ಹಬ್ಬದ ವಿಶೇಷ ರೈಲುಗಳ ಅವಧಿ ವಿಸ್ತರಣೆ; ರೈಲುಗಳ ಪಟ್ಟಿ
ಮೈಸೂರು, ನವೆಂಬರ್ 25: ದಸರಾ ಮತ್ತು ದೀಪಾವಳಿ ಹಬ್ಬದ ಅಂಗವಾಗಿ ಮೈಸೂರಿನಿಂದ ವಿವಿಧ ಸ್ಥಳಗಳಿಗೆ ಹಬ್ಬದ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಲಾಗಿತ್ತು. ಈ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಹಬ್ಬದ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಕೆಲವು ರೈಲುಗಳು ಡಿಸೆಂಬರ್ ತನಕ, ಮತ್ತೆ ಕೆಲವು ರೈಲುಗಳು 2021ರ ಜನವರಿ ತನಕ ಸಂಚಾರ ನಡೆಸಲಿವೆ ಎಂದು ಪ್ರಕಟಣೆ ಹೇಳಿದೆ.
ಮೈಸೂರು ನಗರದಿಂದ ಸಂಚಾರ ನಡೆಸುವ ಒಟ್ಟು 8 ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ. ಇವುಗಳಲ್ಲಿ ಪ್ರತಿದಿನ ಸಂಚಾರ ನಡೆಸುವ, ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ರೈಲುಗಳು ಸೇರಿವೆ.

ಮೈಸೂರು-ವಾರಣಾಸಿ, ಮೈಸೂರು-ಅಜ್ಮೀರ್, ಅಜ್ಮೀರ್-ಮೈಸೂರು, ವಾರಣಾಸಿ-ಮೈಸೂರು ಸೇರಿದಂತೆ ವಿವಿಧ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸಾಮಾನ್ಯ ರೈಲುಗಳು ಸಂಚಾರ ನಡೆಸುತ್ತಿಲ್ಲ. ಪ್ರಯಾಣಿಕರ ಬೇಡಿಕೆ ಇರುವ ಮಾರ್ಗದಲ್ಲಿ ಮಾತ್ರ ವಿಶೇಷ ರೈಲುಗಳನ್ನು ಭಾರತೀಯ ರೈಲ್ವೆ ಓಡಿಸುತ್ತಿದೆ. ದಸರಾ ಮತ್ತು ದೀಪಾವಳಿ ಹಬ್ಬದ ಅಂಗವಾಗಿ ದೇಶಾದ್ಯಂತ ಹಲವು ವಿಶೇಷ ರೈಲುಗಳನ್ನು ಓಡಿಸಲು ಆರಂಭಿಸಲಾಗಿತ್ತು.
ರೈಲುಗಳ ಪಟ್ಟಿ ಇಲ್ಲಿದೆ...
Passengers kindly note the extended date of Festival special express trains #mysurudivision #passengers #travel #RailParivar @SWRRLY @RailMinIndia pic.twitter.com/iO7vxrtWd1
— DRM Mysuru (@DrmMys) November 25, 2020
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications