ಮಹಿಷ ದಸರಾಗೆ ವಿರೋಧ; ಜಂಬೂ ಸವಾರಿವರೆಗೆ ಹೋರಾಟಕ್ಕೆ ತೀರ್ಮಾನ
ಮೈಸೂರು, ಸೆಪ್ಟೆಂಬರ್ 30: ಮಹಿಷ ದಸರಾ ಆಚರಣೆಗೆ ತಡೆ ಒಡ್ಡಿದ್ದನ್ನು ವಿರೋಧಿಸಿ ಮಹಿಷ ದಸರಾ ಆಚರಣಾ ಸಮಿತಿಯು ಜಂಬೂ ಸವಾರಿಯವರೆಗೆ ನಿತ್ಯ ಹೋರಾಟ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಮಾಜಿ ಮೇಯರ್ ಪುರುಷೋತ್ತಮ್ ಅವರು ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಸ್ಥಳೀಯರ ವಿರೋಧ ಇದೆ ಎಂದು ಮಹಿಷ ದಸರಾ ಆಚರಣೆಗೆ ಅವಕಾಶ ಮಾಡಿಕೊಟ್ಟಿಲ್ಲ ಎಂದಾದರೆ ನಾವೂ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿಸುತ್ತೇವೆ. ಅಲ್ಲದೆ ದಸರಾ ವಿರೋಧಿಸಿ ಪತ್ರ ಬರೆಯುತ್ತೇವೆ" ಎಂದು ಹೇಳಿದರು.
"ಮಹಿಷ ದಸರಾ ಸಮಿತಿಯವರನ್ನು ಸರ್ಕಾರ ಚರ್ಚೆಗೆ ಕರೆಯಬೇಕು. ಇಲ್ಲದಿದ್ದರೆ ಜಂಬೂ ಸವಾರಿ ದಿನವೂ ಪ್ರತಿಭಟನೆ ನಡೆಸುತ್ತೇವೆ. ಇಂಗ್ಲಿಷ್ ನಲ್ಲಿ "ಇಲ್ಲಿ ಅಸ್ಪೃಶ್ಯತೆ ಆಚರಿಸಲಾಗುತ್ತಿದೆ" ಎಂದು ಕರ ಪತ್ರ ಮುದ್ರಿಸಿ ವಿದೇಶೀ ಪ್ರವಾಸಿಗರಿಗೆ ಹಂಚುತ್ತೇವೆ. ಸಚಿವ ವಿ ಸೋಮಣ್ಣ ಅವರೊಂದಿಗೆ ಚರ್ಚೆಗೆ ಸಮಯ ಕೋರಿದ್ದಕ್ಕೆ ತಿರಸ್ಕರಿಸಿದ್ದಾರೆ. ನಾವೇನೂ ಹರಟೆ ಹೊಡೆಯಲು ಸಮಯ ಕೇಳಿಲ್ಲ" ಎಂದರು.

ಸಚಿವ ಸಿ.ಟಿ. ರವಿ ಅವರು ತಮ್ಮನ್ನು ಮಾನಸಿಕ ಅಸ್ವಸ್ಥರು ಎಂದು ಟೀಕಿಸಿದ್ದಕ್ಕೆ ಉತ್ತರಿಸಿದ ಅವರು, "ರವಿ ಅವರೇ ಮಾನಸಿಕ ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ನಾವು ಹಣ ನೀಡುತ್ತೇವೆ" ಎಂದು ಲೇವಡಿ ಮಾಡಿದರು. ಅವರ, "ಇಂದು ಮಹಿಷ, ಮುಂದೆ ನಕ್ಸಲರ ಹಬ್ಬವನ್ನೂ ಆಚರಿಸುತ್ತಾರೆ" ಎಂಬ ಹೇಳಿಕೆಯನ್ನು ಖಂಡಿಸಿ, "ಶೂದ್ರರಾಗಿರುವ ರವಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಗತಿಪರರು ಮತ್ತು ಶೂದ್ರರೇ ಕಾರಣ" ಎಂದರು. ದಲಿತ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಮಾತನಾಡಿ, "ಸಂಸದ ಸಿಂಹ ಅವರು ಪೊಲೀಸರನ್ನೇ ನಿಂದಿಸಿ, ಅವರ ರಕ್ಷಣೆಯಲ್ಲೇ ಸಂಸದರು ದಸರಾ ಹಬ್ಬ ಉದ್ಘಾಟಿಸಿರುವುದು ನಾಚಿಕೆಗೇಡು" ಎಂದು ಟೀಕಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications