ಚಾಮುಂಡಿ ಬೆಟ್ಟದ ಕಪ್ಪು ನಂದಿಯು ಬಿಳಿಯಾಗಿದ್ದು ಹೇಗೆ?
ಮೈಸೂರು, ಅಕ್ಟೋಬರ್ 5 : ಚಾಮುಂಡಿ ಬೆಟ್ಟ ಎಂದ ಕೂಡಲೇ ಥಟ್ಟನೆ ನೆನಪಾಗೋದೇ ತಾಯಿ ಚಾಮುಂಡಿ ಹಾಗೂ ಮಂಡಿಯೂರಿ ಕುಳಿತ ಕಪ್ಪು ಬಣ್ಣದ ನಂದಿ. ಎರಡೂ ಕಡೆ ದರ್ಶನ ಪಡೆಯದಿದ್ದರೆ ಮೈಸೂರಿಗೆ ಬಂದದ್ದೆ ವ್ಯರ್ಥವೆನಿಸುತ್ತದೆ. ಆದರೆ ಈಗ ಅಚ್ಚರಿ ಎನಿಸುವಂತೆ ಶತಮಾಗಳಷ್ಟು ಹಳೆಯದಾದ ಈ ಕಪ್ಪು ಬಣ್ಣದ ನಂದಿಯೂ ಬಿಳಿ ಬಣ್ಣಕ್ಕೆ ಪರಿವರ್ತನೆಯಾಗಿದೆ.
ಚಾಮುಂಡಿ ಬೆಟ್ಟದ ಮಧ್ಯ ಭಾಗದಲ್ಲಿ ಮಂಡಿಯೂರಿ ಕುಳಿತ ಬೃಹತ್ ಗಾತ್ರದ ಕಪ್ಪು ನಂದಿ ವಿಗ್ರಹ ಈಗ ಬಿಳಿ ನಂದಿ ವಿಗ್ರಹವಾಗಿದೆ. ವಿಗ್ರಹ ಯಾವ ಬಣ್ಣದಲ್ಲಿದೆ ಅಂತ ಕೇಳಿದರೆ ಬಹುತೇಕರ ಉತ್ತರ ಕಪ್ಪು ಎಂದೇ ಇರುತ್ತದೆ. ಏಕೆಂದರೆ, ದಶಕಗಳಿಂದ ಈ ವಿಗ್ರಹ ಇರುವುದು ಕಪ್ಪು ಬಣ್ಣದಲ್ಲಿ. ಹೀಗಾಗಿ ಬೆಟ್ಟದ ನಂದಿಯ ಯಾವುದೇ ಫೋಟೋ ನೋಡಿದರೂ ಅದು ಕಪ್ಪು ಬಣ್ಣದಲ್ಲೇ ಇದೆ. ಆದರೆ ಇಂತಹ ನಂದಿಯ ಬಣ್ಣ ಈಗ ಬಿಳಿ ಬಣ್ಣಕ್ಕೆ ಬದಲಾಗಿದೆ.

ಈ ವಿಗ್ರಹದ ಮೂಲ ಬಣ್ಣ ಬಿಳಿ. ಆದರೆ ಎಣ್ಣೆ ಮಜ್ಜನ ಮಾಡಿಸಿ, ಈ ವಿಗ್ರಹ ಮೂಲ ಬಣ್ಣವನ್ನು ಕಳೆದುಕೊಂಡು ಕಪ್ಪಾಗಿತ್ತು. ಈ ನಂದಿ ವಿಗ್ರಹಕ್ಕೆ ಸುಮಾರು 350 ವರ್ಷಗಳ ಇತಿಹಾಸ ಇದೆ. ನಂದಿ ವಿಗ್ರಹ 16 ಅಡಿ ಎತ್ತರ ಹಾಗೂ 24 ಅಡಿ ಅಗಲವಿದೆ. ಇದು ದೇಶದ ಮೂರನೇ ಅತಿ ಎತ್ತರದ ನಂದಿ ವಿಗ್ರಹವಾಗಿದೆ.

1659ರಲ್ಲಿ ಯದುವಂಶದ ದೊಡ್ಡ ದೇವರಾಜ ಒಡೆಯರ್ ಅವರು ಈ ವಿಗ್ರಹ ಪ್ರತಿಷ್ಠಾಪಿಸಿದ್ದರು. ಕಳೆದ ನಾಲ್ಕೈದು ದಶಕಗಳಿಂದ ಜನತೆ ಕಪ್ಪು ನಂದಿಯನ್ನು ನೋಡಿದ್ದರು. ಇದೀಗ ಧಾರ್ಮಿಕ ದತ್ತಿ ಇಲಾಖೆಯವರು ನಂದಿ ವಿಗ್ರಹವನ್ನು ರಾಸಾಯನಿಕದಿಂದ ಸ್ವಚ್ಛಗೊಳಿಸಿರುವುದರಿಂದ ನಂದಿ ವಿಗ್ರಹ ಸಂಪೂರ್ಣ ಬೆಳ್ಳಗಾಗಿದೆ. ಮೂಲ ರೂಪಕ್ಕೆ ಬಂದಿರುವ ನಂದಿಯನ್ನು ನೋಡಲು ಜನರು ಮುಗಿಬಿದ್ದಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications