Breaking; ಮೈಸೂರು ಜಿಲ್ಲೆಯ ಗ್ರಾಮವೊಂದರಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ?
ಮೈಸೂರು, ಅಕ್ಟೋಬರ್, 13; ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ನಾಲ್ಕು ತಿಂಗಳ ನಂತರ ಮೈಸೂರಿನಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಮಾದರಿ ವರದಿ ಆಗಿದೆ. ಜಿಲ್ಲೆಯ ಕೆ.ಆರ್ ನಗರದ ಗ್ರಾಮವೊಂದರ 12 ವರ್ಷದ ಬಾಲಕಿಯ ದೇಹದ ಮೇಲೆ ಬೊಬ್ಬೆಗಳು ಕಂಡಿವೆ. ಚಿಕಿತ್ಸೆ ಕೊಡಿಸಿದರೂ ಗುಣವಾಗದ ಹಿನ್ನೆಲೆ ಆಕೆಯನ್ನು ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಾಲಕಿಯ ದೇಹದಲ್ಲಿ ಬೊಬ್ಬೆಗಳು ಇರುವುದನ್ನು ಗಮನಿಸಿಲಾಗಿದ್ದು, ಆಗ ಮಂಕಿಪಾಕ್ಸ್ ಗುಣಲಕ್ಷಣ ಕಂಡು ಬಂದಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗಮನಕ್ಕೆ ತಂದಿದ್ದಾರೆ. ಮೈಸೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಎಲ್ಲೆಡೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಮೈಸೂರಿಗರಿಗೆ ಮಂಕಿಪಾಕ್ಸ್ ವೈರಸ್ ಆತಂಕ?
ಜಿಲ್ಲೆಯಲ್ಲಿರುವ ಆಸ್ಪತ್ರೆ, ಕ್ಲಿನಿಕ್ ಹಾಗೂ ಮಕ್ಕಳ ಆಸ್ಪತ್ರೆಗೆ ಈ ಕಾಯಿಲೆ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಮಂಕಿಪಾಕ್ಸ್ ಗುಣಲಕ್ಷಣಗಳು ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ''ಬಾಲಕಿಯೋರ್ವಳನ್ನು ಕ್ವಾರಂಟೈನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಯಾವುದೇ ರೀತಿಯ ತೊಂದರೆ ಇಲ್ಲ,'' ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ತಿಳಿಸಿದರು.

ಮಂಕಿಪಾಕ್ಸ್ ವೈರಸ್ನ ಲಕ್ಷಣಗಳು?
ಬಾಲಕಿಯನ್ನು ಪರಿಶೀಲಿಸಿದ ವೈದ್ಯರು ಮಂಕಿಪಾಕ್ಸ್ ಮಾದರಿ ಗುಣ ಲಕ್ಷಣಗಳು ಇರುವುದನ್ನು ಗಮನಿದ್ದಾರೆ. ನಂತರ ಆರೋಗ್ಯ ಇಲಾಖೆಗೆ ಈ ವಿಷಯವನ್ನು ತಿಳಿಸಿದ್ದಾರೆ. ಇಲಾಖೆಯವರು ಬಾಲಕಿಯ ದೇಹದ ರಕ್ತ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿನ ನಿಮ್ಹಾನ್ಸ್ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಮಂಕಿಪಾಕ್ಸ್ ಒಂದು ವೈರಸ್ನಿಂದ ಹರಡುವ ಕಾಯಿಲೆ ಆಗಿದ್ದು, ಸಕಾಲಕ್ಕೆ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದು. ಇದು ಜ್ವರ, ಮುಖ, ಕೈ ಪಾದದ ಮೇಲೆ ಗುಳ್ಳೆಗಳು ಕಾಣಿಸಿಕೊಂಡು ದೇಹದ ಇತರ ಭಾಗಕ್ಕೆ ಹರಡುತ್ತವೆ. ಸೋಂಕಿತ ಪ್ರಾಣಿಗಳ ನಿಕಟ ಸಂಪರ್ಕದಿಂದಲೂ ಮಂಕಿಪಾಕ್ಸ್ ಹರಡಲಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications