ಟಿಪ್ಪುರಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದಿದ್ದ ಅಶ್ವತ್ಥ ನಾರಾಯಣ್ ವಿರುದ್ಧ ಎಫ್ಐಆರ್
ಮೈಸೂರು, ಮೇ. 25: ಮೂರು ತಿಂಗಳ ಹಿಂದೆ ಅಂದರೆ ಕಳೆದ ಫೆಬ್ರವರಿಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ.
ಫೆಬ್ರವರಿ 15 ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ್ , ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನರನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ಅವರು ಅಶ್ವತ್ಥ ನಾರಾಯಣ್ ಹೇಳಿಕೆ ನೀಡಿದ ದಿನವೇ ದೂರು ನೀಡಿದ್ದರು. ಆದರೆ, ಆ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆಗ ಬಿಜೆಪಿ ಸರ್ಕಾರವಿತ್ತು. ಬುಧವಾರ ಮತ್ತೆ ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಅಶ್ವತ್ಥ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಅವರನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಮಾಜಿ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 153 (ಗಲಬೆ ಉಂಟು ಮಾಡಲು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂದು ಅಶ್ವಥ್ ನಾರಾಯಣ್ ಹೇಳಿದ್ದೇನು..?
ಮಂಡ್ಯದ ಸಾತನೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅಶ್ವಥ್ ನಾರಾಯಣ್ , 'ಟಿಪ್ಪುವಿನ ಮಗ ಸಿದ್ದರಾಮಯ್ಯ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಅಥವಾ ಸಾವರ್ಕರ್..? ನಾವು ಟಿಪ್ಪು ಸುಲ್ತಾನ್ ಅನ್ನು ಎಲ್ಲಿಗೆ ಕಳುಹಿಸಬೇಕು..? ಉರಿಗೌಡ ಮತ್ತು ನಂಜೇಗೌಡರು ಏನು ಮಾಡಿದರು..? ಅದೇ ರೀತಿಯಲ್ಲಿ ಅವರನ್ನು ಹೊಡೆದು ಹಾಕಬೇಕು' ಎಂದಿದ್ದರು.
ಇದಕ್ಕೆಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, 'ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಟಿಪ್ಪುವನ್ನು ಕೊಂದ ರೀತಿಯಲ್ಲಿಯೇ ನನ್ನನ್ನೂ ಸಾಯಿಸಿ ಎಂದು ಮನವಿ ಮಾಡಿದ್ದಾರೆ. ಅಶ್ವಥ್ ನಾರಾಯಣ್, ಜನರನ್ನು ಪ್ರಚೋದಿಸಲು ಏಕೆ ಪ್ರಯತ್ನಿಸುತ್ತಿದ್ದೀರಿ? ನೀವೇ ಬಂದೂಕು ತೆಗೆದುಕೊಳ್ಳಿ. ಈ ಬಗ್ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೌನವಾಗಿದ್ದಾರೆ. ಅಶ್ವಥ್ ನಾರಾಯಣ ಹೇಳಿಕೆಗೆ ಅವರ ಸಮ್ಮತಿ ಇದೆ ಎಂಬುದನ್ನು ಇದು ತೋರಿಸುತ್ತದೆ' ಎಂದು ಹೇಳಿದ್ದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications