ಮೈಸೂರು: 2 ದಶಕದ ಬಳಿಕ ಮರಳಿ ಹಿಂದೂ ಮತ ಸೇರಿದ ತಂದೆ –ಮಗ
ಮೈಸೂರು, ಆಗಸ್ಟ್ 22 : ಇಸ್ಲಾಂ ಮತದಲ್ಲಿದ್ದ ತಂದೆ -ಮಗ ಇಂದು ಮರಳಿ ತಮ್ಮ ಹಿಂದೂ ಮತಕ್ಕೆ ಸೇರಿಕೊಂಡಿದ್ದಾರೆ. ಸುಮಾರು ಇಪ್ಪತ್ತು ವರ್ಷಗಳ ಕಾಲ ಇಸ್ಲಾಂ ಧರ್ಮದಲ್ಲಿದ್ದ ಅಪ್ಪ ಮಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮರಳಿ ಮಾತೃ ಧರ್ಮ ಸೇರಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನವರಾದ ಸೈಯದ್ ಅಬ್ಬಾಸ್ ಮತ್ತು ಸೈಯದ್ ಅತೀಕ್ ಇಸ್ಲಾಂ ಧರ್ಮ ತೊರೆದು ಮತ್ತೆ ಹಿಂದೂ ಧರ್ಮ ಸೇರ್ಪಡೆಗೊಂಡವರು. ಇವರು 20 ವರುಷಗಳ ಹಿಂದೆ ಹಿಂದೂ ಧರ್ಮ ತೊರೆದು ಇಸ್ಲಾಂ ಧರ್ಮ ಸೇರಿದ್ದರು. ಇದೀಗ ಪುನಃ ಇಸ್ಲಾಂ ಧರ್ಮವನ್ನು ತೊರೆದು ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರ ಮೂಲ ಹೆಸರು ಶೇಷಾದ್ರಿ ಮತ್ತು ಹರ್ಷಿಲ್ ಆರ್ಯ. ಮಂಗಳವಾರ ನಗರದ ಆರ್ಯ ಸಮಾಜದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಧರ್ಮ ದೀಕ್ಷೆ ಕಾರ್ಯಕ್ರಮದಲ್ಲಿ ಇವರು ಹಿಂದೂ ಧರ್ಮ ಸೇರಿದರು

ಇವರ ನಿಲುವು ಸ್ವಾಗತಾರ್ಹ : ಮುತಾಲಿಕ್
ಅಪ್ಪ ಮಗ ಪುನಃ ಮರಳಿ ಮಾತೃ ಧರ್ಮ ಸೇರ್ಪಡೆಗೊಂಡಿರುವ ಬಗ್ಗೆ ಮಾತನಾಡಿದ ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, "ಮದುವೆ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮ ಮತಾಂತರ ಆಗಿದ್ದವರು ಈವತ್ತು ಸ್ವ ಇಚ್ಛೆಯಿಂದ ಹಿಂದೂ ಧರ್ಮ ಸೇರಿದ್ದಾರೆ. ದೇಶದಲ್ಲಿರುವ ಬಹುತೇಕ ಮುಸ್ಲಿಮರು ಮೂಲದಲ್ಲಿ ಹಿಂದುಗಳೇ ಆಗಿದ್ದರು. ಇವರು ಯಾರೂ ಬೇರೆ ದೇಶಗಳಿಂದ ಬಂದವರಲ್ಲ. ಮೊಘಲ್ ಆಕ್ರಮಣಕಾರರಿಂದಾಗಿ ಈಗ ಇಸ್ಲಾಂ ಧರ್ಮದಲ್ಲಿದ್ದಾರೆ" ಎಂದು ಹೇಳಿದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications