ನಾರಾಯಣಪುರದಲ್ಲಿ ವೃದ್ಧನ ಸಾವಿಗೆ ಕಾರಣವಾದ ಬೇಲಿ ತೆರವಿಗೆ ಆಗ್ರಹ
ಮೈಸೂರು, ಜನವರಿ 03: ಜನರು ಸಂಚರಿಸದಂತೆ ರಸ್ತೆಗೆ ಅಡ್ಡಲಾಗಿ ವ್ಯಕ್ತಿಯೊಬ್ಬರು ಬೇಲಿ ಹಾಕಿದ್ದು ಇದರಿಂದ ಹಲವರಿಗೆ ತೊಂದರೆಯಾಗಿದ್ದು, ಹೃದಯಾಘಾತವಾದ ವೃದ್ಧರೊಬ್ಬರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲು ರಸ್ತೆಯಿಲ್ಲದ ಪರಿಣಾಮ ಸಾವನ್ನಪ್ಪಿದ್ದಾರೆ ಎಂಬ ಆರೋಪ ಪಿರಿಯಾಪಟ್ಟಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಕೇಳಿಬಂದಿದೆ.
ನಾರಾಯಣಪುರ ಗ್ರಾಮದ ನಿವಾಸಿ ವೃದ್ಧ ತಿಮ್ಮಯ್ಯನಾಯಕ(80) ಎಂಬುವರಿಗೆ ಹೃದಯಾಘಾತವಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೆ ಬದುಕಿ ಉಳಿಯುತ್ತಿದ್ದರೇನೋ ಆದರೆ ಗ್ರಾಮದಿಂದ ಬೆಣಗಾವಲು ಮೂಲಕ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗ್ರಾಮದ ನಿವಾಸಿ ರಂಗನಾಯಕ ಎಂಬುವರು ಬೇಲಿ ಹಾಕಿದ್ದರಿಂದ ವಾಹನ ಮತ್ತು ಜನ ಸಂಚರಿಸಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ ಎನ್ನುವುದು ಮೃತ ವೃದ್ಧನ ಕುಟುಂಬದ ಆರೋಪವಾಗಿದೆ.
ಕುಶಾಲನಗರ ಮತ್ತು ಬೆಟ್ಟದಪುರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಬೆಣಗಾಲು ಗ್ರಾಮದಿಂದ ಕೇವಲ 1 ಕಿ.ಮೀ. ಅಂತರವಿರುವ ನಾರಾಯಣಪುರಕ್ಕೆ ಕಳೆದ 4 ವರ್ಷಗಳ ಹಿಂದೆ ರಸ್ತೆಯಿತ್ತು ಎಂದು ವಾಲ್ಮೀಕಿ ಸಂಘದ ಅಧ್ಯಕ್ಷ ಮಂಜು ಹೇಳುತ್ತಿದ್ದು, ಆದರೆ ಕಳೆದ 6 ವರ್ಷಗಳಲ್ಲಿ ರಂಗನಾಯಕನ ಕುಟುಂಬ ಈ ರಸ್ತೆಗೆ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವುದರಿಂದ ಸಂಪರ್ಕ ಬಂದ್ ಆಗಿದೆ.

ಇದರಿಂದ ರೋಗಿಗಳಿಗಲ್ಲದೆ ವಿದ್ಯಾರ್ಥಿಗಳಿಗೆ, ವೃದ್ದರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಸಾವು ನೋವು ಸಂಭವಿಸಿದ ದಿನಗಳಲ್ಲಿ ರಸ್ತೆಯಿಲ್ಲದೆ ಭಾರೀ ತೊಂದರೆ ಆಗುತ್ತಿದೆ ಎಂದು ದೂರಿದ್ದಾರೆ. ಈ ಕುರಿತಂತೆ ವಾಲ್ಮೀಕಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆರ್.ರವಿನಾಯಕ್ ಮಾತನಾಡಿ ಬೆಣಗಾಲು ಗ್ರಾಮದಲ್ಲಿರುವ ಬಹಳಷ್ಟು ಜನರು ನಾರಾಯಣಪುರದಲ್ಲಿ ಜಮೀನು ಹೊಂದಿದ್ದು ದಿನನಿತ್ಯವೂ ಹೊಲದ ಕೆಲಸಕ್ಕೆ ಓಡಾಡಲು ರಸ್ತೆಯಿಲ್ಲದೆ ನರಕ ಅನುಭವಿಸುತ್ತಿದ್ದೇವೆ.
ಈ ಬಗ್ಗೆ ತಾಲೂಕು ತಹಸೀಲ್ದಾರ್ ಮತ್ತು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ ಪರಿಣಾಮ ಸ್ಥಳ ಪರಿಶೀಲನೆ ನಡೆಸಿ ಕೂಡಲೇ ತೆರವು ಮಾಡಿಸುವಂತೆ ಆದೇಶ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಯಾವುದೇ ರೀತಿ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ ಬೆಣಗಾಲು ಗ್ರಾಮದಲ್ಲಿ ಸಾವು ಸಂಭವಿಸಿದ ಸಂದರ್ಭದಲ್ಲಿ ಸಂಸ್ಕಾರ ನಡೆಸಬೇಕಾದರೆ ನಾರಾಯಣಪುರಕ್ಕೆ ತರಬೇಕಾಗಿದೆ.

ಈಗ ಇಲ್ಲಿಗೆ ಬರಬೇಕಾದರೆ ಬೆಣಗಾಲು ಗ್ರಾಮದಿಂದ ಗಾಂಧಿನಗರ ಮಾರ್ಗವಾಗಿ ಕನಿಷ್ಟ 6 ರಿಂದ 7 ಕಿ.ಮೀ. ತೆರಳಬೇಕಾದ ಪರಿಸ್ಥಿತಿಯಿದೆ. ಇದರಿಂದ ತೊಂದರೆಯಾಗುತ್ತಿದ್ದು ಕೂಡಲೇ ೩೦ಕ್ಕೂ ಹೆಚ್ಚು ಕುಟುಂಬವಿರುವ ನಾರಾಯಣಪುರಕ್ಕೆ ಮೊದಲಿದ್ದ ರಸ್ತೆಗೆ ಹಾಕಿರುವ ಬೇಲಿಯನ್ನು ತೆರವುಗೊಳಿಸಿ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂಬುದು ಸ್ಥಳೀಯರ ಆಗ್ರಹವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications