ನಾಗರಹೊಳೆ ಬಳಿಯ ಅರಣ್ಯ ಬೆಂಕಿಗಾಹುತಿ: ತಪ್ಪಿದ ಭಾರೀ ಅನಾಹುತ
ಮೈಸೂರು, ಫೆಬ್ರವರಿ 22: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ನಾಗರಹೊಳೆ ಉದ್ಯಾನದಂಚಿನ ಸುಮಾರು 18 ಎಕರೆ ಪ್ರದೇಶ ಅಗ್ನಿಗಾಹುತಿಯಾಗಿರುವ ಘಟನೆ ತಾಲೂಕಿನ ಕೆ.ಜಿ.ಹಬ್ಬನಕುಪ್ಪೆಯ ತರಗನ್ ಎಸ್ಟೇಟ್ನಲ್ಲಿ ನಡೆದಿದ್ದು, ಸ್ವಲ್ಪ ಎಚ್ಚರ ತಪ್ಪಿದ್ದರೂ ಸಮೀಪದ ನಾಗರಹೊಳೆ ಅರಣ್ಯ ಪ್ರದೇಶ ಅಗ್ನಿಗಾಹುತಿಯಾಗುವ ಸಂಭವವಿತ್ತು.
ಅಗ್ನಿ ಅನಾಹುತ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ನಾಗರಹೊಳೆ ವನ್ಯಜೀವಿ ವಿಭಾಗದ ಸಿಎಫ್ ನಾರಾಯಣಸ್ವಾಮಿ, ಆರ್ಎಫ್ಓ ಸುರೇಂದ್ರರ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಯ ಸಹಕಾರದಿಂದ ಬೆಂಕಿಯನ್ನು ನಂದಿಸುವಲ್ಲಿ ಹಾಗೂ ಮುಂದೆ ಆಗಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ ಮಧ್ಯಾಹ್ನ 3 ಗಂಟೆಯ ಸಮಯದಲ್ಲಿ ಬಿಲ್ಲೇನಹೊಸಳ್ಳಿ ರಸ್ತೆ ಬದಿಯ ಎಸ್ಟೇಟ್ ಬಳಿ ಕಿಡಿಗೇಡಿಗಳು ಬೆಂಕಿ ಹಾಕಿದ್ದು ಅದು ಗಾಳಿಯ ವೇಗಕ್ಕೆ ಸಿಲುಕಿ ಇತರೆಡೆಗೂ ಹಬ್ಬಿದ್ದು, ನೋಡು ನೋಡುತ್ತಿದ್ದಂತೆ ಹತ್ತಾರು ಎಕರೆ ಪ್ರದೇಶವನ್ನು ಆವರಿಸಿಕೊಂಡು ಉರಿದಿದ್ದು, ಇದರಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದೆ.
ಮೂರು ಗಂಟೆಯ ಕಾರ್ಯಾಚರಣೆ
ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಟವರ್ನಲ್ಲಿದ್ದ ಫೈರ್ವಾಚರ್ ಮಾಹಿತಿ ನೀಡುತ್ತಿದ್ದಂತೆ ನಾಗರಹೊಳೆ ಸಿ.ಎಫ್, ನಾರಾಯಣಸ್ವಾಮಿ, ಎ.ಸಿ.ಎಫ್ ಪ್ರಸನ್ನಕುಮಾರ್, ಆರ್.ಎಫ್.ಓ. ಸುರೇಂದ್ರ ಸ್ಥಳಕ್ಕೆ ದೌಡಾಯಿಸಿ 100 ಕ್ಕೂ ಹೆಚ್ಚು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ, ಆರ್.ಆರ್.ಟಿ ವಾಹನ, ಬೆಂಕಿ ನಂದಿಸುವ ಪರಿಕರಗಳೊಂದಿಗೆ ಸಿಬ್ಬಂದಿಗಳನ್ನು ಕರೆಯಿಸಿ ಹರ ಸಾಹಸ ಮಾಡಿ ಸತತ ಮೂರುಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ನಮ್ಮ ಎಸ್ಟೇಟ್ಗೆ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಕಂಗಾಲಾಗಿದ್ದೆವು, ಮಾಹಿತಿ ತಿಳಿದು ಅರಣ್ಯ ಇಲಾಖೆ ತಕ್ಷಣವೇ ಸ್ಪಂದಿಸಿ, ಸಿಬ್ಬಂದಿ ಸಮೇತ ವಾಹನಗಳೊಂದಿಗೆ ಆಗಮಿಸಿ ಬೆಂಕಿ ನಂದಿಸಿದ್ದರಿಂದ ನಮ್ಮ ಎಸ್ಟೇಟ್ ಹಾಗೂ ಪಕ್ಕದ ಅರಣ್ಯ ಪ್ರದೇಶಕ್ಕೆ ಬೆಂಕಿ ಹರಡುವುದು ತಪ್ಪಿದ್ದಾಗಿ ಎಸ್ಟೇಟ್ನ ಮಾಲೀಕರು ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications