Breaking: ಮೈಸೂರಿನ ಚಿನ್ನಾಭರಣ ಅಂಗಡಿಯಲ್ಲಿ ಫೈರಿಂಗ್: ಓರ್ವ ಸಾವು
ಮೈಸೂರು, ಆಗಸ್ಟ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡಹಗಲೇ ನಡೆದ ಗುಂಡಿನ ಮೊರೆತ ಜನರನ್ನು ಬೆಚ್ಚಿ ಬೀಳಿಸಿದ್ದು, ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.
ದರೋಡೆಕೋರರು ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಕಳ್ಳತನಕ್ಕೆ ಬಂದಿದ್ದರು. ಮೂವರು ದರೋಡೆಕೋರರ ತಂಡ ಹಾಡಹಗಲೇ ಈ ದುಷ್ಕೃತ್ಯ ನಡೆಸಿದೆ.
ಬೈಕ್ನಲ್ಲಿ ಬಂದು ದಿಢೀರ್ ಪ್ರತ್ಯಕ್ಷರಾದ ಮೂವರು ಚಿನ್ನ, ಬೆಳ್ಳಿ ಕದಿಯಲು ಮುಂದಾಗಿದ್ದಾರೆ. ಈ ವೇಳೆ ಚಿನ್ನಾಭರಣ ಅಂಗಡಿ ಮಾಲೀಕ ಧರ್ಮೇಂದ್ರ ಕಳ್ಳರನ್ನು ತಡೆಯಲು ಮುಂದಾಗಿದ್ದಾನೆ.

ಆಗ ಧರ್ಮೇಂದ್ರನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಗುಂಡಿನ ಏಟಿಗೆ ಆತ ಅಂಗಡಿಯಲ್ಲೆ ಕುಸಿದು ಬಿದ್ದಿದ್ದಾನೆ. ಜ್ಯೂವೆಲ್ಲರಿ ಅಂಗಡಿಯಿಂದ ಹೋಗುವಾಗ ಅಲ್ಲೆ ರಸ್ತೆಯಲ್ಲಿ ನಿಂತಿದ್ದ ದಡದಹಳ್ಳಿ ಗ್ರಾಮದ ಚಂದ್ರು ಮೇಲೆ ಕೂಡ ಶೂಟ್ ಔಟ್ ಮಾಡಿದ್ದಾರೆ. ಗುಂಡು ಆತನನ್ನು ಸೀಳಿದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಚಿನ್ನಾಭರಣ ಅಂಗಡಿ ಮಾಲೀಕ ಧರ್ಮೇಂದ್ರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿಪಿ ಗೀತಾ ಪ್ರಸನ್ನ ಹಾಗೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ವಾನ ದಳ ಅಲ್ಲೇ ಸುತ್ತಾಡಿದರೂ ದರೋಡೆಕೋರರು ಇದ್ದ ಸ್ಥಳ ಯಾವುದೆಂದು ಪತ್ತೆಯಾಗಲಿಲ್ಲ. ಶ್ವಾನ ವಾಸನೆ ಹಿಡಿದು ಅಲ್ಲೆ ಓಡಾಡುವುದನ್ನು ನೋಡಿದರೆ ದರೋಡೆಕೋರರು ಅಟ್ಯಾಕ್ ಮಾಡಲು ವಾಚ್ ಮಾಡುತ್ತಿರುವುದು ಸ್ಪಷ್ಟವಾಗಿದೆ.

ಹಾಡಹಗಲೆ ನಡೆದ ಶೂಟೌಟ್ನಿಂದ ಮೈಸೂರಿನ ಜನರು ಸಹಜವಾಗಿಯೇ ಬೆಚ್ಚಿ ಬಿದ್ದಿದ್ದಾರೆ. ಇನ್ನು ಮೈಸೂರಲ್ಲಿ ಈ ರೀತಿಯ ಕ್ರೈಂ ಇತ್ತೀಚಿನ ವರ್ಷಗಳಲ್ಲಿ ನಡೆದಿರಲಿಲ್ಲ. ಆದರೆ ಸೋಮವಾರ ನಡೆದಿರುವ ಘಟನೆಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications