೆ ಏಕರೂಪದ ಪರಿಹಾರವನ್ನು ನೀಡುವಂತೆ ಸೂಚನೆ ನೀಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೆಚ್ಚಿನ ಪರಿಹಾರ ಹಾಗೂ ಇತರೆ ಜಮೀನುಗಳಿಗೆ ಕಡಿಮೆ ಪರಿಹಾರ ನೀಡಲು ಅಧಿಕಾರಿಗಳು ಈ ಹಿಂದೆ ನಿರ್ಧರಿಸಿದ್ದರು. ಆದರೆ ಈಗ ಎಲ್ಲ ಜಮೀನುಗಳಿಗೆ ಏಕರೂಪದ ಪರಿಹಾರ ನೀಡಲು ಕೆಐಎಡಿಬಿ ಒಪ್ಪಿಗೆ ಸೂಚಿಸಿದೆ. ಎಕರೆಗೆ 40 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದರೂ ಮೈಸೂರು ಸಮೀಪದ ರೈತರು ಹೆಚ್ಚಿನ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರೈತರ ಅಸಮಾಧಾನವನ್ನು ತಿಳಿಸುತ್ತೇನೆ. ಇನ್ನೊಮ್ಮೆ ಸಭೆ ಕರೆದು ರೈತರ ಬೇಡಿಕೆಗಳನ್ನು ಕೇಳುತ್ತೇನೆ. ನಾವು ಯಾವುದೇ ಕಾರಣಕ್ಕೂ ರೈತರಿಂದ ಬಲವಂತವಾಗಿ ಯಾವುದೇ ಭೂಮಿಯನ್ನು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications