ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮೈಸೂರಿನ ಚಿನ್ನಾಭರಣ ಅಂಗಡಿಯಲ್ಲಿ ಫೈರಿಂಗ್: ಓರ್ವ ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಾಡಹಗಲೇ ನಡೆದ ಗುಂಡಿನ ಮೊರೆತ ಜನರನ್ನು ಬೆಚ್ಚಿ ಬೀಳಿಸಿದ್ದು, ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.

ದರೋಡೆಕೋರರು ಮೈಸೂರಿನ ವಿದ್ಯಾರಣ್ಯಪುರಂ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಚಿನ್ನಾಭರಣ ಅಂಗಡಿಗೆ ಕಳ್ಳತನಕ್ಕೆ ಬಂದಿದ್ದರು. ಮೂವರು ದರೋಡೆಕೋರರ ತಂಡ ಹಾಡಹಗಲೇ ಈ ದುಷ್ಕೃತ್ಯ ನಡೆಸಿದೆ.

ಬೈಕ್‌ನಲ್ಲಿ ಬಂದು ದಿಢೀರ್ ಪ್ರತ್ಯಕ್ಷರಾದ ಮೂವರು ಚಿನ್ನ, ಬೆಳ್ಳಿ ಕದಿಯಲು ಮುಂದಾಗಿದ್ದಾರೆ. ಈ ವೇಳೆ ಚಿನ್ನಾಭರಣ ಅಂಗಡಿ ಮಾಲೀಕ ಧರ್ಮೇಂದ್ರ ಕಳ್ಳರನ್ನು ತಡೆಯಲು ಮುಂದಾಗಿದ್ದಾನೆ.

Mysuru: Robbers Firing At A Jewellery Shop: One Person Death On The Spot

ಆಗ ಧರ್ಮೇಂದ್ರನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಗುಂಡಿನ ಏಟಿಗೆ ಆತ ಅಂಗಡಿಯಲ್ಲೆ ಕುಸಿದು ಬಿದ್ದಿದ್ದಾನೆ. ಜ್ಯೂವೆಲ್ಲರಿ ಅಂಗಡಿಯಿಂದ ಹೋಗುವಾಗ ಅಲ್ಲೆ ರಸ್ತೆಯಲ್ಲಿ ನಿಂತಿದ್ದ ದಡದಹಳ್ಳಿ ಗ್ರಾಮದ ಚಂದ್ರು ಮೇಲೆ ಕೂಡ ಶೂಟ್ ಔಟ್ ಮಾಡಿದ್ದಾರೆ. ಗುಂಡು ಆತನನ್ನು ಸೀಳಿದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನು ಚಿನ್ನಾಭರಣ ಅಂಗಡಿ ಮಾಲೀಕ ಧರ್ಮೇಂದ್ರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿಪಿ ಗೀತಾ ಪ್ರಸನ್ನ ಹಾಗೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Mysuru: Robbers Firing At A Jewellery Shop: One Person Death On The Spot

ಶ್ವಾನ ದಳ ಅಲ್ಲೇ ಸುತ್ತಾಡಿದರೂ ದರೋಡೆಕೋರರು ಇದ್ದ ಸ್ಥಳ ಯಾವುದೆಂದು ಪತ್ತೆಯಾಗಲಿಲ್ಲ. ಶ್ವಾನ ವಾಸನೆ ಹಿಡಿದು ಅಲ್ಲೆ ಓಡಾಡುವುದನ್ನು ನೋಡಿದರೆ ದರೋಡೆಕೋರರು ಅಟ್ಯಾಕ್ ಮಾಡಲು ವಾಚ್ ಮಾಡುತ್ತಿರುವುದು ಸ್ಪಷ್ಟವಾಗಿದೆ.

Mysuru: Robbers Firing At A Jewellery Shop: One Person Death On The Spot

ಹಾಡಹಗಲೆ ನಡೆದ ಶೂಟೌಟ್‌ನಿಂದ ಮೈಸೂರಿನ ಜನರು ಸಹಜವಾಗಿಯೇ ಬೆಚ್ಚಿ ಬಿದ್ದಿದ್ದಾರೆ. ಇನ್ನು ಮೈಸೂರಲ್ಲಿ ಈ ರೀತಿಯ ಕ್ರೈಂ ಇತ್ತೀಚಿನ ವರ್ಷಗಳಲ್ಲಿ ನಡೆದಿರಲಿಲ್ಲ. ಆದರೆ ಸೋಮವಾರ ನಡೆದಿರುವ ಘಟನೆಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

English summary
Robbers firing at a Jewellery shop in Mysuru, One person death on the spot
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X