ಮೈಸೂರಿನ ಅರಮನೆ ದ್ವಾರದ ಆವರಣದಲ್ಲಿ ಬೆಂಕಿ
ಇಂದು ಬೆಳ್ಳಂಬೆಳಿಗ್ಗೆ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದ ವರಾಹ ದ್ವಾರದಲ್ಲಿರುವ ಟಿಕೇಟ್ ಕೌಂಟರ್ ಬಳಿ ಬೆಂಕಿ ಆವರಿಸಿ ಟಿಕೇಟ್ ಕೌಂಟರ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಮೈಸೂರು, ಮೇ 12: ಇಂದು ಬೆಳ್ಳಂಬೆಳಿಗ್ಗೆ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದ ವರಾಹ ದ್ವಾರದಲ್ಲಿರುವ ಟಿಕೇಟ್ ಕೌಂಟರ್ ಬಳಿ ಬೆಂಕಿ ಆವರಿಸಿ ಟಿಕೇಟ್ ಕೌಂಟರ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಅರಮನೆಯ ಕೆಲವು ದಾಖಲೆಗಳು ಸಂಪೂರ್ಣ ಸುಟ್ಟುಹೋಗಿದ್ದು, ಸ್ಥಳದಲ್ಲಿದ್ದವರು ಬೆಂಕಿಯನ್ನು ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ರವಾನಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು. [ಮೈಸೂರು ಅರಮನೆ ಆವರಣದಲ್ಲಿ ಗುಡಿ ಮೇಲುರುಳಿದ ಮರ ]

ಅಗ್ನಿ ದುರಂತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅರಮನೆ ಎಸಿಪಿ ಶೈಲೇಂದ್ರ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಅರಮನೆಗೆ ಬೆಂಕಿ ಬಿದ್ದಿತ್ತ. ಅದರ ನಂತರ ಸಂಭವಿಸಿದ ಎರಡನೇ ಅಗ್ನಿ ದುರಂತ ಇದಾಗಿದೆ. ಇದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.












Click it and Unblock the Notifications