ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಕಾಡು ಪ್ರಾಣಿಗಳ ಬೇಟೆಗೆ ಸಿಡಿಮದ್ದು ಇಟ್ಟ ಕಿಡಿಗೇಡಿಗಳು

|
Google Oneindia Kannada News

ಮೈಸೂರು, ಜುಲೈ 21: ಕಾಡಂಚಿನ ಜಮೀನಿನಲ್ಲಿ ಮೇಯಲು ಬಂದ ಹಸುವಿನ ಬಾಯಿಗೆ ಸಿಡಿಮದ್ದು ಸಿಕ್ಕು ಸ್ಪೋಟಗೊಂಡಿದ್ದರಿಂದ ಮುಖ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

Recommended Video

Elephant : ಈ ಆನೆಯ ಕೋಪ ನೋಡಿದ್ರೆ ಭಯ ಆಗುತ್ತೆ | Angry Elephant found in Bandipur National Park | Oneindia Kannada

ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಸಿಡಿಮದ್ದು ಇಡುತ್ತಿದ್ದು, ಹಸುವಿನ ಬಾಯಿಯಲ್ಲಿ ಸಿಡಿಮದ್ದು ಸ್ಪೋಟಗೊಂಡಿರುವ ಕಾರಣ ರಾಸು ಜೀವನ್ಮರಣದ ಜೊತೆ ಹೋರಾಡುತ್ತಿದೆ.

ಎಚ್.ಡಿ.ಕೋಟೆ; 3 ದಿನಗಳ ನಂತರ ಬಾವಿಯಿಂದ ಚಿರತೆಗೆ ಸಿಕ್ಕಿತು ಮುಕ್ತಿಎಚ್.ಡಿ.ಕೋಟೆ; 3 ದಿನಗಳ ನಂತರ ಬಾವಿಯಿಂದ ಚಿರತೆಗೆ ಸಿಕ್ಕಿತು ಮುಕ್ತಿ

ಎಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ಘಟನೆ ನಡೆದಿದ್ದು, ಮೂಕ ಪ್ರಾಣಿಯ ರೋಧನೆ ಕಂಡು, ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿಪ್ರಿಯರು ಹಿಡಿಶಾಪ ಹಾಕುತ್ತಿದ್ದಾರೆ.

 Mysuru: Fireworks For Hunting Wild Animals In HD Kote

ಬೆಟ್ಟದಬೀಡು ಗ್ರಾಮದ ನರಸಿಂಹೇಗೌಡರಿಗೆ ಸೇರಿದ ರಾಸು, ಕಾಡಂಚಿನ ಜಮೀನಿನಲ್ಲಿ ಮೇಯಲು ಹೋಗಿದ್ದರಿಂದ ಹಸುವಿನ ಬಾಯಿಗೆ ಸಿಡಿಮದ್ದು ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ನಿರಂತರ ಗಸ್ತಿನಲ್ಲಿದ್ದಿದ್ದರೇ ಇಂತಹ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

100 ಅಡಿ ಬಾವಿಯಲ್ಲಿ ಚಿರತೆ ಪತ್ತೆ: ಸೆರೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ100 ಅಡಿ ಬಾವಿಯಲ್ಲಿ ಚಿರತೆ ಪತ್ತೆ: ಸೆರೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ

ಕಾಡಂಚಿನ ಗ್ರಾಮಗಳತ್ತ ಅರಣ್ಯ ಇಲಾಖೆ ಸಿಬ್ಬಂದಿಯ ಸುಳಿವಿಲ್ಲ, ಕಳ್ಳ ಬೇಟೆಗಾರ ತಡೆಗೆ ಗಸ್ತು ಹೆಚ್ಚಿಸುವಂತೆ ಗ್ರಾಮಸ್ಥರ ಆಗ್ರಹವಾಗಿದೆ.

English summary
Mysuru: People Using Fireworks For Hunting wild animals in HD Kote. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X